AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meeting: ತೆರಿಗೆ ಹೆಚ್ಚಳ ಇಲ್ಲ, ಅಪರಾಧ ನಿಯಮ ತುಸು ಸಡಿಲ; ಜಿಎಸ್​ಟಿ ಮಂಡಳಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್

ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸರಕು ಮತ್ತು ಸೇವಾ ತೆರಿಗೆ (GST) ಮಂಡಳಿಯ 48ನೇ ಸಭೆಯ ಬಳಿಕ ನಿರ್ಮಲಾ ಸೀತಾರಾಮನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

GST Council Meeting: ತೆರಿಗೆ ಹೆಚ್ಚಳ ಇಲ್ಲ, ಅಪರಾಧ ನಿಯಮ ತುಸು ಸಡಿಲ; ಜಿಎಸ್​ಟಿ ಮಂಡಳಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)Image Credit source: PTI
TV9 Web
| Edited By: |

Updated on:Dec 17, 2022 | 5:07 PM

Share

ನವದೆಹಲಿ: ಆನ್​ಲೈನ್ ಗೇಮಿಂಗ್​ (Online Gaming) ಮೇಲಿನ ತೆರಿಗೆ ಮಿತಿ ಹೆಚ್ಚಳ ಸೇರಿದಂತೆ ಪ್ರಮುಖ ಅಜೆಂಡಾಗಳ ಬಗ್ಗೆ ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ (GST) ಮಂಡಳಿಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಿಳಿಸಿದರು. ಜಿಎಸ್​ಟಿ ಮಂಡಳಿಯ 48ನೇ ಸಭೆ ಮುಕ್ತಾಯಗೊಂಡ ಬಳಿಕ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿಯ ಸಭೆಯಲ್ಲಿ ಯಾವುದೇ ರೀತಿಯ ತೆರಿಗೆ ಹೆಚ್ಚಳದ ನಿರ್ಧಾರ ಕೈಗೊಂಡಿಲ್ಲ. ಹೊಸದಾಗಿ ಯಾವುದೇ ವಸ್ತುವಿನ ಮೇಲೆ ತೆರಿಗೆ ವಿಧಿಸಿಲ್ಲ. ಕೇವಲ ಸ್ಪಷ್ಟೀಕರಣ ನೀಡಲು ಒತ್ತು ನೀಡಲಾಗಿದೆ ಮತ್ತು ಜಿಎಸ್​ಟಿ ಅಪರಾಧಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಮಾತ್ರ ತುಸು ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು. ತಂಬಾಕು ಮತ್ತು ಗುಟ್ಖಾ ಮೇಲಿನ ತೆರಿಗೆ ಬಗ್ಗೆ ಚರ್ಚಿಸಲು ಸಮಯದ ಅಭಾವದ ಕಾರಣ ಈ ಸಭೆಯಲ್ಲಿ ಸಾಧ್ಯವಾಗಿಲ್ಲ. ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬಳಿಕ ಮಾತನಾಡಿದ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರ, ಜಿಎಸ್​ಟಿ ಕಾನೂನಿನ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗಿರುವ ಕೆಲವು ನಿಯಮಗಳಲ್ಲಿ ತುಸು ಸಡಿಲಿಕೆ ಮಾಡಲಾಗಿದೆ. ನಕಲಿ ಇನ್​ವಾಯ್ಸ್ ಸಲ್ಲಿಸುವುದನ್ನು ಹೊರತುಪಡಿಸಿದಂತೆ ಇತರ ಅಪರಾಧಗಳ ಮೇಲಿನ ಕಾನೂನು ಕ್ರಮ ಕೈಗೊಳ್ಳುವ ಮಿತಿಯನ್ನು 1 ಕೋಟಿ ರೂ.ನಿಂದ 2 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಪಶು ಆಹಾರ ತಯಾರಿಕಾ ವಲಯದ ಬೇಡಿಕೆ ಗಮನದಲ್ಲಿಟ್ಟುಕೊಂಡು ಬೇಳೆಕಾಳುಗಳ ಸಿಪ್ಪೆಯ ಮೇಲೆ ವಿಧಿಸಲಾಗುತ್ತಿದ್ದ ಶೇಕಡಾ 5ರ ಜಿಎಸ್​ಟಿಯನ್ನು ರದ್ದುಪಡಿಸಲಾಗಿದೆ ಎಂದೂ ಅವರು ತಿಳಿಸಿದರು. ವೈದ್ಯಕೀಯ, ಆರೋಗ್ಯ ವಿಮೆಯ ನೋಕ್ಲೇಮ್ ಬೋನಸ್​​ ಮೇಲೆ ಯಾವುದೇ ರೀತಿಯ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Union Budget 2023: ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್; ನಿರ್ಮಲಾ ಸೀತಾರಾಮನ್

ಈ ಬಾರಿಯ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಆನ್​ಲೈನ್​ ಗೇಮಿಂಗ್ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ, ಸಮಯದ ಅಭಾವದ ಕಾರಣ ಈ ಯಾವ ವಿಚಾರಗಳನ್ನೂ ಈ ಬಾರಿ ಪರಿಗಣಿಸಿಲ್ಲ. ಮುಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಜಿಎಸ್​ಟಿ ಮಂಡಳಿಯ 47ನೇ ಸಭೆ ಜೂನ್ 28 ಮತ್ತು 29ರಂದು ಚಂಡೀಗಢದಲ್ಲಿ ನಡೆದಿತ್ತು. ಪ್ಯಾಕೇಜ್ಡ್ ಮತ್ತು ಲೇಬಲ್ ಅಂಟಿಸಿರುವ ಮೊಸರು, ಲಸ್ಸಿ, ಮಜ್ಜಿಗೆಯನ್ನು ಜಿಎಸ್​ಟಿ ವ್ಯಾಪ್ತಿಗೆ ತರುವ ಮಹತ್ವದ ನಿರ್ಧಾರವನ್ನು 47ನೇ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ಜಿಎಸ್​ಟಿ ನ್ಯಾಯಾಧಿಕರಣದ ಬಗ್ಗೆ ಚರ್ಚೆ; ಬೊಮ್ಮಾಯಿ

ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂಯೆ ಎಲ್ಲ ರಾಜ್ಯಗಳ ಪ್ರತಿನಿಧಿಗಳೂ ಭಾಗಿಯಾಗಿದ್ದರು. ಬಹಳಷ್ಟು ಜಿಎಸ್​​ಟಿ ಮೊಕದ್ದಮೆಗಳು ಹೈಕೋರ್ಟ್​ ಮೆಟ್ಟಿಲೇರುತ್ತಿವೆ. ಹೀಗಾಗಿ, ಪರ್ಯಾಯವಾಗಿ ಜಿಸ್​ಟಿ ನ್ಯಾಯಾಧಿಕರಣ ರಚನೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ನ್ಯಾಯಾಧಿಕರಣ ರಚನೆಯಿಂದ ಬಹಳ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಈ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Sat, 17 December 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ