AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಆಸ್ಟ್ರೇಲಿಯಾ ಮೊದಲ ಎಐಇಎಸ್​ಸಿ ಸಭೆ; ಧರ್ಮೇಂದ್ರ ಪ್ರಧಾನ್ ಜೊತೆ ಆಸ್ಟ್ರೇಲಿಯಾ ಸಚಿವರ ಭೇಟಿ

AIESC Meeting in Gujarat: ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ (ಎಐಇಎಸ್​ಸಿ) ಮೊದಲ ಸಭೆ ಗುಜರಾತ್​ನ ಗಾಂಧಿನಗರ್​ನಲ್ಲಿ ನವೆಂಬರ್ 6ಕ್ಕೆ ಆರಂಭಗೊಂಡಿದೆ. ಭಾರತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್, ಅಸ್ಟ್ರೇಲಿಯಾದ ಶಿಕ್ಷಣ ಸಚಿವ ಜೇಸನ್ ಕ್ಲೇರ್, ಕೌಶಲ್ಯ ಮತ್ತು ಅಲ್ಲಿನ ತರಬೇತಿ ಸಚಿವ ಬ್ರೆಂಡಾನ್ ಓಕಾನಾರ್ ಅವರು ಈ ಸಭೆ ಸಹ-ಅಧ್ಯಕ್ಷರಾಗಿದ್ದಾರೆ. ಶಿಕ್ಷಣ ಮತ್ತು ಕೌಶಲ್ಯ ಎರಡೂ ಒಂದೇ ಸಾಂಸ್ಥಿಕ ರಚನೆಯಲ್ಲಿರುವುದು ಇದೇ ಮೊದಲು.

ಭಾರತ ಆಸ್ಟ್ರೇಲಿಯಾ ಮೊದಲ ಎಐಇಎಸ್​ಸಿ ಸಭೆ; ಧರ್ಮೇಂದ್ರ ಪ್ರಧಾನ್ ಜೊತೆ ಆಸ್ಟ್ರೇಲಿಯಾ ಸಚಿವರ ಭೇಟಿ
ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ ಸಭೆ
TV9 Web
| Edited By: |

Updated on: Nov 06, 2023 | 2:35 PM

Share

ಗಾಂಧಿನಗರ್, ನವೆಂಬರ್ 6: ಆಸ್ಟ್ರೇಲಿಯಾ ಭಾರತ ಶಿಕ್ಷಣ ಮತ್ತು ಕೌಶಲ ಮಂಡಳಿಯ (AIESC) ಮೊದಲ ಸಭೆ ಗುಜರಾತ್​ನ ಗಾಂಧಿನಗರ್​ನಲ್ಲಿ ಇಂದು ಸೋಮವಾರ ಆರಂಭಗೊಂಡಿತು. ಭಾರತದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ (Minister of Eduction and Skill Development and entrepreneurship) ಅವರು ಈ ಸಭೆಯ ಸಹ-ಅಧ್ಯಕ್ಷರಾಗಿದ್ದರು. ಅಸ್ಟ್ರೇಲಿಯಾದ ಶಿಕ್ಷಣ ಸಚಿವ ಜೇಸನ್ ಕ್ಲೇರ್ (Jason Clare), ಕೌಶಲ್ಯ ಮತ್ತು ತರಬೇತಿ ಸಚಿವ ಬ್ರೆಂಡಾನ್ ಓಕಾನಾರ್ (Brendon O’Connor) ಅವರೂ ಕೂಡ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಿದ್ದರು.

ಶಿಕ್ಷಣ ಮತ್ತು ಕೌಶಲ್ಯಗಳನ್ನು ಸಾಂಸ್ಥಿಕ ರಚನೆಯಲ್ಲಿ ಸೇರಿಸಿರುವುದು ಇದೇ ಮೊದಲ ಬಾರಿಗೆ. ಈ ಸಭೆಯಲ್ಲಿ ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಮತ್ತು ಸಂಯೋಗ ಸಾಧಿಸುವ ಅವಕಾಶಗಳನ್ನು ಹುಡುಕುವ ಪ್ರಯತ್ನವಾಗುತ್ತಿದೆ. ಭವಿಷ್ಯದ ಕೆಲಸಗಳು, ಶಿಕ್ಷಣದಲ್ಲಿ ಸಾಂಸ್ಥಿಕ ಜೊತೆಗಾರಿಕೆ, ಸಂಶೋಧನೆಯ ಪರಿಣಾಮ ಈ ಮೂರು ಅಂಶಗಳ ಬಗ್ಗೆ ಈ ಸಭೆಯಲ್ಲಿ ಅವಲೋಕನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಅದಾನಿ ಹಿಂಡನ್ಬರ್ಗ್ ಪ್ರಕರಣ: ನ. 8ರಷ್ಟರಲ್ಲಿ ಅಂತಿಮ ದಾಖಲೆ ಸಲ್ಲಿಸುವಂತೆ ಎಲ್ಲರಿಗೂ ಸುಪ್ರೀಂಕೋರ್ಟ್ ಆದೇಶ

ಈ ಸಭೆಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದ ಶಿಕ್ಷಣ ಮತ್ತು ಕೌಶಲ್ಯಗಳ ಸಚಿವರಷ್ಟೇ ಅಲ್ಲದೇ ಎರಡೂ ದೇಶಗಳ ಈ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ಸಾಂಸ್ಥಿಕ ಸಹಯೋಗ ಸಾಧಿಸುವ ಸಾಧ್ಯತೆಗಳನ್ನು ಅವಲೋಕಿಸಲು ಸಚಿವರು ವಿವಿಧ ಉನ್ನತ ವ್ಯಾಸಂಗ ಸಂಸ್ಥೆಗಳಿಗೆ ಭೇಟಿ ಕೊಡಲಿದ್ದಾರೆ. ಗಾಂಧಿನಗರದಲ್ಲೇ ಇರುವ ಐಐಟಿ, ಪಂಡಿತ್ ದೀನದಯಾಳ್ ಎನರ್ಜಿ ಯೂನಿವರ್ಸಿಟಿ (ಪಿಡಿಡಿಯು), ವಿದ್ಯಾ ಸಮೀಕ್ಷಾ ಕೇಂದ್ರಗಳಿಗೆ (ವಿಎಸ್​ಕೆ) ಇವರುಗಳು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: PM Kisan 15th Installment: ಪಿಎಂ ಕಿಸಾನ್ ಯೋಜನೆ, ಹೊಸ ಕಂತು ಬಿಡುಗಡೆಗೆ ದಿನಗಣನೆ; ಫಲಾನುಭವಿಗಳ ಪಟ್ಟಿ ಇಲ್ಲಿದೆ

ಎಐಇಎಸ್​ಸಿ ಸಮಾವೇಶ ಎರಡು ದಿನಗಳದ್ದಿರಲಿದೆ. ನಾಳೆಯೂ ಸಚಿವರು ಮತ್ತು ಅಧಿಕಾರಿಗಳು ವಿವಿಧ ಕ್ಯಾಂಪಸ್​ಗಳಿಗೆ ಭೇಟಿ ಕೊಡುವುದಿದೆ. ಗಿಫ್ಟ್ ಸಿಟಿಯಲ್ಲಿ ನಿರ್ಮಿಸಲಾಗುತ್ತಿರುವ ಆಸ್ಟ್ರೇಲಿಯಾದ ಡೀಕಿನ್ ಯೂನಿವರ್ಸಿಟಿ ಮತ್ತು ವಾಲೋಂಗೋಂಗ್ ಯೂನಿವರ್ಸಿಟಿಯ ಕ್ಯಾಂಪಸ್​ಗಳಿಗೂ ಅವರು ಭೇಟಿ ಮಾಡಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ