AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Employees: ಬ್ಯಾಂಕ್ ಉದ್ಯೋಗಿಗಳಿಗೆ 2 ವೀಕಾಫ್, ವೇತನ ಹೆಚ್ಚಳ, ನಿವೃತ್ತರಿಗೆ ಇನ್ಷೂರೆನ್ಸ್ ಬೇಡಿಕೆ; ಜುಲೈ 28ರಂದು ತೀರ್ಮಾನ?

5-day Work Week For Bank Employees: ವಾರಕ್ಕೆ 5 ದಿನ ಕೆಲಸ ನಿಗದಿ ಮಾಡಿ, ವೇತನ ಹೆಚ್ಚಿಸಿ, ನಿವೃತ್ತರಿಗೆ ಗ್ರೂಪ್ ಇನ್ಷೂರೆನ್ಸ್ ಸೌಲಭ್ಯ ಕೊಡಿ ಎಂಬಿತ್ಯಾದಿ ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳ ಬಗ್ಗೆ ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಶನ್ ಜುಲೈ 28ರಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Bank Employees: ಬ್ಯಾಂಕ್ ಉದ್ಯೋಗಿಗಳಿಗೆ 2 ವೀಕಾಫ್, ವೇತನ ಹೆಚ್ಚಳ, ನಿವೃತ್ತರಿಗೆ ಇನ್ಷೂರೆನ್ಸ್ ಬೇಡಿಕೆ; ಜುಲೈ 28ರಂದು ತೀರ್ಮಾನ?
ಬ್ಯಾಂಕ್ ಉದ್ಯೋಗಿಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 21, 2023 | 3:46 PM

Share

ನವದೆಹಲಿ, ಜುಲೈ 21: ಬ್ಯಾಂಕ್ ಉದ್ಯೋಗಿಗಳ ಬಹುನಿರೀಕ್ಷಿತ ಬೇಡಿಕೆಯಾದ ವಾರಕ್ಕೆ ಎರಡು ದಿನ ರಜೆ ಸೌಲಭ್ಯ (2 Weekly Holidays) ಈಡೇರುವ ಕಾಲ ಸಮೀಪಿಸಿದೆ. ವಾರಕ್ಕೆ ಐದು ದಿನ ಕೆಲಸ, 2 ವೀಕಾಫ್ ಸೌಲಭ್ಯ ಮತ್ತಿತರ ಕೆಲ ವಿಚಾರಗಳ ಬಗ್ಗೆ ಭಾರತೀಯ ಬ್ಯಾಂಕಿಂಗ್ ಸಂಸ್ಥೆ (IBA- Indian Banking Association) ಜುಲೈ 28ರಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್ ಯೂನಿಯನ್​ಗಳು ಮತ್ತು ಐಬಿಎ ಮಧ್ಯೆ ಜುಲೈ 28ರಂದು ಸಭೆ ನಡೆಯಲಿದೆ. ಈ ವೇಳೆ ವಾರಕ್ಕೆ ಐದು ದಿನ ಕೆಲಸ, ಸಂಬಳ ಹೆಚ್ಚಳ, ನಿವೃತ್ತರಿಗೆ ಗ್ರೂಪ್ ಇನ್ಷೂರೆನ್ಸ್ ಮೊದಲಾದ ಸಂಗತಿಗಳನ್ನು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ (UFBU) ಸಂಘಟನೆ ಬ್ಯಾಂಕ್ ಕಾರ್ಯದಿನಗಳ ವಿಚಾರದ ಬಗ್ಗೆ ಈ ಹಿಂದೆ ಐಬಿಎ ಮಾತುಕತೆ ನಡೆಸಿದ್ದಾಗಿ ಮೊನ್ನೆ (ಜುಲೈ 19) ಹೇಳಿತ್ತು. ಬ್ಯಾಂಕ್​ನ ವಾರದ ಕಾರ್ಯದಿನಗಳನ್ನು ಐದಕ್ಕೆ ಇಳಿಸುವ ವಿಚಾರವನ್ನು ಪರಿಗಣಿಸಿ, ಸಂಬಂಧಿತರೊಂದಿಗೆ ಮಾತನಾಡುತ್ತಿರುವುದಾಗಿ ಐಬಿಎ ತನಗೆ ತಿಳಿಸಿದ್ದಾಗಿ ಬ್ಯಾಂಕುಗಳ ವೇದಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿSBI FD Scheme: ಎಸ್​ಬಿಐ ವೀ ಕೇರ್, ಹಣ ಡಬಲ್ ಮಾಡಬಲ್ಲ ಸರ್ಕಾರಿ ಬ್ಯಾಂಕ್ ಎಫ್​ಡಿ ಸ್ಕೀಮ್

ಸದ್ಯ, ಬ್ಯಾಂಕುಗಳಿಗೆ ವಾರಕ್ಕೊಮ್ಮೆ ರಜೆ ಇದೆ. ತಿಂಗಳಿಗೆ ಎರಡು ಶನಿವಾರಗಳೂ ರಜೆ ಇವೆ. ಅಲ್ಲಿಗೆ ಒಂದು ತಿಂಗಳಲ್ಲಿ ಬ್ಯಾಂಕುಗಳಿಗೆ ವಾರದ ರಜೆಗಳ ಸಂಖ್ಯೆ 6ರಿಂದ 7 ಆಗುತ್ತದೆ. ಈಗ ವಾರಕ್ಕೆ ಎರಡು ಆಫ್ ಸಿಕ್ಕರೆ ಗ್ಯಾರಂಟಿ ರಜೆಯ ಸಂಖ್ಯೆ 8ರಿಂದ 10ಕ್ಕೆ ಹೋಗುತ್ತದೆ.

ಎರಡು ವೀಕಾಫ್ ಸಿಕ್ಕರೆ ಕೆಲಸದ ಅವಧಿ ಹೆಚ್ಚಳ

ಬ್ಯಾಂಕ್ ಉದ್ಯೋಗಿಗಳ ಎರಡು ವೀಕಾಫ್ ಬೇಡಿಕೆಗೆ ತನ್ನದೇನೂ ಅಭ್ಯಂತರ ಇಲ್ಲ ಎಂದು ಹಣಕಾಸ ಸಚಿವಾಲಯ ಹೇಳಿದೆ. ಆದರೆ, ಬ್ಯಾಂಕ್ ಉದ್ಯೋಗಿಗಳಿಗೆ ವಾರಕ್ಕೆ ಎರಡು ವೀಕಾಫ್ ಕೊಡುವುದಾದರೆ ದಿನದಲ್ಲಿ ಅವರ ಕೆಲಸದ ಅವಧಿಯನ್ನು 40 ನಿಮಿಷಗಳಷ್ಟು ವಿಸ್ತರಿಸಿ ಎನ್ನುವಂತಹ ಸಲಹೆಯೊಂದನ್ನು ಸರ್ಕಾರಕ್ಕೆ ಐಬಿಎ ಕೊಟ್ಟಿರುವುದು ತಿಳಿದುಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್