AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಫ್ಲಿಪ್​ಕಾರ್ಟ್
Ganapathi Sharma
|

Updated on:Feb 08, 2023 | 6:02 PM

Share

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ 1,100 ಕೋಟಿ ರೂ. ಬಾಕಿ ಪಾವತಿಸುವ ವಿಚಾರದಲ್ಲಿ ಇ-ಕಾಮರ್ಸ್ ಕಂಪನಿ ಫ್ಲಿಪ್​ಕಾರ್ಟ್​​ಗೆ (Flipkart) ಕರ್ನಾಟಕ ಹೈಕೋರ್ಟ್​​ನಿಂದ (Karnataka High Court) ಬುಧವಾರ ರಿಲೀಫ್ ದೊರೆತಿದೆ. ಬಾಕಿ ಮೊತ್ತ ಪಾವತಿ ವಿಚಾರವಾಗಿ ಜನವರಿ 31ರಂದು ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿನ ವಿರುದ್ಧ ಫ್ಲಿಪ್​ಕಾರ್ಟ್​ ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿತ್ತು. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷದಲ್ಲಿ ಕ್ರಮವಾಗಿ 4,500 ಕೋಟಿ ರೂ. ಮತ್ತು 180 ಕೋಟಿ ರೂ. ಮೊತ್ತದಲ್ಲಿ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್​ (ESOP) ಗೆ ಅನುಮತಿಸದಿರುವುದನ್ನು ಮತ್ತು ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಕಂಪನಿ ರಿಟ್ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ಆದಾಯ ತೆರಿಗೆ ಆಯುಕ್ತರು ಇಲಾಖೆಯ ಪರವಹಿಸಿ ನಿರ್ಧಾರ ಕೈಗೊಂಡಿದ್ದಾರೆ. ಜತೆಗೆ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್ ವಿಚಾರದಲ್ಲಿ ಮದ್ರಾಸ್ ಮತ್ತು ದೆಹಲಿ ಹೈಕೋರ್ಟ್​​ಗಳು ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಕಡೆಗಣಿಸಿದ್ದಾರೆ ಎಂದು ಫ್ಲಿಪ್​ಕಾರ್ಟ್ ಆರೋಪಿಸಿತ್ತು.

ಬಾಕಿ ಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿಲ್ಲ. ಬಾಕಿ ಪಾವತಿಗೆ ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡಿರುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ. ಇದರಿಂದಾಗಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಪ್ರಶ್ನಿಸುವುದಕ್ಕೂ ನಿರ್ಬಂಧ ವಿಧಿಸಿದಂತಾಗಿತ್ತು ಎಂದು ಫ್ಲಿಪ್​ಕಾರ್ಟ್ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 8 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ