AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಫ್ಲಿಪ್​ಕಾರ್ಟ್
ಗಣಪತಿ ಶರ್ಮಾ
|

Updated on:Feb 08, 2023 | 6:02 PM

Share

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ 1,100 ಕೋಟಿ ರೂ. ಬಾಕಿ ಪಾವತಿಸುವ ವಿಚಾರದಲ್ಲಿ ಇ-ಕಾಮರ್ಸ್ ಕಂಪನಿ ಫ್ಲಿಪ್​ಕಾರ್ಟ್​​ಗೆ (Flipkart) ಕರ್ನಾಟಕ ಹೈಕೋರ್ಟ್​​ನಿಂದ (Karnataka High Court) ಬುಧವಾರ ರಿಲೀಫ್ ದೊರೆತಿದೆ. ಬಾಕಿ ಮೊತ್ತ ಪಾವತಿ ವಿಚಾರವಾಗಿ ಜನವರಿ 31ರಂದು ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿನ ವಿರುದ್ಧ ಫ್ಲಿಪ್​ಕಾರ್ಟ್​ ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿತ್ತು. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷದಲ್ಲಿ ಕ್ರಮವಾಗಿ 4,500 ಕೋಟಿ ರೂ. ಮತ್ತು 180 ಕೋಟಿ ರೂ. ಮೊತ್ತದಲ್ಲಿ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್​ (ESOP) ಗೆ ಅನುಮತಿಸದಿರುವುದನ್ನು ಮತ್ತು ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಕಂಪನಿ ರಿಟ್ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ಆದಾಯ ತೆರಿಗೆ ಆಯುಕ್ತರು ಇಲಾಖೆಯ ಪರವಹಿಸಿ ನಿರ್ಧಾರ ಕೈಗೊಂಡಿದ್ದಾರೆ. ಜತೆಗೆ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್ ವಿಚಾರದಲ್ಲಿ ಮದ್ರಾಸ್ ಮತ್ತು ದೆಹಲಿ ಹೈಕೋರ್ಟ್​​ಗಳು ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಕಡೆಗಣಿಸಿದ್ದಾರೆ ಎಂದು ಫ್ಲಿಪ್​ಕಾರ್ಟ್ ಆರೋಪಿಸಿತ್ತು.

ಬಾಕಿ ಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿಲ್ಲ. ಬಾಕಿ ಪಾವತಿಗೆ ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡಿರುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ. ಇದರಿಂದಾಗಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಪ್ರಶ್ನಿಸುವುದಕ್ಕೂ ನಿರ್ಬಂಧ ವಿಧಿಸಿದಂತಾಗಿತ್ತು ಎಂದು ಫ್ಲಿಪ್​ಕಾರ್ಟ್ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 8 February 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ