AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಫ್ಲಿಪ್​ಕಾರ್ಟ್
ಗಣಪತಿ ಶರ್ಮಾ
|

Updated on:Feb 08, 2023 | 6:02 PM

Share

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ 1,100 ಕೋಟಿ ರೂ. ಬಾಕಿ ಪಾವತಿಸುವ ವಿಚಾರದಲ್ಲಿ ಇ-ಕಾಮರ್ಸ್ ಕಂಪನಿ ಫ್ಲಿಪ್​ಕಾರ್ಟ್​​ಗೆ (Flipkart) ಕರ್ನಾಟಕ ಹೈಕೋರ್ಟ್​​ನಿಂದ (Karnataka High Court) ಬುಧವಾರ ರಿಲೀಫ್ ದೊರೆತಿದೆ. ಬಾಕಿ ಮೊತ್ತ ಪಾವತಿ ವಿಚಾರವಾಗಿ ಜನವರಿ 31ರಂದು ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿನ ವಿರುದ್ಧ ಫ್ಲಿಪ್​ಕಾರ್ಟ್​ ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿತ್ತು. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷದಲ್ಲಿ ಕ್ರಮವಾಗಿ 4,500 ಕೋಟಿ ರೂ. ಮತ್ತು 180 ಕೋಟಿ ರೂ. ಮೊತ್ತದಲ್ಲಿ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್​ (ESOP) ಗೆ ಅನುಮತಿಸದಿರುವುದನ್ನು ಮತ್ತು ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಕಂಪನಿ ರಿಟ್ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ಆದಾಯ ತೆರಿಗೆ ಆಯುಕ್ತರು ಇಲಾಖೆಯ ಪರವಹಿಸಿ ನಿರ್ಧಾರ ಕೈಗೊಂಡಿದ್ದಾರೆ. ಜತೆಗೆ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್ ವಿಚಾರದಲ್ಲಿ ಮದ್ರಾಸ್ ಮತ್ತು ದೆಹಲಿ ಹೈಕೋರ್ಟ್​​ಗಳು ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಕಡೆಗಣಿಸಿದ್ದಾರೆ ಎಂದು ಫ್ಲಿಪ್​ಕಾರ್ಟ್ ಆರೋಪಿಸಿತ್ತು.

ಬಾಕಿ ಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿಲ್ಲ. ಬಾಕಿ ಪಾವತಿಗೆ ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡಿರುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ. ಇದರಿಂದಾಗಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಪ್ರಶ್ನಿಸುವುದಕ್ಕೂ ನಿರ್ಬಂಧ ವಿಧಿಸಿದಂತಾಗಿತ್ತು ಎಂದು ಫ್ಲಿಪ್​ಕಾರ್ಟ್ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 8 February 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ