AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್

Flipkart group CFO as Sriram Venkatram to step down: ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿರುವ ಫ್ಲಿಪ್​ಕಾರ್ಟ್ ಕಂಪನಿಯ ಗ್ರೂಪ್ ಸಿಎಫ್​ಒ ಶ್ರೀರಾಮ್ ವೆಂಕಟರಾಮ್ ಆ ಸ್ಥಾನ ತ್ಯಜಿಸಲಿದ್ದಾರೆ. 2015ರಿಂದಲೂ ಫ್ಲಿಪ್​ಕಾರ್ಟ್​ನಲ್ಲಿರುವ ಅವರು 2018ರಲ್ಲಿ ಗ್ರೂಪ್ ಸಿಎಫ್​ಒ ಆಗಿದ್ದರು. 2014ರಿಂದ ಫ್ಲಿಪ್​ಕಾರ್ಟ್​ನಲ್ಲಿರುವ ರವಿ ಅಯ್ಯರ್ ಅವರು ಗ್ರೂಪ್ ಸಿಎಫ್​ಒ ಆಗಲಿದ್ದಾರೆ.

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್
ಫ್ಲಿಪ್​ಕಾರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 20, 2026 | 6:21 PM

Share

ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್​ಸಿ ಕಂಪನಿಯಾದ ವಾಲ್ಮಾರ್ಟ್​ನ ಒಡೆತನದ ಫ್ಲಿಪ್​ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್​ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್​ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ.

ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್​ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್​ನ ಸಿಎಫ್​ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ ಹಿಡಿದು ಜವಾಬ್ದಾರಿ ನಿಭಾಯಿಸಿದ್ದರು.

ಇದನ್ನೂ ಓದಿ: ಶುಕ್ರವಾರ ಗರಿಗೆದರಿದ ಷೇರು ಬಜಾರು; ನಿನ್ನೆ ನೆಲಕಚ್ಚಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಂಡಿದ್ದು ಯಾಕೆ?

ರವಿ ಅಯ್ಯರ್ ಅವರು ಫ್ಲಿಪ್​ಕಾರ್ಟ್​ನ ನೂತನ ಸಿಎಫ್​ಒ

ಫ್ಲಿಪ್​ಕಾರ್ಟ್​ನ ಮಾರ್ಕೆಟ್​ಪ್ಲೇಸ್ ವಿಭಾಗದ ಸಿಎಫ್​ಒ ಆಗಿರುವ ರವಿ ಅಯ್ಯರ್ ಅವರು ಗ್ರೂಪ್ ಸಿಎಫ್​ಒ ಆಗಿ ಶ್ರೀರಾಮ್ ವೆಂಕಟರಾಮ್ ಸ್ಥಾನವನ್ನು ತುಂಬಲಿದ್ದಾರೆ. ಅಯ್ಯರ್ ಅವರು 2014ರಿಂದಲೂ ಫ್ಲಿಪ್​ಕಾರ್ಟ್​ನಲ್ಲಿದ್ದಾರೆ. ಇತ್ತೀಚಿನ ಕೆಲ ವರ್ಷಗಳಿಂದ ಇವರನ್ನು ಉನ್ನತ ಹುದ್ದೆಗೆ ಅಣಿಗೊಳಿಸುವ ಕೆಲಸ ಕಂಪನಿಯಲ್ಲಿ ನಡೆದಿದೆ. ಆ ನಿಟ್ಟಿನಲ್ಲಿ ಮಾರ್ಕೆಟ್​ಪ್ಲೇಸ್ ಬ್ಯುಸಿನೆಸ್​ನ ಸಿಎಫ್​ಒ ಆಗಿ ಅವರಿಗೆ ಬಡ್ತಿ ಕೊಡಲಾಗಿತ್ತು. ಗ್ರೂಪ್ ಸಿಎಫ್​ಒ ಆಗಲು ಬೇಕಾದ ಪ್ರತ್ಯಕ್ಷ ಅನುಭವ ಗಳಿಸಲು ಅವರಿಗೆ ಆ ಸ್ಥಾನ ಕೊಡಲಾಗಿದ್ದಿರಬಹುದು.

ಅದೇ ವೇಳೆ, ಶ್ರೀರಾಮ್ ವೆಂಕಟರಾಮ್ ಅವರೂ ಕೂಡ ಆರು ತಿಂಗಳಿಂದ ಕಂಪನಿಯ ಕಾರ್ಯಗಳಲ್ಲಿ ಮತ್ತು ನಿರ್ಧಾರಗಳಲ್ಲಿ ತೀರಾ ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಕಡಿಮೆಗೊಳಿಸಿದ್ದರು. ರವಿ ಅಯ್ಯರ್ ಅವರನ್ನು ಆ ಸ್ಥಾನಕ್ಕೆ ಅಣಿಗೊಳಿಸುವ ಪ್ರಯತ್ನ ಅದಾಗಿದ್ದಿರಬಹುದು.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ಬೆಂಗಳೂರಿನಲ್ಲಿ ಮುಖ್ಯಕಚೇರಿ ಹೊಂದಿರುವ ಫ್ಲಿಪ್​ಕಾರ್ಟ್ ಭಾರತದ ಮುಖ್ಯ ಇಕಾಮರ್ಸ್ ಕಂಪನಿ. ಬನ್ಸಾಲ್ ಸಹೋದರರು ಸ್ಥಾಪಿಸಿದ ಕಂಪನಿ ಇದು. ಅಮೆರಿಕದ ರೀಟೇಲ್ ಮಾರಾಟ ಕಂಪನಿಯಾದ ವಾಲ್ಮಾರ್ಟ್ ಫ್ಲಿಪ್​ಕಾರ್ಟ್ ಅನ್ನು ಖರೀದಿಸಿತ್ತು. ಸದ್ಯ ಕಲ್ಯಾಣ್ ಕೃಷ್ಣಮೂರ್ತಿ ಅವರು ಗ್ರೂಪ್ ಸಿಇಒ ಆಗಿದ್ದಾರೆ. ಫ್ಲಿಪ್​ಕಾರ್ಟ್ ಈ ವರ್ಷ ಐಪಿಒ ಆಫರ್ ಮಾಡುತ್ತಿದ್ದು ಷೇರು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ