Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಮುಂದಿನ ವರ್ಷ, ಅಂದರೆ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ತರುವ ಆಲೋಚನೆ ಭಾರತಕ್ಕೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Apr 28, 2022 | 12:23 PM

ಭಾರತವು 2023ರ ವೇಳೆಗೆ ಡಿಜಿಟಲ್ ಕರೆನ್ಸಿಯನ್ನು (Digital Currency) ಪರಿಚಯಿಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದರ ಹಲವಾರು ವಾಣಿಜ್ಯ ಬಳಕೆ ಉದ್ದೇಶಗಳನ್ನು ಪರಿಶೀಲಿಸುತ್ತಿದೆ ಮತ್ತು ಕೇವಲ ಹಣಕಾಸಿನ ಸೇರ್ಪಡೆ ಮಾತ್ರವಲ್ಲ, ಇದನ್ನು ಹೆಚ್ಚಾಗಿ JAM ಟ್ರಿನಿಟಿ (ಜನ್ ಧನ್-ಆಧಾರ್-ಮೊಬೈಲ್) ಮೂಲಕ ಸಾಧಿಸಲಾಗುತ್ತದೆ.,” ಎಂದು ಅವರು ಹೇಳಿದ್ದಾರೆ. ಎಲ್ಲ ಕೈಗಾರಿಕೆಗಳಲ್ಲಿ ಸರ್ಕಾರವು ಸ್ಥಿರವಾದ ಡಿಜಿಟಲ್ ಉತ್ತೇಜನವನ್ನು ನಿರ್ವಹಿಸುತ್ತದೆ ಎಂದು ಸಚಿವೆ ತಿಳಿಸಿದ್ದಾರೆ.

“ಕೇಂದ್ರ ಬ್ಯಾಂಕ್ ಡಿಜಿಟಲ್ ಕರೆನ್ಸಿ, ಡಿಜಿಟಲ್ ಬ್ಯಾಂಕ್‌ಗಳು ಮತ್ತು ಡಿಜಿಟಲ್ ವಿಶ್ವವಿದ್ಯಾನಿಲಯವನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕ್ಷೇತ್ರಗಳಾದ್ಯಂತ ಸರ್ಕಾರದಿಂದ ನಿರಂತರ ಡಿಜಿಟಲ್ ಪ್ರೋತ್ಸಾಹ ಇದೆ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಡಿಜಿಟಲ್ ಕರೆನ್ಸಿಯ ಪರಿಚಯವು ಡಿಜಿಟಲ್ ಆರ್ಥಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಬಜೆಟ್‌ನಲ್ಲಿ ಹೇಳಿದ್ದರು.

“ಡಿಜಿಟಲ್ ಕರೆನ್ಸಿಯು ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. ಆದ್ದರಿಂದ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಪರಿಚಯಿಸಲು ಪ್ರಸ್ತಾಪಿಸಲಾಗಿದೆ. ಇದನ್ನು 2022-23ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡುತ್ತದೆ.” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಅಭಿವೃದ್ಧಿಪಡಿಸುತ್ತಿರುವ ಡಿಜಿಟಲ್ ರೂಪಾಯಿ ಬ್ಲಾಕ್‌ಚೈನ್, ಖಾಸಗಿ ಕಂಪನಿಗಳು ನೀಡುವ ಮೊಬೈಲ್ ವ್ಯಾಲೆಟ್‌ನ ಪ್ರಸ್ತುತ ವ್ಯವಸ್ಥೆಗಿಂತ ಭಿನ್ನವಾಗಿ ಎಲ್ಲ ವಹಿವಾಟುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ವರ್ಚುವಲ್ ಕರೆನ್ಸಿಯ ಸುತ್ತಲಿನ ನಿಯಂತ್ರಣದ ಬಗ್ಗೆ ಭಾರತವು ಪರಿಗಣಿಸುವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮತ್ತು “ಕ್ರಿಪ್ಟೋ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಲಾಗುವುದಿಲ್ಲ” ಎಂದು ನಿರ್ಮಲಾ ಸೀತಾರಾಮನ್ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: Central Bank Digital Currency: ಬಜೆಟ್​ನಲ್ಲಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಪ್ರಸ್ತಾವ; ಏನಿದರ ಅನುಕೂಲ?

ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್