AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆಯಾಗಿ, ಸ್ವಾವಲಂಬಿಗಳಾಗಲು ಸಚಿವೆ ನಿರ್ಮಲಾ ಕರೆ

ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು ಹಾಗೂ ಸ್ವಾವಲಂಬನೆ ಜಾಸ್ತಿ ಆಗಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಐಐ ಸಮಾವೇಶದಲ್ಲಿ ಕರೆ ಸಲಹೆ ನೀಡಿದ್ದಾರೆ.

Nirmala Sitharaman: ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆಯಾಗಿ, ಸ್ವಾವಲಂಬಿಗಳಾಗಲು ಸಚಿವೆ ನಿರ್ಮಲಾ ಕರೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on:Nov 17, 2021 | 8:32 PM

ಆಮದು ವಸ್ತುಗಳು, ಅದರಲ್ಲೂ ವಿಶೇಷವಾಗಿ ಅಗತ್ಯ ವಸ್ತುಗಳಿಗಾಗಿ ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು ಹಾಗೂ ಹೆಚ್ಚು ಸ್ವಾವಲಂಬಿಗಳಾಗಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಿ ಹೇಳಿದ್ದಾರೆ. ಕೊರೊನಾ ಬಿಕ್ಕಟ್ಟಿನಿಂದ ಪೂರೈಕೆಗೆ ಸಮಸ್ಯೆ ಆದ ಮೇಲೆ ಇದು ಹೆಚ್ಚಾಗಿದೆ. ಸಿಐಐ ಬುಧವಾರದಂದು ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ನಿರ್ಮಲಾ, ದೇಶವು ಜಾಗತಿಕ ಮೌಲ್ಯದ ಸರಣಿಯ ಜತೆಗೆ ಜೋಡಣೆ ಆಗಲು ಬಯಸುತ್ತಿದ್ದರೂ ಅವುಗಳಿಂದ ಎದುರಾಗುವ ಅಪಾಯವನ್ನು ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಆರ್ಥಿಕತೆ ಬಗ್ಗೆ ಮಾತನಾಡಿದ ಸಚಿವೆ, ಕೊರೊನಾ ಬಿಕ್ಕಟ್ಟಿನಿಂದ ಅದು ತೀಕ್ಷ್ಣವಾಗಿ ಚೇತರಿಕೆ ಕಂಡಿರುವುದರಿಂದಲೇ ಪಾರಮ್ಯವನ್ನು ಅಂದಾಜು ಮಾಡಬಹುದು ಎಂದಿದ್ದಾರೆ. ಕೊರೊನಾ ಬಿಕ್ಕಟ್ಟಿನ ಹೊರತಾಗಿಯೂ ಈಗಲೂ ಭಾರತದ ಆರ್ಥಿಕತೆಯು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದೆ ಎಂದು ಹೇಳಿದ್ದಾರೆ. ಬೆಳೆಯುತ್ತಿರುವ ಆರ್ಥಿಕ ಚಟುವಟಿಕೆಗೆ ವಾಹನಗಳ ಮಾರಾಟ ಸಹ ಒಂದು ಪ್ರಮುಖ ಸೂಚಕ. ಅದು ಇಳಿಕೆಯಲ್ಲಿ ಇದ್ದರೂ ಅದಕ್ಕೆ ಕಾರಣ ಸೆಮಿಕಂಡಕ್ಟರ್​ನ ಕೊರತೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

“ಸೆಮಿಕಂಡಕ್ಟರ್ ಕೊರತೆ ಮತ್ತು ಶಿಪ್ಪಿಂಗ್ ಕಂಟೇನರ್ ಕೊರತೆ ಇರದಿದ್ದಲ್ಲಿ ಭಾರತದಲ್ಲಿ ವಾಹನ ಮಾರಾಟವು ಉತ್ತಮವಾಗಿರುತ್ತಿತ್ತು,” ಎಂದು ನಿರ್ಮಲಾ ಹೇಳಿದ್ದಾರೆ. ಇನ್ನೂ ಮುಂದುವರಿದು ಮಾತನಾಡಿರುವ ಸಚಿವೆ, ಮೂಲಸೌಕರ್ಯದ ಮೇಲಿನ ಖರ್ಚು ಪ್ರಮುಖ ವಿಚಾರ ಆಗಿದ್ದು, ಸರ್ಕಾರದ ಎಲ್ಲ ಇಲಾಖೆಗಳು ಆ ಬಗ್ಗೆ ಗಮನ ಹರಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: Nirmala Sitharaman In US: ಭಾರತದಲ್ಲಿ ಹೂಡಿಕೆ ಮಾಡಲು ಅಮೆರಿಕದ ಸಿಇಒಗಳಿಗೆ ನಿರ್ಮಲಾ ಸೀತಾರಾಮನ್ ಆಹ್ವಾನ

Published On - 8:31 pm, Wed, 17 November 21

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್