AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆಯಾಗಿ, ಸ್ವಾವಲಂಬಿಗಳಾಗಲು ಸಚಿವೆ ನಿರ್ಮಲಾ ಕರೆ

ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು ಹಾಗೂ ಸ್ವಾವಲಂಬನೆ ಜಾಸ್ತಿ ಆಗಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಐಐ ಸಮಾವೇಶದಲ್ಲಿ ಕರೆ ಸಲಹೆ ನೀಡಿದ್ದಾರೆ.

Nirmala Sitharaman: ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆಯಾಗಿ, ಸ್ವಾವಲಂಬಿಗಳಾಗಲು ಸಚಿವೆ ನಿರ್ಮಲಾ ಕರೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Updated By: Srinivas Mata|

Updated on:Nov 17, 2021 | 8:32 PM

Share

ಆಮದು ವಸ್ತುಗಳು, ಅದರಲ್ಲೂ ವಿಶೇಷವಾಗಿ ಅಗತ್ಯ ವಸ್ತುಗಳಿಗಾಗಿ ಆಮದು ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು ಹಾಗೂ ಹೆಚ್ಚು ಸ್ವಾವಲಂಬಿಗಳಾಗಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಿ ಹೇಳಿದ್ದಾರೆ. ಕೊರೊನಾ ಬಿಕ್ಕಟ್ಟಿನಿಂದ ಪೂರೈಕೆಗೆ ಸಮಸ್ಯೆ ಆದ ಮೇಲೆ ಇದು ಹೆಚ್ಚಾಗಿದೆ. ಸಿಐಐ ಬುಧವಾರದಂದು ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ನಿರ್ಮಲಾ, ದೇಶವು ಜಾಗತಿಕ ಮೌಲ್ಯದ ಸರಣಿಯ ಜತೆಗೆ ಜೋಡಣೆ ಆಗಲು ಬಯಸುತ್ತಿದ್ದರೂ ಅವುಗಳಿಂದ ಎದುರಾಗುವ ಅಪಾಯವನ್ನು ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಆರ್ಥಿಕತೆ ಬಗ್ಗೆ ಮಾತನಾಡಿದ ಸಚಿವೆ, ಕೊರೊನಾ ಬಿಕ್ಕಟ್ಟಿನಿಂದ ಅದು ತೀಕ್ಷ್ಣವಾಗಿ ಚೇತರಿಕೆ ಕಂಡಿರುವುದರಿಂದಲೇ ಪಾರಮ್ಯವನ್ನು ಅಂದಾಜು ಮಾಡಬಹುದು ಎಂದಿದ್ದಾರೆ. ಕೊರೊನಾ ಬಿಕ್ಕಟ್ಟಿನ ಹೊರತಾಗಿಯೂ ಈಗಲೂ ಭಾರತದ ಆರ್ಥಿಕತೆಯು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದೆ ಎಂದು ಹೇಳಿದ್ದಾರೆ. ಬೆಳೆಯುತ್ತಿರುವ ಆರ್ಥಿಕ ಚಟುವಟಿಕೆಗೆ ವಾಹನಗಳ ಮಾರಾಟ ಸಹ ಒಂದು ಪ್ರಮುಖ ಸೂಚಕ. ಅದು ಇಳಿಕೆಯಲ್ಲಿ ಇದ್ದರೂ ಅದಕ್ಕೆ ಕಾರಣ ಸೆಮಿಕಂಡಕ್ಟರ್​ನ ಕೊರತೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

“ಸೆಮಿಕಂಡಕ್ಟರ್ ಕೊರತೆ ಮತ್ತು ಶಿಪ್ಪಿಂಗ್ ಕಂಟೇನರ್ ಕೊರತೆ ಇರದಿದ್ದಲ್ಲಿ ಭಾರತದಲ್ಲಿ ವಾಹನ ಮಾರಾಟವು ಉತ್ತಮವಾಗಿರುತ್ತಿತ್ತು,” ಎಂದು ನಿರ್ಮಲಾ ಹೇಳಿದ್ದಾರೆ. ಇನ್ನೂ ಮುಂದುವರಿದು ಮಾತನಾಡಿರುವ ಸಚಿವೆ, ಮೂಲಸೌಕರ್ಯದ ಮೇಲಿನ ಖರ್ಚು ಪ್ರಮುಖ ವಿಚಾರ ಆಗಿದ್ದು, ಸರ್ಕಾರದ ಎಲ್ಲ ಇಲಾಖೆಗಳು ಆ ಬಗ್ಗೆ ಗಮನ ಹರಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: Nirmala Sitharaman In US: ಭಾರತದಲ್ಲಿ ಹೂಡಿಕೆ ಮಾಡಲು ಅಮೆರಿಕದ ಸಿಇಒಗಳಿಗೆ ನಿರ್ಮಲಾ ಸೀತಾರಾಮನ್ ಆಹ್ವಾನ

Published On - 8:31 pm, Wed, 17 November 21

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್