ಕಡಿಮೆ ಲಾಭದ ಭೀತಿಯಲ್ಲಿ ಎಫ್​ಎಂಸಿಜಿ ಕಂಪನಿಗಳು; ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ

Tea, biscuits and other products' price may increase: ಭಾರತದ ಎಫ್​ಎಂಸಿಜಿ ಕಂಪನಿಗಳಿಗೆ ಇತ್ತೀಚಿನ ವಾರಗಳಿಂದ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿದೆ. ನಗರ ಭಾಗದಲ್ಲಿ ಆದಾಯ ತಗ್ಗಿದೆ. ಆಹಾರವಸ್ತುಗಳ ಬೆಲೆ ಏರಿಕೆ, ಉತ್ಪಾದನಾ ವೆಚ್ಚ ಹೆಚ್ಚಳ, ಕಚ್ಚಾವಸ್ತುಗಳ ಬೆಲೆ ಹೆಚ್ಚಳ ಇತ್ಯಾದಿ ಅಂಶಗಳು ಈ ಕಂಪನಿಗಳಿಗೆ ತಲೆನೋವು ತಂದಿವೆ. ಲಾಭದ ಮಾರ್ಜಿನ್ ಹೆಚ್ಚಿಸುವ ಉದ್ದೇಶದಿಂದ ಕೆಲ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಸಾಧ್ಯತೆ ಇದೆ.

ಕಡಿಮೆ ಲಾಭದ ಭೀತಿಯಲ್ಲಿ ಎಫ್​ಎಂಸಿಜಿ ಕಂಪನಿಗಳು; ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ
ಎಫ್​ಎಂಸಿಜಿ

Updated on: Nov 04, 2024 | 12:08 PM

ನವದೆಹಲಿ, ನವೆಂಬರ್ 4: ಹಲವು ಪ್ರಮುಖ ಎಫ್​ಎಂಸಿಜಿ ಕಂಪನಿಗಳು ತಮ್ಮ ಕೆಲ ಉತ್ಪನ್ನಗಳ ಬೆಲೆ ಏರಿಕೆ ಮಾಡಲು ಸಜ್ಜಾಗಿವೆ. ಅಧಿಕ ಉತ್ಪಾದನಾ ವೆಚ್ಚ, ಅಧಿಕ ಕಚ್ಛಾ ವಸ್ತು ಬೆಲೆ, ಕಡಿಮೆ ಅನುಭೋಗ ಮೊದಲಾದ ಕಾರಣದಿಂದಾಗಿ ಎಫ್​ಎಂಸಿಜಿ ಸಂಸ್ಥೆಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗಿದೆ. ತಾಳೆ ಎಣ್ಣಿ, ಕಾಫಿ ಬೀಜ, ಕೊಕೋವಾ ಇತ್ಯಾದಿ ಕೆಲ ಕಚ್ಛಾ ವಸ್ತುಗಳ ಬೆಲೆ ಇತ್ತೀಚಿನ ದಿನಗಳಲ್ಲಿ ಏರಿಕೆ ಆಗಿವೆ. ಇದರಿಂದ ಸಹಜವಾಗಿ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ, ಹಿಂದೂಸ್ತಾನ್ ಯುನಿಲಿವರ್ (ಎಚ್​ಯುಎಲ್), ಗೋದ್ರೇಜ್ ಕನ್ಸೂಮರ್ ಪ್ರಾಡಕ್ಟ್ಸ್, ಐಟಿಸಿ ಇತ್ಯಾದಿ ಕೆಲ ಪ್ರಮುಖ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದು ತಿಳಿದುಬಂದಿದೆ.

ನಗರ ಮಾರುಕಟ್ಟೆಯಲ್ಲಿ ಎಫ್​ಎಂಸಿಜಿ ವಸ್ತುಗಳಗೆ ಕುಂಠಿತಗೊಂಡ ಬೇಡಿಕೆ

ಎಫ್​ಎಂಸಿಜಿ ಕಂಪನಿಗಳ ಬಹುತೇಕ ಆದಾಯವು (ಶೇ. 65) ನಗರ ಭಾಗಗಳಿಂದ ಸಿಗುತ್ತದೆ. ಆದರೆ, ಇತ್ತೀಚಿನ ಕೆಲ ವಾರಗಳಲ್ಲಿ ನಗರಗಳಲ್ಲಿ ದಿನಸಿ ವಸ್ತುಗಳ ಮಾರಾಟ ಕಡಿಮೆ ಆಗಿದೆ ಎಂದು ಪ್ರಮುಖ ಎಫ್​ಎಂಸಿಜಿ ಕಂಪನಿಗಳು ಹೇಳುತ್ತಿವೆ.

ಇದನ್ನೂ ಓದಿ: ಪೇಮೆಂಟ್ ಆಗಿಲ್ಲವೆಂದು ಬಾಂಗ್ಲಾದೇಶಕ್ಕೆ ಪವರ್ ಕಟ್ ಮಾಡಲು ಅದಾನಿ ಯೋಜನೆ

ಉತ್ಪಾದನಾ ವೆಚ್ಚ ಕಡಿಮೆ ಮಾಡುವ, ಮತ್ತು ಬೆಲೆ ಏರಿಕೆ ಮಾಡುವ ಯೋಜನೆ

ಲಾಭ ಕುಂದುತ್ತಿರುವುದನ್ನು ನಿಗ್ರಹಿಸಲು ಎಫ್​ಎಂಸಿಜಿ ಕಂಪನಿಗಳು ಉತ್ಪಾದನಾ ವೆಚ್ಚ ಸೇರಿದಂತೆ ವಿವಿಧ ವೆಚ್ಚಗಳನ್ನು ಕಡಿಮೆ ಮಾಡಲು ಯೋಜಿಸಿವೆ. ಹಾಗೆಯೇ, ಕೆಲ ಉತ್ಪನ್ನಗಳ ಬೆಲೆ ಏರಿಕೆ ಮಾಡಲು ಮುಂದಾಗಬಹುದು ಎಂದು ಹೇಳಲಾಗುತ್ತಿದೆ.

ಆಹಾರವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದು ಜನಸಾಮಾನ್ಯರ ದಿನಸಿ ಖರೀದಿಯ ಮೇಲೆ ಪರಿಣಾಮ ಬೀರುತ್ತಿದೆ. ಇದು ನಾವಂದುಕೊಂಡಿದ್ದಕ್ಕಿಂತಲೂ ಹೆಚ್ಚು ಬಾಧೆ ತರುತ್ತಿದೆ ಎಂದು ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್​ನ ಮುಖ್ಯಸ್ಥ ಸುನೀಲ್ ಡಿಸೋಜ ಹೇಳುತ್ತಾರೆ.

ಇದನ್ನೂ ಓದಿ: ಜಿಯೋ, ಏರ್ಟೆಲ್ ಮುಟ್ಟದ ಜಾಗಕ್ಕೆ ನುಗ್ಗುತ್ತಿರುವ ಬಿಎಸ್ಸೆನ್ನೆಲ್; ಕಾವೇರಿದೆ ಟೆಲಿಕಾಂ ಪೈಪೋಟಿ

ಹಿಂದೂಸ್ತಾನ್ ಯೂನಿಲಿವರ್ ಲಿ, ಗೋದ್ರೇಜ್ ಕನ್ಸೂಮರ್ ಪ್ರಾಡಕ್ಟ್ಸ್ ಲಿ, ಮಾರಿಕೋ, ಐಟಿಸಿ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಡಾಬರ್ ಇಂಡಿಯಾ, ನೆಸ್ಲೆ, ಬ್ರಿಟಾನಿಯಾ ಇಂಡಸ್ಟ್ರೀಸ್, ವರುಣ್ ಬೆವರೇಜಸ್ ಮೊದಲಾದವು ಭಾರತದ ಪ್ರಮುಖ ಎಫ್​​ಎಂಸಿಜಿ ಕಂಪನಿಗಳಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us