AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಮಂಜಿನಂತೆ ಕರಗುತ್ತಿದೆ ಗೌತಮ್ ಅದಾನಿ ಸಂಪತ್ತು; ಪೋರ್ಬ್ಸ್ ಸಿರಿವಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಉದ್ಯಮಿ

ವಿಶ್ವದ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಇದೀಗ ಫೋರ್ಬ್ಸ್ ರಿಯಲ್​ಟೈಮ್ ಬಿಲಿಯನೇರ್ಸ್​ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ನಿವ್ವಳ ಸಂಪತ್ತಿನಲ್ಲಿ 22.7 ಶತಕೋಟಿ ಡಾಲರ್​​ಗಿಂತಲೂ ಹೆಚ್ಚಿನ, ಅಂದರೆ ಶೇ 19ರಷ್ಟು ಕುಸಿತವಾಗಿದೆ.

Gautam Adani: ಮಂಜಿನಂತೆ ಕರಗುತ್ತಿದೆ ಗೌತಮ್ ಅದಾನಿ ಸಂಪತ್ತು; ಪೋರ್ಬ್ಸ್ ಸಿರಿವಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಉದ್ಯಮಿ
ಗೌತಮ್ ಅದಾನಿ (ಸಂಗ್ರಹ ಚಿತ್ರ)Image Credit source: PTI
Ganapathi Sharma
|

Updated on:Jan 27, 2023 | 6:37 PM

Share

ನವದೆಹಲಿ: ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್​ ಲೆಕ್ಕಪತ್ರ ವಂಚನೆ ಮತ್ತು ಷೇರು ಬೆಲೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಆರೋಪ ಮಾಡಿದ ಬಳಿಕ ಅದಾನಿ ಸಮೂಹದ (Adani Group) ಷೇರುಮೌಲ್ಯ ಕುಸಿಯುತ್ತಲೇ ಬಂದಿದೆ. ಉದ್ಯಮಿ ಗೌತಮ್ ಅದಾನಿ (Gautam Adani) ಒಡೆತನದ ಕಂಪನಿ ಕೇವಲ ಎರಡೇ ದಿನಗಳಲ್ಲಿ ಲಕ್ಷಾಂತರ ಕೋಟಿ ರೂ. ಸಂಪತ್ತನ್ನು ಕಳೆದುಕೊಂಡಿದೆ. ಇದರಿಂದ ವಿಶ್ವದ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಇದೀಗ ಫೋರ್ಬ್ಸ್ ರಿಯಲ್​ಟೈಮ್ ಬಿಲಿಯನೇರ್ಸ್​ (Forbes Real Time Billionaires) ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ನಿವ್ವಳ ಸಂಪತ್ತಿನಲ್ಲಿ 22.7 ಶತಕೋಟಿ ಡಾಲರ್​​ಗಿಂತಲೂ ಹೆಚ್ಚಿನ, ಅಂದರೆ ಶೇ 19ರಷ್ಟು ಕುಸಿತವಾಗಿದ್ದು, ಈಗ (ಜನವರಿ 27) 96.5 ಶತಕೋಟಿ ಡಾಲರ್ ಆಗಿದೆ. ಇತ್ತೀಚೆಗಷ್ಟೇ ‘ಬ್ಲೂಮ್​ಬರ್ಗ್ ಕೋಟ್ಯಧಿಪತಿಗಳ ಸೂಚ್ಯಂಕ’ದಲ್ಲಿಯೂ ಅದಾನಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರು. ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್ (Jeff Bezos) ಮೂರನೇ ಸ್ಥಾನಕ್ಕೇರಿದ್ದರು.

ಅದಾನಿ ಸಮೂಹದ ಕಂಪನಿಗಳ ಷೇರುಗಳ ಮೌಲ್ಯದಲ್ಲಿನ ಕುಸಿತ ಶುಕ್ರವಾರವೂ ಮುಂದುವರಿದಿದೆ. ಕೇವಲ ಒಂದು ವರದಿಯ ಪರಿಣಾಮವಾಗಿ ಸತತ ಎರಡನೇ ದಿನದ ವಹಿವಾಟಿನಲ್ಲಿಯೂ ಅದಾನಿ ಸಮೂಹದ ಸಂಪತ್ತು ಕರಗಿದೆ. ಈ ಮಧ್ಯೆ, ಹಿಂಡನ್​ಬರ್ಗ್ ವರದಿ ದುಷ್ಟತನದಿಂದ ಮತ್ತು ಕುಚೇಷ್ಟೆಯಿಂದ ಕೂಡಿದ್ದು ಎಂದು ಆರೋಪಿಸಿರುವ ಅದಾನಿ ಸಮೂಹ, ಅಮೆರಿಕದ ಸಂಸ್ಥೆ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ಶುಕ್ರವಾರದ ವಹಿವಾಟಿನ ಸಂದರ್ಭದಲ್ಲಿ ಅದಾನಿ ಸಮೂಹದ ಅಂಗಸಂಸ್ಥೆಗಳಾದ ಅದಾನಿ ಟ್ರಾನ್ಸ್​​ಮಿಷನ್ ಷೇರುಗಳ ಮೌಲ್ಯದಲ್ಲಿ ಶೇ 19, ಅದಾನಿ ಟೋಟಲ್ ಗ್ಯಾಸ್ ಷೇರು ಮೌಲ್ಯದಲ್ಲಿ ಶೇ 19.1 ಹಾಗೂ ಅದಾನಿ ಗ್ರೀನ್ ಎನರ್ಜಿ ಷೇರು ಮೌಲ್ಯದಲ್ಲಿ ಶೇ 16ರಷ್ಟು ಕುಸಿತವಾಗಿದೆ.

ಸೆಬಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಈ ಮಧ್ಯೆ, ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪಗಳ ಬಗ್ಗೆ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಎಲ್​ಐಸಿಯಂಥ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಅದಾನಿ ಸಮೂಹ ಪಾಲು ಹೊಂದಿದೆ. ಹೀಗಾಗಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Fri, 27 January 23

ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್