AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಮಂಜಿನಂತೆ ಕರಗುತ್ತಿದೆ ಗೌತಮ್ ಅದಾನಿ ಸಂಪತ್ತು; ಪೋರ್ಬ್ಸ್ ಸಿರಿವಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಉದ್ಯಮಿ

ವಿಶ್ವದ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಇದೀಗ ಫೋರ್ಬ್ಸ್ ರಿಯಲ್​ಟೈಮ್ ಬಿಲಿಯನೇರ್ಸ್​ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ನಿವ್ವಳ ಸಂಪತ್ತಿನಲ್ಲಿ 22.7 ಶತಕೋಟಿ ಡಾಲರ್​​ಗಿಂತಲೂ ಹೆಚ್ಚಿನ, ಅಂದರೆ ಶೇ 19ರಷ್ಟು ಕುಸಿತವಾಗಿದೆ.

Gautam Adani: ಮಂಜಿನಂತೆ ಕರಗುತ್ತಿದೆ ಗೌತಮ್ ಅದಾನಿ ಸಂಪತ್ತು; ಪೋರ್ಬ್ಸ್ ಸಿರಿವಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಉದ್ಯಮಿ
ಗೌತಮ್ ಅದಾನಿ (ಸಂಗ್ರಹ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on:Jan 27, 2023 | 6:37 PM

Share

ನವದೆಹಲಿ: ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್​ ಲೆಕ್ಕಪತ್ರ ವಂಚನೆ ಮತ್ತು ಷೇರು ಬೆಲೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಆರೋಪ ಮಾಡಿದ ಬಳಿಕ ಅದಾನಿ ಸಮೂಹದ (Adani Group) ಷೇರುಮೌಲ್ಯ ಕುಸಿಯುತ್ತಲೇ ಬಂದಿದೆ. ಉದ್ಯಮಿ ಗೌತಮ್ ಅದಾನಿ (Gautam Adani) ಒಡೆತನದ ಕಂಪನಿ ಕೇವಲ ಎರಡೇ ದಿನಗಳಲ್ಲಿ ಲಕ್ಷಾಂತರ ಕೋಟಿ ರೂ. ಸಂಪತ್ತನ್ನು ಕಳೆದುಕೊಂಡಿದೆ. ಇದರಿಂದ ವಿಶ್ವದ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಇದೀಗ ಫೋರ್ಬ್ಸ್ ರಿಯಲ್​ಟೈಮ್ ಬಿಲಿಯನೇರ್ಸ್​ (Forbes Real Time Billionaires) ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ನಿವ್ವಳ ಸಂಪತ್ತಿನಲ್ಲಿ 22.7 ಶತಕೋಟಿ ಡಾಲರ್​​ಗಿಂತಲೂ ಹೆಚ್ಚಿನ, ಅಂದರೆ ಶೇ 19ರಷ್ಟು ಕುಸಿತವಾಗಿದ್ದು, ಈಗ (ಜನವರಿ 27) 96.5 ಶತಕೋಟಿ ಡಾಲರ್ ಆಗಿದೆ. ಇತ್ತೀಚೆಗಷ್ಟೇ ‘ಬ್ಲೂಮ್​ಬರ್ಗ್ ಕೋಟ್ಯಧಿಪತಿಗಳ ಸೂಚ್ಯಂಕ’ದಲ್ಲಿಯೂ ಅದಾನಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರು. ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್ (Jeff Bezos) ಮೂರನೇ ಸ್ಥಾನಕ್ಕೇರಿದ್ದರು.

ಅದಾನಿ ಸಮೂಹದ ಕಂಪನಿಗಳ ಷೇರುಗಳ ಮೌಲ್ಯದಲ್ಲಿನ ಕುಸಿತ ಶುಕ್ರವಾರವೂ ಮುಂದುವರಿದಿದೆ. ಕೇವಲ ಒಂದು ವರದಿಯ ಪರಿಣಾಮವಾಗಿ ಸತತ ಎರಡನೇ ದಿನದ ವಹಿವಾಟಿನಲ್ಲಿಯೂ ಅದಾನಿ ಸಮೂಹದ ಸಂಪತ್ತು ಕರಗಿದೆ. ಈ ಮಧ್ಯೆ, ಹಿಂಡನ್​ಬರ್ಗ್ ವರದಿ ದುಷ್ಟತನದಿಂದ ಮತ್ತು ಕುಚೇಷ್ಟೆಯಿಂದ ಕೂಡಿದ್ದು ಎಂದು ಆರೋಪಿಸಿರುವ ಅದಾನಿ ಸಮೂಹ, ಅಮೆರಿಕದ ಸಂಸ್ಥೆ ವಿರುದ್ಧ ಕಾನೂನು ಕ್ರಮದ ಮೊರೆ ಹೋಗಲು ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

ಶುಕ್ರವಾರದ ವಹಿವಾಟಿನ ಸಂದರ್ಭದಲ್ಲಿ ಅದಾನಿ ಸಮೂಹದ ಅಂಗಸಂಸ್ಥೆಗಳಾದ ಅದಾನಿ ಟ್ರಾನ್ಸ್​​ಮಿಷನ್ ಷೇರುಗಳ ಮೌಲ್ಯದಲ್ಲಿ ಶೇ 19, ಅದಾನಿ ಟೋಟಲ್ ಗ್ಯಾಸ್ ಷೇರು ಮೌಲ್ಯದಲ್ಲಿ ಶೇ 19.1 ಹಾಗೂ ಅದಾನಿ ಗ್ರೀನ್ ಎನರ್ಜಿ ಷೇರು ಮೌಲ್ಯದಲ್ಲಿ ಶೇ 16ರಷ್ಟು ಕುಸಿತವಾಗಿದೆ.

ಸೆಬಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಈ ಮಧ್ಯೆ, ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪಗಳ ಬಗ್ಗೆ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಎಲ್​ಐಸಿಯಂಥ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಅದಾನಿ ಸಮೂಹ ಪಾಲು ಹೊಂದಿದೆ. ಹೀಗಾಗಿ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Fri, 27 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ