AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಷೇರುಮಾರುಕಟ್ಟೆ ಮತ್ತು ಆರ್ಥಿಕತೆ ಬಗ್ಗೆ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಹೆಚ್ಚಿನ ನಿರೀಕ್ಷೆ

Indian economy and stock market: ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ಬಗ್ಗೆ ವಿಶ್ವಬ್ಯಾಂಕ್ ತನ್ನ ನಿರೀಕ್ಷೆ ಕಡಿಮೆ ಮಾಡಿಲ್ಲ. ಹೆಚ್ಚು ಆಶಾದಾಯಕವಾಗಿದೆ. ಭಾರತೀಯ ಷೇರು ಮಾರುಕಟ್ಟೆ ಬಗ್ಗೆಯೂ ವಿದೇಶೀ ಬ್ರೋಕರೇಜ್ ರೇಟಿಂಗ್ ಸಂಸ್ಥೆಗಳು ಆಶಾದಾಯಕವಾಗಿವೆ. ಸಿಟೀಸ್ ಏಜೆನ್ಸಿಯು ಭಾರತೀಯ ಷೇರುಪೇಟೆಗೆ ಓವರ್​ವೇಟ್ ರೇಟಿಂಗ್ ನೀಡಿದೆ. ಜೆಫರೀಸ್ ಸಂಸ್ಥೆ ಸದ್ಯಲ್ಲೇ ಭಾರತೀಯ ಷೇರುಪೇಟೆ ಚೇತರಿಸಿಕೊಳ್ಳಬಹುದು ಎಂದಿದೆ.

ಭಾರತದ ಷೇರುಮಾರುಕಟ್ಟೆ ಮತ್ತು ಆರ್ಥಿಕತೆ ಬಗ್ಗೆ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಹೆಚ್ಚಿನ ನಿರೀಕ್ಷೆ
ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 27, 2025 | 12:03 PM

Share

ನವದೆಹಲಿ, ಫೆಬ್ರುವರಿ 27: ಭಾರತದ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯ ಬೆಳವಣಿಗೆ ಹಲವು ಮಂದಿಗೆ ನಿರಾಸೆ ಮೂಡಿಸಿದೆ. ಆದರೆ, ಅಂತಾರಾಷ್ಟ್ರೀಯ ಸಂಸ್ಥೆಗಳು ಸಕಾರಾತ್ಮಕ ಭಾವನೆಯಲ್ಲಿ ಮುಂದುವರಿದಿವೆ. ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ತಮಗೇನೂ ಚಿಂತೆ ಇಲ್ಲ ಎಂದು ವಿಶ್ವಬ್ಯಾಂಕ್ ಹೇಳಿದೆ. ಅಡ್ವಾಂಟೇಜ್ ಅಸ್ಸಾಂ ಹೂಡಿಕೆ ಸಮಾವೇಶದಲ್ಲಿ ಮಾತನಾಡುತ್ತಿದ್ದ ವಿಶ್ವಬ್ಯಾಂಕ್​ನ ಆಗಸ್ಟೆ ಟಾನೋ ಕೌವಾಮೆ, ‘ಒಂದು ಪ್ರತಿಶತ ಅಂಕ ಕಡಿಮೆ ಆಗಿದ್ದರಿಂದ ವಿಶ್ವಬ್ಯಾಂಕ್​ಗೆ ಭಾರತದ ಜಿಡಿಪಿ ವೃದ್ಧಿ ದರದ (GDP rate) ಬಗ್ಗೆ ನಿರೀಕ್ಷೆ ಕಡಿಮೆ ಆಗೋದಿಲ್ಲ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಮುಂದೆಯೂ ಈ ನಿರೀಕ್ಷೆ ಮುಂದುವರಿಯುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ಶುಕ್ರವಾರ ಮೂರನೇ ತ್ರೈಮಾಸಿಕ (ಅಕ್ಟೋಬರ್​ನಿಂದ ಡಿಸೆಂಬರ್​ವರೆಗೆ) ಅವಧಿಯ ಜಿಡಿಪಿ ದತ್ತಾಂಶ ಪ್ರಕಟವಾಗಲಿದೆ. ಹಲವು ವಿಶ್ಲೇಷಕರು ಜಿಡಿಪಿ ದರ ಶೇ 5.8ರಿಂದ ಶೇ. 6.5ರ ಶ್ರೇಣಿಯಲ್ಲಿ ಇರಬಹುದು ಎಂದು ಅಂದಾಜಿಸಿದ್ದಾರೆ. ನೊಮೊರಾ ಏಜೆನ್ಸಿ ಶೇ. 5.8ರ ಸಾಧ್ಯತೆಯನ್ನು ತಿಳಿಸಿದೆ. ಇಂಡಿಯಾ ರೇಟಿಂಗ್ಸ್ ಸಂಸ್ಥೆ ಅತಿಹೆಚ್ಚು ಆಶಾದಾಯಕವಾಗಿದ್ದು, ಮೂರನೇ ಕ್ವಾರ್ಟರ್​ನಲ್ಲಿ ಆರ್ಥಿಕತೆ ಶೇ. 6.5ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದೆ.

ಇದನ್ನು ಓದಿ: ಗುಜರಾತ್ ಟೈಟನ್ಸ್ ತಂಡಕ್ಕೆ ಭರ್ಜರಿ ವ್ಯಾಲುಯೇಶನ್; ಆರ್ಸಿಬಿ ಮತ್ತಿತರ ತಂಡಗಳ ಮೌಲ್ಯ ಎಷ್ಟಿರಬಹುದು?

ಇದನ್ನೂ ಓದಿ
Image
ಭಾರತ, ಅಮೆರಿಕ ಆರ್ಥಿಕತೆಗಳಲ್ಲಿ ಇರುವ ಸಾಮ್ಯತೆಗಳಿವು...
Image
ಮದ್ದುಗುಂಡುಗಳ ತಯಾರಿಕೆಯಲ್ಲಿ ಭಾರತದ ಸ್ವಾವಲಂಬನೆ
Image
ಅಮೆರಿಕದಲ್ಲಿ ಪೆನ್ನಿ ನಾಣ್ಯ ತಯಾರಿಕೆ ಇನ್ನಿಲ್ಲ
Image
ಪಾಕಿಸ್ತಾನದಲ್ಲಿ ಪ್ರಯಾಣಿಕರೇ ಇಲ್ಲದ ಏರ್ಪೋರ್ಟ್

ಭಾರತದ ಷೇರು ಮಾರುಕಟ್ಟೆಯ ಮೇಲೂ ನಿರೀಕ್ಷೆ…

ಭಾರತದ ಷೇರು ಮಾರುಕಟ್ಟೆ ಸತತ ಐದನೇ ತಿಂಗಳು ಹಿನ್ನಡೆ ಕಾಣುತ್ತಿದೆ. ಕಳೆದ ಎರಡು ಮೂರು ದಶಕಗಳಲ್ಲೇ ಇಷ್ಟು ಸುದೀರ್ಘ ಅವಧಿಯ ಹಿನ್ನಡೆ ಆಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ವಿದೇಶೀ ಹೂಡಿಕೆದಾರರು ಸತತವಾಗಿ ನಿರ್ಗಮಿಸುತ್ತಿರುವುದು ಈ ಕುಸಿತಕ್ಕೆ ಕಾರಣ. ಆದರೆ, ಭಾರತದ ಮಾರುಕಟ್ಟೆ ಬಗ್ಗೆ ವಿದೇಶೀ ವಿಶ್ಲೇಷಕರ ನಿರೀಕ್ಷೆ ಇನ್ನೂ ಕಡಿಮೆ ಆಗಿಲ್ಲ ಎನ್ನುವುದು ಗಮನಾರ್ಹ. ಸಿಟಿ, ಜೆಫರೀಸ್ ಮೊದಲಾದ ಏಜೆನ್ಸಿಗಳು ಭಾರತೀಯ ಮಾರುಕಟ್ಟೆ ಬಗ್ಗೆ ಈಗಲೂ ಆಶಾದಾಯಕವಾಗಿವೆ. ಸಿಟಿ ಸಂಸ್ಥೆಯಂತೂ ತನ್ನ ನಿರೀಕ್ಷೆ ಹೆಚ್ಚಿಸಿಕೊಂಡಿದ್ದು, ಭಾರತದ ಷೇರು ಮಾರುಕಟ್ಟೆಗೆ ‘ಓವರ್​ವೇಟ್’ ಗ್ರೇಡಿಂಗ್ ಕೊಟ್ಟಿದೆ. ಓವರ್​ವೇಟ್ ರೇಟಿಂಗ್​ ಇದ್ದರೆ, ಅದು ಬೆಳವಣಿಗೆ ಕಾಣಬಲ್ಲ ಶಕ್ತಿ ಇರುವ ಮಾರುಕಟ್ಟೆ ಎಂದು ಭಾವಿಸಬಹುದು.

ಭಾರತೀಯ ಮಾರುಕಟ್ಟೆ ಬಗ್ಗೆ ಸಕಾರಾತ್ಮಕವಾಗಿರುವ ಜೆಫರೀಸ್

ಬ್ರೋಕರೇಜ್ ಏಜೆನ್ಸಿಯಾದ ಜೆಫರೀಸ್ ನಿಫ್ಟಿ ಬಗ್ಗೆ ಒಂದು ಇಂಟರೆಸ್ಟಿಂಗ್ ಸಂಗತಿ ಗಮನಿಸಿದೆ. ಮಾರ್ಕೆಟ್ ಕರೆಕ್ಷನ್ಸ್ ಬಳಿಕ ನಿಫ್ಟಿ ವ್ಯಾಲ್ಯುಯೇಶನ್ ಈಗ ಮುಂದಿನ ಒಂದು ವರ್ಷದ ಸರಾಸರಿ ಪಿಇ ಮೌಲ್ಯಕ್ಕೆ ಸಮೀಪ ಇದೆ. ಈ ಸಂದರ್ಭದಲ್ಲಿ 14ಕ್ಕಿಂತ ಹೆಚ್ಚು ಇಪಿಎಸ್ ಬೆಳವಣಿಗೆ ಇರುವ ಹಾಗು 10 ವರ್ಷದ ದೀರ್ಘಾವಧಿಯ ಸರಾಸರಿಗಿಂತ ಕಡಿಮೆ ಬೆಲೆ ಇರುವ ಷೇರುಗಳು ಬೇಡಿಕೆ ಗಳಿಸುವ ಸಾಧ್ಯತೆ ಇದೆ ಎಂಬುದು ಜೆಫರೀಸ್​ನ ವಿಶ್ಲೇಷಣೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:37 am, Thu, 27 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ