AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Forex Reserves: ಭಾರತದ ಫಾರೆಕ್ಸ್ ರಿಸರ್ವ್ಸ್ 37,000 ಕೋಟಿ ರೂನಷ್ಟು ಏರಿಕೆ; ಈಗೆಷ್ಟಿದೆ ಮೀಸಲು ನಿಧಿ?

Foreign Exchange Reserves Rose To 588.78 Billion Dollar: 2023 ಏಪ್ರಿಲ್ 28ರಂದು ಅಂತ್ಯಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ನಿಧಿ 4.532 ಬಿಲಿಯನ್ ಡಾಲರ್​ಷ್ಟು ಏರಿ 588.78 ಬಿಲಿಯನ್ ಡಾಲರ್ ಮೊತ್ತ ಮುಟ್ಟಿದೆ. ಏಪ್ರಿಲ್ 21ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ 2.16 ಬಿಲಿಯನ್ ಡಾಲರ್​ನಷ್ಟು ಇಳಿಕೆಯಾಗಿತ್ತು.

Forex Reserves: ಭಾರತದ ಫಾರೆಕ್ಸ್ ರಿಸರ್ವ್ಸ್ 37,000 ಕೋಟಿ ರೂನಷ್ಟು ಏರಿಕೆ; ಈಗೆಷ್ಟಿದೆ ಮೀಸಲು ನಿಧಿ?
ಫಾರೆಕ್ಸ್ ರಿಸರ್ವ್ಸ್ ನಿಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 07, 2023 | 11:01 AM

Share

ಮುಖ್ಯಾಂಶಗಳು

  • ಏಪ್ರಿಲ್ 28ರಂದು ಅಂತ್ಯಗೊಂಡ ವಾರದಲ್ಲಿ ಭಾರತದ ಫಾರೆಕ್ಸ್ ರಿಸರ್ವ್ಸ್ 588.780 ಬಿಲಿಯನ್ ಡಾಲರ್​ಗೆ ಏರಿದೆ.
  • 2021 ಅಕ್ಟೋಬರ್​ನ ಒಂದು ವಾರದಲ್ಲಿ ಫಾರೆಕ್ಸ್ ಮೀಸಲು ನಿಧಿ 645 ಬಿಲಿಯನ್ ಡಾಲರ್ ಮುಟ್ಟಿತ್ತು.
  • ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುವುದನ್ನು ತಡೆಯಲು ಆರ್​ಬಿಐ ತೆಗೆದುಕೊಂಡ ಕ್ರಮದಿಂದ ಫಾರೆಕ್ಸ್ ರಿಸರ್ವ್ಸ್ ಕಡಿಮೆ ಆಗಿದೆ.

ನವದೆಹಲಿ: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ (Forex Reserves) ಏಪ್ರಿಲ್ 28ರ ವಾರದಲ್ಲಿ 4.532 ಬಿಲಿಯನ್ ಡಾಲರ್​ನಷ್ಟು (ಸುಮಾರು 30,000 ಕೋಟಿ ರೂ) ಏರಿಕೆ ಆಗಿದೆ. ನಿನ್ನೆ ಶನಿವಾರ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಏಪ್ರಿಲ್ 28ರಂದು ಅಂತ್ಯಗೊಂಡ ವಾರದಲ್ಲಿ ಭಾರತದ ಒಟ್ಟು ಫಾರೆಕ್ಸ್ ರಿಸರ್ವ್ಸ್ ಮೊತ್ತ 588.780 ಬಿಲಿಯನ್ ಡಾಲರ್​ನಷ್ಟಿದೆ. ಅಂದರೆ 48.1 ಲಕ್ಷ ಕೋಟಿ ರುಪಾಯಿಯಷ್ಟು ಮೊತ್ತದ ಮೀಸಲು ನಿಧಿ ಭಾರತದ ಬಳಿ ಇದೆ. ಇದು ಕಳೆದ 10 ತಿಂಗಳಲ್ಲೇ ಗರಿಷ್ಠ ಫಾರೆಕ್ಸ್ ರಿಸರ್ವ್ಸ್ ಮೊತ್ತವಾಗಿದೆ.

ವಿದೇಶೀ ವಿನಿಮಯ ಮೀಸಲು ನಿಧಿಯಲ್ಲಿ ಅತ್ಯಂತ ಪ್ರಮುಖ ಭಾಗವಾಗಿರುವುದು ವಿದೇಶೀ ಕರೆನ್ಸಿ ಆಸ್ತಿ. ಇದು 4.996 ಬಿಲಿಯನ್ ಡಾಲರ್​ನಷ್ಟು ಏರಿದೆ. ಈಗ ಈ ಆಸ್ತಿಯ ಮೊತ್ತ ಒಟ್ಟು 519.485 ಡಾಲರ್ ಆಗಿದೆ. ಅಂದರೆ ಸುಮಾರು 42.4 ಲಕ್ಷ ಕೋಟಿ ರೂನಷ್ಟು ವಿದೇಶೀ ಕರೆನ್ಸಿ ಆಸ್ತಿ ಸಂಗ್ರಹ ಇದೆ. ಆದರೆ, ಫಾರೆಕ್ಸ್ ರಿಸರ್ವ್ಸ್​ನ ಮತ್ತೊಂದು ಭಾಗವಾಗಿರುವ ಗೋಲ್ಡ್ ರಿಸರ್ವ್ಸ್ ಏಪ್ರಿಲ್ 28ರಂದು ಅಂತ್ಯಗೊಂಡ ವಾರದಲ್ಲಿ 494 ಮಿಲಿಯನ್ ಡಾಲರ್​ನಷ್ಟು ಕುಸಿತ ಕಂಡಿರುವುದು ಆರ್​ಬಿಐ ದತ್ತಾಂಶದಿಂದ ಗೊತ್ತಾಗುತ್ತದೆ. 494 ಮಿಲಿಯನ್ ಡಾಲರ್ ಎಂದರೆ ಸುಮಾರು 403 ಕೋಟಿ ರೂ. ಈಗ ಭಾರತದಲ್ಲಿ ಫಾರೆಕ್ಸ್ ರಿಸರ್ವ್ಸ್​ನಲ್ಲಿರುವ ಚಿನ್ನದ ಮೀಸಲು 45.657 ಬಿಲಿಯನ್ ಡಾಲರ್ (ಸುಮಾರು 3.73 ಲಕ್ಷ ಕೋಟಿ ರೂ) ಮೊತ್ತಕ್ಕೆ ಇಳಿದಿದೆ.

ಇದನ್ನೂ ಓದಿEPFO: ನಿವೃತ್ತಿಯ ನಂತರ ಮಾಸಿಕ ಪಿಂಚಣಿಯಾಗಿ 15,670 ರೂ. ಪಡೆಯುವುದು ಹೇಗೆ?

2021ರ ಅಕ್ಟೋಬರ್​ನಲ್ಲಿ ಗರಿಷ್ಠ ಫಾರೆಕ್ಸ್ ರಿಸರ್ವಸ್ ಹೊಂದಿದ್ದ ಭಾರತ

2021ರ ಅಕ್ಟೋಬರ್ ತಿಂಗಳ ಒಂದು ವಾರದಲ್ಲಿ ಭಾರತದ ವಿದೇಶ ವಿನಿಯಮ ಮೀಸಲು ನಿಧಿ 645 ಬಿಲಿಯನ್ ಡಾಲರ್ (ಸುಮಾರು 52.7 ಲಕ್ಷ ಕೋಟಿ ರೂ) ಮೊತ್ತಕ್ಕೆ ಏರಿತ್ತು. ಅದು ಭಾರತದ ಫಾರೆಕ್ಸ್ ಮಾರುಕಟ್ಟೆಯಲ್ಲಿ ಕಂಡ ಅತಿಹೆಚ್ಚು ಸಂಗ್ರಹ. ಅದಾದ ಬಳಿಕ ಮೀಸಲು ನಿಧಿ ಬಹುತೇಕ ನಿರಂತರವಾಗಿ ಕುಸಿಯುತ್ತಲೇ ಬಂದಿದೆ.

ಇದೇ ಏಪ್ರಿಲ್ 14ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ 1.657 ಮಿಲಿಯನ್ ಡಾಲರ್​ನಷ್ಟು ಏರಿತ್ತು. ಏಪ್ರಿಲ್ 21ರಂದು ಅಂತ್ಯಗೊಂಡ ವಾರದಲ್ಲಿ 2.16 ಬಿಲಿಯನ್ ಡಾಲರ್​ಷ್ಟು ಇಳಿಕೆ ಕಂಡಿತ್ತು. ಅದರ ಮುಂದಿನ ವಾರದ, ಅಂದರೆ ಏಪ್ರಿಲ್ 28ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ಮೀಸಲು ನಿದಿ 4.532 ಬಿಲಿಯನ್ ಡಾಲರ್​ನಷ್ಟು ಏರಿಕೆ ಕಂಡಿದೆ.

ಇದನ್ನೂ ಓದಿChina vs India: ಇತ್ತ ಭಾರತದಲ್ಲಿ ಚಿನ್ನ ಮಾರಾಟ ಕಡಿಮೆ; ಅತ್ತ ಚೀನಾದಲ್ಲಿ ದಿಢೀರ್ ಗೋಲ್ಡ್ ಸೇಲ್ ಹೆಚ್ಚಿದ್ದು ಯಾಕೆ?

2021ರ ಅಕ್ಟೋಬರ್​ನಿಂದೀಚೆ ಫಾರೆಕ್ಸ್ ರಿಸರ್ವ್ಸ್ ನಿಧಿ ಯಾಕೆ ಕುಸಿಯುತ್ತಿದೆ?

2021ರ ಅಕ್ಟೋಬರ್​ನಲ್ಲಿ ಸಖತ್ ಫಾರೆಕ್ಸ್ ರಿಸರ್ವ್ಸ್ ಹೊಂದಿದ್ದ ಭಾರತ ಆ ಬಳಿಕ ನಿರಂತರವಾಗಿ ಇಳಿಕೆ ಕಾಣಲು ಕಾರಣವಾಗಿದ್ದು ಬಹುತೇಕ ಡಾಲರ್ ಎಫೆಕ್ಟ್. ಡಾಲರ್ ಎದುರು ರೂಪಾಯಿ ಮೌಲ್ಯ ತೀರಾ ಕುಸಿಯುವುದನ್ನು ನಿಯಂತ್ರಿಸಲು ಆರ್​ಬಿಐ ಒಂದಷ್ಟು ಡಾಲರ್​ಗಳನ್ನು ಮಾರುವುದು ಇತ್ಯಾದಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇಲ್ಲದಿದ್ದರೆ ಡಾಲರ್ ಎದುರು ರೂಪಾಯಿ ಮೌಲ್ಯ ಇಷ್ಟರಲ್ಲಾಗಲೇ 90 ರೂ ದಾಟಿ ಹೋಗುತ್ತಿತ್ತು. ಈ ಕಾರಣಕ್ಕೆ ಒಂದು ದೇಶಕ್ಕೆ ಫಾರೆಕ್ಸ್ ಮೀಸಲು ನಿಧಿ ಉತ್ತಮ ಸ್ಥಿತಿಯಲ್ಲಿರುವುದು ಬಹಳ ಮುಖ್ಯ. ಇದು ಆರ್ಥಿಕ ಆಪತ್ಪಾಲಕ್ಕೆ ಸಹಾಯಕ್ಕೆ ಬರುತ್ತದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು