AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಬಗ್ಗೆ ನೆಗಟಿವ್ ಆಗಿ ಹೇಳಿದರಾ ಇಂದ್ರಾ ನೂಯಿ; ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವ ಪೆಪ್ಸಿಕೋ ಮಾಜಿ ಸಿಇಒ

Couldn't become CEO in India, PepsiCo former CEO Indra Nooyi trolled: ಪೆಪ್ಸಿಕೋ ಮಾಜಿ ಸಿಇಒ ಇಂದ್ರಾ ನೂಯಿ ಭಾರತದ ಬಗ್ಗೆ ತಪ್ಪು ಭಾವನೆ ಮೂಡುವಂತಹ ಕೆಲ ಹೇಳಿಕೆಗಳನ್ನು ನೀಡಿದ್ದಾರೆ. ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಕಾಂಡೋಲೀನಾ ರೈಸ್ ಜೊತೆಗೆ ಮಾತನಾಡುತ್ತಾ ವಿವಾದಾಸ್ಪದ ಹೇಳಿಕೆ ನೀಡಿರುವುದುಂಟು. ಭಾರತ ಅಸ್ತವ್ಯಸ್ತ ದೇಶ, ಇಲ್ಲಿ ನಾನು ಸಿಇಒ ಆಗಲು ಸಾಧ್ಯವಿರಲಿಲ್ಲ ಎಂಬರ್ಥದಲ್ಲಿ ಅವರು ಹೇಳಿದ್ದಾರೆ.

ಭಾರತದ ಬಗ್ಗೆ ನೆಗಟಿವ್ ಆಗಿ ಹೇಳಿದರಾ ಇಂದ್ರಾ ನೂಯಿ; ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವ ಪೆಪ್ಸಿಕೋ ಮಾಜಿ ಸಿಇಒ
ಇಂದ್ರಾ ನೂಯಿImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 03, 2026 | 5:17 PM

Share

ನವದೆಹಲಿ, ಜುಲೈ 3: ಪೆಪ್ಸಿಕೋದ ಮಾಜಿ ಅಧ್ಯಕ್ಷೆ ಮತ್ತು ಸಿಇಒ ಇಂದ್ರಾ ನೂಯಿ (Indra Nooyi) ಅವರು ಇತ್ತೀಚೆಗೆ ನೀಡಿರುವ ಕೆಲ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಭಾರತ ಅಸ್ತವ್ಯಸ್ತ ದೇಶ ಎಂದು ಅವರು ಹೇಳಿದ್ದು ಮೊನ್ನೆ ಭಾರೀ ಟೀಕೆಗೆ ಕಾರಣವಾಗಿತ್ತು. ಇದೀಗ ಅವರ ಮತ್ತೊಂದು ಹೇಳಿಕೆ ನೆಟ್ಟಿಗರ ಗಮನಕ್ಕೆ ಬಂದಿದೆ. ಅಮೆರಿಕದಂತಹ ದೇಶದಲ್ಲಿ ಮಾತ್ರ ತಾನು ಸಿಇಒ ಆಗಲು ಸಾಧ್ಯವಿತ್ತು, ಭಾರತ ಸೇರಿದಂತೆ ಜಗತ್ತಿನ ಬೇರೆ ಯಾವುದೇ ದೇಶದಲ್ಲಿ ಇದು ಅಸಾಧ್ಯವಾಗಿತ್ತು ಎಂಬ ಅವರ ವಾದಕ್ಕೆ ಹಲವರು ತಗಾದೆ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ಅರ್ಹತೆಗೆ ಬೆಲೆ: ಇಂದ್ರಾ ನೂಯಿ

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಹೂವರ್ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕಿ ಹಾಗು ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿಯಾದ ಕಾಂಡೋಲಿಜಾ ರೈಸ್ (Condoleeza Rice) ಅವರೊಂದಿಗಿನ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಾ ಇಂದ್ರಾ ನೂಯಿ ಅವರು ತಮ್ಮ ಸಾಧನೆ ಮೆಟ್ಟಿಲುಗಳನ್ನು ಮೆಲುಕು ಹಾಕಿದರು. ಈ ವೇಳೆ, ಅಮೆರಿಕದ ವ್ಯವಸ್ಥೆಯ ಬಗ್ಗೆ ಬಹಳಷ್ಟು ಪ್ರಶಂಸೆ ವ್ಯಕ್ತಪಡಿಸಿದರು. ಭಾರತದ ಕೆಲ ನೂನ್ಯತೆಗಳನ್ನೂ ಎತ್ತಿತೋರಿಸುವ ಪ್ರಯತ್ನ ಮಾಡಿದ್ದಾರೆ.

“ಅಮೆರಿಕಾದಲ್ಲಿ ಮಾತ್ರ ಅರ್ಹತೆಗೆ (meritocracy) ಹೆಚ್ಚಿನ ಬೆಲೆ ಇದೆ. ಇಲ್ಲಿ ಮೆಂಟರ್‌ಗಳು ನೀವು ಪುರುಷರೇ ಅಥವಾ ಮಹಿಳೆಯರೇ ಎಂದು ನೋಡುವುದಿಲ್ಲ, ಬದಲಾಗಿ ಅತ್ಯುತ್ತಮ ಪ್ರತಿಭೆಗೆ ಮನ್ನಣೆ ನೀಡುತ್ತಾರೆ. ನಾನು ಅಮೆರಿಕಕ್ಕೆ ಬಂದು ಶೂನ್ಯದಿಂದ ಆರಂಭಿಸಿ, ಒಂದು ಪ್ರತಿಷ್ಠಿತ ಕಂಪನಿಯ ಸಿಇಒ ಆಗಲು ಸಾಧ್ಯವಾಯಿತು. ಆದರೆ ಭಾರತ ಸೇರಿದಂತೆ ಪ್ರಪಂಚದ ಬೇರೆ ಯಾವುದೇ ದೇಶದಲ್ಲಿ ಇದು ಸಾಧ್ಯವಿರಲಿಲ್ಲ,” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ ವಿಬಿ-ಜಿ-ರಾಮ್-ಜಿಗೆ ನೊಂದಣಿ ಹೇಗೆ? ಕೆಲಸ ಸಿಗದಿದ್ದರೆ ಎಷ್ಟು ಭತ್ಯೆ?

ಭಾರತ ಒಂದು ಅಸ್ತವ್ಯಸ್ತ ದೇಶ: ನೂಯಿ

ಇದೇ ವೇಳೆ ನೂಯಿ ಭಾರತ ಮತ್ತು ಚೀನಾವನ್ನು ಹೋಲಿಸುತ್ತಾ, ಚೀನಾವನ್ನು ಅರ್ಥಮಾಡಿಕೊಳ್ಳುವುದು ಸುಲಭ ಆದರೆ ಭಾರತದಲ್ಲಿ ವ್ಯವಸ್ಥೆಯು ಅಸ್ತವ್ಯಸ್ತವಾಗಿದೆ (chaotic) ಎಂದು ಅಭಿಪ್ರಾಯಪಟ್ಟಿದ್ದಾರೆ. “ಚೀನಾ ಒಂದು ರೀತಿಯಲ್ಲಿ ಸಂಘಟಿತವಾಗಿದೆ, ಆದರೆ ಭಾರತವು ಅಸ್ತವ್ಯಸ್ತವಾಗಿದೆ. ಈ ಅಸ್ತವ್ಯಸ್ತತೆಯೇ ಭಾರತದ ಸೌಂದರ್ಯ, ಆದರೆ ಅಚ್ಚುಕಟ್ಟಾದ ಜೀವನ ಇಷ್ಟಪಡುವವರಿಗೆ ಭಾರತದಲ್ಲಿ ಕೆಲಸ ಮಾಡುವುದು ಕಷ್ಟ,” ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿರೋಧದ ಅಲೆ

ಕಾಂಡೊಲೀನಾ ರೈಸ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ನೂಯಿ ಅವರು ವ್ಯಕ್ತಪಡಿಸಿದ ಕೆಲ ಅಭಿಪ್ರಾಯಗಳನ್ನು ಅನೇಕರು ಒಪ್ಪುತ್ತಿಲ್ಲ. ಭಾರತದಲ್ಲಿ ತಾನು ಸಿಇಒ ಆಗಲು ಸಾಧ್ಯವಿಲ್ಲ ಎನ್ನುವ ಹೇಳಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ನೆಟ್ಟಿಗರು ಭಾರತದ ಮಹಿಳಾ ಸಾಧಕರನ್ನು ಉದಾಹರಣೆಯಾಗಿ ನೀಡುತ್ತಿದ್ದಾರೆ.

ಕನ್ವಲ್ ಸಿಬಲ್ ಎನ್ನುವವರ ಎಕ್ಸ್ ಪೋಸ್ಟ್

ಕಿರಣ್ ಮಜುಂದಾರ್ ಶಾ (ಬಯೋಕಾನ್), ಫಲ್ಗುಣಿ ನಾಯರ್ (ನೈಕಾ), ಚಂದಾ ಕೊಚ್ಚರ್ (ಐಸಿಐಸಿಐ), ವಿಭಾ ಪಾದಲ್ಕರ್ (ಎಚ್‌ಡಿಎಫ್‌ಸಿ ಲೈಫ್ ಇನ್ಷೂರೆನ್ಸ್), ಪ್ರಿಯಾ ನಾಯರ್ (ಹಿಂದೂಸ್ತಾನ್ ಯುನಿಲಿವರ್), ದೀಪಾಲಿ ಗೋಯಂಕಾ (ವೆಲ್​ಸ್ಪನ್ ಇಂಡಿಯಾ), ರಾಧಿಕಾ ಗುಪ್ತಾ (ಎಡೆಲ್​ವೇಸ್ ಮ್ಯೂಚುವಲ್ ಫಂಡ್), ಪ್ರಭಾ ನರಸಿಂಹನ್ (ಕೋಲ್ಗೇಟ್ ಪಾಮೊಲಿವ್ ಇಂಡಿಯಾ) ಮುಂತಾದವರ ಹೆಸರನ್ನು ಒಬ್ಬರು ಎತ್ತಿ ತೋರಿಸುತ್ತಾ, ಭಾರತದಲ್ಲೂ ಮಹಿಳೆಯರಿಗೆ ಉನ್ನತ ಹುದ್ದೆಗೇರಲು ಅವಕಾಶವಿರುವುದನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಮೆಷೀನ್​ಗಿಂತ ಮನುಷ್ಯರೇ ವಾಸಿ; ಎಐ ಕಾರಣ ನೀಡಿ ಮನೆಗೆ ಕಳುಹಿಸಿದ್ದ ಉದ್ಯೋಗಿಗಳನ್ನು ವಾಪಸ್ ಕರೆಸಿಕೊಂಡ ದೊಡ್ಡ ಕಂಪನಿಗಳು

ಅಮೆರಿಕದ ವ್ಯವಸ್ಥೆಯನ್ನು ನೂಯಿ ಹೊಗಳಿದ್ದರೂ, ಭಾರತದ ಇಂದಿನ ಕಾರ್ಪೊರೇಟ್ ವಲಯದಲ್ಲಿ ನಡೆದಿರುವ ಬದಲಾವಣೆಗಳನ್ನು ಮತ್ತು ಮಹಿಳಾ ಸಾಧಕರನ್ನು ಅವರು ಗಮನಿಸಿಲ್ಲ ಎಂಬುದು ನೆಟ್ಟಿಗರ ಮುಖ್ಯ ವಾದವಾಗಿದೆ.

ಅಮೆರಿಕದ ಕಾರ್ಪೊರೇಟ್ ಜಗತ್ತಿನಲ್ಲಿ ಮಹಿಳೆಯರಿಗೆ ಮುಕ್ತ ಅವಕಾಶ ಇದೆಯಾ?

ಮಹಿಳಾ ಸ್ವಾತಂತ್ರ್ಯ ವಿಚಾರದಲ್ಲಿ ಅಮೆರಿಕಕ್ಕಿಂತ ಭಾರತವೇ ಎಷ್ಟೋ ವಾಸಿ ಎಂದು ಕೆಲವರು ವಾದಿಸಿದ್ದಾರೆ. ಅಮೆರಿಕ ಸ್ವಾತಂತ್ರ್ಯ ಪಡೆದು ಶತಮಾನಗಳ ಬಳಿಕ ಮಹಿಳೆಯರಿಗೆ ಮತದಾನ ಹಕ್ಕು ಸಿಕ್ಕಿತು. ಭಾರತದಲ್ಲಿ ಸ್ವಾತಂತ್ರ್ಯ ಬರುತ್ತಲೇ ಆ ಹಕ್ಕು ಕೊಡಲಾಗಿತ್ತು. ಅಮೆರಿಕದ ಕಾರ್ಪೊರೇಟ್ ಕಂಪನಿಗಳಲ್ಲಿ ಅತ್ಯುಚ್ಚ ಹುದ್ದೆ ಪಡೆದ ಮಹಿಳೆಯರು ಶೇ. 10ಕ್ಕಿಂತಲೂ ಕಡಿಮೆ ಎನ್ನುವ ಸಂಗತಿಯನ್ನೂ ಕೆಲವರು ಎತ್ತಿತೋರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Fri, 3 July 26

Follow Us
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!