AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಕ್ಸ್‌ಕಾನ್, ವೇದಾಂತ ಮೇಕ್ ಇನ್ ಇಂಡಿಯಾ ಯೋಜನೆಗೆ ಬದ್ಧ: ಸಚಿವ ಅಶ್ವಿನಿ ವೈಷ್ಣವ್

ವೇದಾಂತದೊಂದಿಗೆ ತನ್ನ 19.5 ಬಿಲಿಯನ್ ಸೆಮಿಕಂಡಕ್ಟರ್ ಜಂಟಿ ಉದ್ಯಮದಿಂದ ಹೊರಬರಲು ಫಾಕ್ಸ್‌ಕಾನ್ ನಿರ್ಧಾರವು ಭಾರತದ ಸೆಮಿಕಂಡಕ್ಟರ್ ಗುರಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಫಾಕ್ಸ್‌ಕಾನ್, ವೇದಾಂತ ಮೇಕ್ ಇನ್ ಇಂಡಿಯಾ ಯೋಜನೆಗೆ ಬದ್ಧ: ಸಚಿವ ಅಶ್ವಿನಿ ವೈಷ್ಣವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಂಗಾಧರ​ ಬ. ಸಾಬೋಜಿ
|

Updated on:Jul 10, 2023 | 10:49 PM

Share

ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿ  (Foxconn) ತನ್ನ ಪ್ರಮುಖ ಭಾರತೀಯ ಬಹುರಾಷ್ಟ್ರೀಯ ಗಣಿ ಕಂಪನಿ ವೇದಾಂತದೊಂದಿಗೆ ತನ್ನ 19.5 ಶತಕೋಟಿ ಜಂಟಿ ಉದ್ಯಮದಿಂದ ಹೊರಬರುವುದಾಗಿ ಸೋಮವಾರ ಘೋಷಿಸಿದೆ. ಇದು ಭಾರತದ ಚಿಪ್ ತಯಾರಿಕೆ ಸೆಮಿಕಂಡಕ್ಟರ್​ ಯೋಜನೆ ಮೇಲೆ ಪರಿಣಾಮ ಬೀರಲಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಆದರೆ ಈ ನಿರ್ಧಾರ ಭಾರತದ ಸೆಮಿಕಂಡಕ್ಟರ್​ ಯೋಜನೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಎರಡೂ ಕಂಪನಿಗಳು ದೇಶದ ಪ್ರಮುಖ ಮೇಕ್ ಇನ್ ಇಂಡಿಯಾ ಯೋಜನೆಗೆ ಬದ್ಧವಾಗಿವೆ ಎಂದಿದ್ದಾರೆ.

ಕಳೆದ ವರ್ಷ, ಫಾಕ್ಸ್‌ಕಾನ್ ಮತ್ತು ವೇದಾಂತ ಕಂಪನಿಯೊಂದಿಗೆ ಸೆಮಿಕಂಡಕ್ಟರ್ ಮತ್ತು ಡಿಸ್ಪ್ಲೇ ಉತ್ಪಾದನಾ ಸೌಲಭ್ಯಗಳನ್ನು ಗುಜರಾತ್‌ನಲ್ಲಿ ಸ್ಥಾಪಿವುದಾಗಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಸದ್ಯ ಒಪ್ಪಂದದಿಂದ ಹಿಂದೆ ಸುರಿಯುತ್ತಿರುವುದಕ್ಕೆ ಫಾಕ್ಸ್‌ಕಾನ್​ ಕಾರಣ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: Foxconn: ವೇದಾಂತ ಜೊತೆಗಿನ ಸೆಮಿಕಂಡಕ್ಟರ್ ಯೋಜನೆಯಿಂದ ಫಾಕ್ಸ್​ಕಾನ್ ಔಟ್; ಮುಂದೇನು?

ವೇದಾಂತದೊಂದಿಗೆ ಜಂಟಿ ಉದ್ಯಮವನ್ನು ಮುಂದುವರಿಸದಿರಲು ಫಾಕ್ಸ್‌ಕಾನ್ ನಿರ್ಧರಿಸಿದೆ. ಫಾಕ್ಸ್‌ಕಾನ್ ಈಗ ವೇದಾಂತದ ಸಂಪೂರ್ಣ ಸ್ವಾಮ್ಯದ ಘಟಕದಿಂದ ಹೊರ ಬರಲು ಕೆಲಸ ಮಾಡುತ್ತಿದೆ ಎಂದು ತೈವಾನ್ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಐಟಿ ರಾಜ್ಯ ಖಾತೆ ಸಚಿವ ರಾಜೀವ್‌ ಚಂದ್ರಶೇಖರ್ ಕೂಡ ಈ ಕುರಿತಾಗಿ ಟ್ವೀಟ್​ ಮಾಡಿದ್ದು, ವೇದಾಂತದೊಂದಿಗಿನ ತನ್ನ ಜಂಟಿ ಉದ್ಯಮದಿಂದ ಹಿಂದೆ ಸರಿಯುವ ಫಾಕ್ಸ್‌ಕಾನ್ ನಿರ್ಧಾರವು ಭಾರತದ ಸೆಮಿಕಂಡಕ್ಟರ್ ಉತ್ಪಾದನಾ ಗುರಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: India vs China: ಎಮರ್ಜಿಂಗ್ ದೇಶಗಳ ಪೈಕಿ ಇಂಡಿಯಾ ಮಿಂಚು; ಹೂಡಿಕೆ ಆಕರ್ಷಣೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ

ಫಾಕ್ಸ್‌ಕಾನ್ ಮತ್ತು ವೇದಾಂತ ಎರಡೂ ಭಾರತದಲ್ಲಿ ಗಮನಾರ್ಹ ಹೂಡಿಕೆ ಮಾಡಿವೆ. ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿವೆ. ಜತೆಗೆ ಸೆಮಿಕಂಡಕ್ಟರ್ ಉದ್ಯಮದಲ್ಲಿ ಭಾರತ ಮುಂದೆ ಸಾಗಲಿದೆ ಎಂದರು.

ಮತ್ತಷ್ಟು ವ್ಯವಹಾರ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:36 pm, Mon, 10 July 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್