AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡುವ ಅವಕಾಶ ಸೆ. 14ಕ್ಕೆ ಕೊನೆ; ಇನ್ನು 2-3 ದಿನ ಮಾತ್ರವೇ ಬಾಕಿ

Free Aadhaar update online till Sep 14: ಆಧಾರ್ ಕಾರ್ಡ್​ನಲ್ಲಿ ನಿಮ್ಮ ಗುರುತು ಮತ್ತು ವಿಳಾಸ ಸಂಬಂಧಿತ ದಾಖಲೆಗಳನ್ನು ಅಪ್​ಡೇಟ್ ಮಾಡಬಹುದು. ಹೆಸರು, ಲಿಂಗ, ಜನ್ಮದಿನಾಂಕ ಇತ್ಯಾದಿ ಬದಲಾವಣೆ ಕೂಡ ಮಾಡಬಹುದು. ಆದರೆ, ಆನ್​ಲೈನ್​ನಲ್ಲಿ ಸೆ. 14ರವರೆಗೆ ಉಚಿತವಾಗಿ ಡಾಕ್ಯುಮೆಂಟ್ ಅಪ್​ಡೇಟ್ ಮಾಡಬಹುದು. ಹೇಗೆ ಮಾಡಬಹುದು ಎನ್ನುವ ಹಂತ ಹಂತದ ಕ್ರಮಗಳ ವಿವರ ಇಲ್ಲಿದೆ...

ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡುವ ಅವಕಾಶ ಸೆ. 14ಕ್ಕೆ ಕೊನೆ; ಇನ್ನು 2-3 ದಿನ ಮಾತ್ರವೇ ಬಾಕಿ
ಆಧಾರ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 11, 2024 | 2:22 PM

Share

ಹತ್ತಕ್ಕೂ ಹೆಚ್ಚು ವರ್ಷಗಳ ಹಿಂದೆ ನೀವು ಆಧಾರ್ ಕಾರ್ಡ್ ಪಡೆದಿದ್ದರೆ ಅದನ್ನು ಅಪ್​ಡೇಟ್ ಮಾಡುವುದು ಅವಶ್ಯಕ. ಮನೆ ಬದಲಾವಣೆ, ಹೆಸರು ಬದಲಾವಣೆ ಯಾವುದೇ ಇದ್ದರೂ ಯಾವಾಗ ಬೇಕಾದರೂ ಅಪ್​ಡೇಟ್ ಮಾಡಬಹುದು. ಆಧಾರ್ ಸೆಂಟರ್​ಗೆ ಹೋಗಿ ನಿಗದಿತ ಶುಲ್ಕ ನೀಡಿ ಅಪ್​ಡೇಟ್ ಮಾಡಲು ಸಾಧ್ಯ. ಆನ್​ಲೈನ್​ನಲ್ಲಿ ಉಚಿತವಾಗಿ ಮಾಡುವ ಅವಕಾಶ ಇದೆ. ಈ ಉಚಿತ ಫೀಚರ್ ಸೆಪ್ಟೆಂಬರ್ 14ರವರೆಗೂ ಲಭ್ಯ ಇರುತ್ತದೆ. ಅದಾದ ಬಳಿಕ ಆನ್​ಲೈನ್​ನಲ್ಲೂ ಕೂಡ ಆಧಾರ್ ಅಪ್​ಡೇಟ್ ಮಾಡಬೇಕಾದರೆ 50 ರೂ ಶುಲ್ಕ ನೀಡಬೇಕಾಗುತ್ತದೆ.

ಆನ್​ಲೈನ್​ನಲ್ಲಿ ನಿಮ್ಮ ಐಡೆಂಟಿಟಿ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಮಾತ್ರ ಅಪ್​ಡೇಟ್ ಮಾಡಬಹುದು. ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ ಇತ್ಯಾದಿ ಡೆಮಗ್ರಾಫಿಕ್ ಮಾಹಿತಿಯನ್ನು ಬದಲಿಸುವುದಿದ್ದರೆ ಆಧಾರ್ ಸೆಂಟರ್​ಗೆ ಹೋಗಿಯೇ ಮಾಡಿಸಬೇಕು.

ಆಧಾರ್ ಅನ್ನು ಆನ್​ಲೈನ್​ನಲ್ಲಿ ಅಪ್​​ಡೇಟ್ ಮಾಡುವ ಕ್ರಮ

  • ಮೊದಲಿಗೆ ಮೈ ಆಧಾರ್ ವೆಬ್​​ಸೈಟ್​ಗೆ ಹೋಗಿರಿ. ಅದರ ವಿಳಾಸ ಇಂತಿದೆ: myaadhaar.uidai.gov.in
  • ಈ ಪೋರ್ಟಲ್​ನಲ್ಲಿ ನಿಮ್ಮ ಆಧಾರ್ ನಂಬರ್ ಮತ್ತು ಒಟಿಪಿ ಮೂಲಕ ಲಾಗಿನ್ ಆಗಿ.
  • ಲಾಗಿನ್ ಆದ ಬಳಿಕ ನಿಮ್ಮ ಪ್ರೊಫೈಲ್​ನಲ್ಲಿ ಇರುವ ವಿವರವನ್ನು ಗಮನಿಸಿ.
  • ನಿಮ್ಮ ಹೆಸರು, ವಿಳಾಸ, ಜನ್ಮದಿನಾಂಕ ಇತ್ಯಾದಿ ವಿವರವನ್ನು ನೀವು ವೆರಿಫೈ ಮಾಡಬೇಕು. ಆ ವಿವರ ಸರಿ ಇದ್ದರೆ ‘ಐ ವೆರಿಫೈ ದಟ್ ದಿ ಅಬೋವ್ ಡೀಟೇಲ್ಸ್ ಆರ್ ಕರೆಕ್ಟ್’ ಎಂಬ ಆಯ್ಕೆಯನ್ನು ಆರಿಸಬೇಕು.
  • ಡ್ರಾಪ್​ಡೌನ್ ಮೆನುನಲ್ಲಿ ಇರುವ ದಾಖಲೆಗಳ ಪಟ್ಟಿಯಲ್ಲಿ ನೀವು ಅಪ್​ಡೇಟ್ ಮಾಡಬೇಕೆಂದಿರುವ ದಾಖಲೆ ಆಯ್ದುಕೊಂಡು ಸಂಬಂಧಿತ ದಾಖಲೆಯನ್ನು ಅಪ್​ಲೋಡ್ ಮಾಡಬೇಕಾಗುತ್ತದೆ. ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ಎರಡಕ್ಕೂ ನೀವು ಒಂದೊಂದು ದಾಖಲೆಯ ಫೋಟೋ ತೆಗೆದು ಹಾಕಬೇಕು.

ಇದನ್ನೂ ಓದಿ: ಜಿಎಸ್​ಟಿ ಕೌನ್ಸಿಲ್ 54ನೇ ಸಭೆ: ತೆರಿಗೆ ಹೆಚ್ಚಳ, ಇಳಿಕೆ, ವಿನಾಯಿತಿ ಸಿಕ್ಕಿದ್ದು ಯಾವ್ಯಾವಕ್ಕೆ? ಇಲ್ಲಿದೆ ಪಟ್ಟಿ

  • ಐಡಿ ಪ್ರೂಫ್​ಗೆ ಬೇಕಾಗುವ ದಾಖಲೆಗಳ ಪಟ್ಟಿ
  • ಇಎಸ್​ಐ, ಮೆಡಿಕ್ಲೈಮ್ ಇತ್ಯಾದಿ ಸರ್ಕಾರದಿಂದ ನೀಡುವ ಹೆಲ್ತ್ ಇನ್ಷೂರೆನ್ಸ್ ಕಾರ್ಡ್
  • ವಿಶೇಷ ಚೇತನರಿಗೆ ಸರ್ಕಾರದಿಂದ ನೀಡುವ ಸರ್ಟಿಫಿಕೇಟ್
  • ಡ್ರೈವಿಂಗ್ ಲೈಸೆನ್ಸ್
  • ಪಾಸ್​ಪೋರ್ಟ್
  • ಕಿಸಾನ್ ಫೋಟೋ ಪಾಸ್​ಪುಕ್
  • ನರೇಗಾ ಕಾರ್ಡ್
  • ಮಾರ್ಕ್ಸ್ ಕಾರ್ಡ್
  • ವಿವಾಹ ನೊಂದಣಿ ಪ್ರಮಾಣಪತ್ರ
  • ಪ್ಯಾನ್ ಕಾರ್ಡ್
  • ಸರ್ಕಾರಿ ಬ್ಯಾಂಕೊಂದರ ಪಾಸ್​ಬುಕ್
  • ಪಡಿತರ ಚೀಟಿ
  • ಎಸ್​ಸಿ ಎಸ್​ಟಿ ಒಬಿಸಿ ಪ್ರಮಾಣಪತ್ರ
  • ವೋಟರ್ ಐಡಿ

ವಿಳಾಸ ಸಾಕ್ಷ್ಯಕ್ಕೆ ಬೇಕಾಗುವ ಅಡ್ರೆಸ್ ಪ್ರೂಫ್ ದಾಖಲೆಗಳು

  • ವಿದ್ಯುತ್ ಬಿಲ್
  • ಗ್ಯಾಸ್ ಬಿಲ್
  • ನೀರಿನ ಬಿಲ್
  • ಬ್ಯಾಂಕ್ ಅಕೌಂಟ್ ಸ್ಟೇಟ್ಮೆಂಟ್
  • ಪಾಸ್​ಪೋರ್ಟ್
  • ಇನ್ಷೂರೆನ್ಸ್ ಪಾಲಿಸಿ
  • ಪ್ರಾಪರ್ಟಿ ಟ್ಯಾಕ್ಸ್ ರಸೀದಿ
  • ಸರ್ಕಾರಿ ಬ್ಯಾಂಕ್​ನ ಪಾಸ್​ಬುಕ್
  • ಮ್ಯಾರೇಜ್ ಸರ್ಟಿಫಿಕೇಟ್
  • ತಹಶೀಲ್ದಾರರಿಂದ ಪ್ರಮಾಣಪತ್ರ
  • ಮನ್​ರೇಗಾ ಕಾರ್ಡ್
  • ವೋಟರ್ ಐಡಿ

ನೀವು ಯಾವುದಾದರೂ ಒಂದು ದಾಖಲೆಯ ಫೋಟೋ ತೆಗೆದಿಟ್ಟುಕೊಳ್ಳಬೇಕು. ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಾದರೂ ದಾಖಲೆ ಇರಬೇಕು. ಇದು ಎರಡು ಎಂಬಿ ಗಾತ್ರಕ್ಕಿಂತ ಕಡಿಮೆ ಇರಬೇಕು. ಸೆಪ್ಟೆಂಬರ್ 14ರ ಬಳಿಕವೂ ನೀವು ಆಧಾರ್​​ನಲ್ಲಿ ನಿಮ್ಮ ಡಾಕ್ಯುಮೆಂಟ್ ಅಪ್​ಡೇಟ್ ಮಾಡಬಹುದಾದರೂ ಅದಕ್ಕೆ ಶುಲ್ಕ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ