AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka Financial Crisis: ಇಂಧನ ಕೊರತೆ ಕಾರಣಕ್ಕೆ ಶಾಲೆ, ಕಚೇರಿಗಳಿಗೆ ರಜಾ ಘೋಷಿಸಿದ ಶ್ರೀಲಂಕಾ ಸರ್ಕಾರ

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರವಾಗಿದೆ. ಈ ಕಾರಣಕ್ಕೆ ಅಲ್ಲಿ ಇಂಧನಕ್ಕೂ ಕೊರತೆ ಆಗಿದ್ದು, ಶುಕ್ರವಾರದಂದು ವಾಹನಗಳ ಸಂಚಾರವನ್ನು ನಿಯಂತ್ರಿಸುವ ಉದ್ದೇಶವಿಟ್ಟುಕೊಂಡು ಅಲ್ಲಿನ ಸರ್ಕಾರವು ಶಾಲೆ, ಸಾರ್ವಜನಿಕ ಕಚೇರಿಗಳಿಗೆ ರಜಾ ಘೋಷಿಸಿತ್ತು.

Sri Lanka Financial Crisis: ಇಂಧನ ಕೊರತೆ ಕಾರಣಕ್ಕೆ ಶಾಲೆ, ಕಚೇರಿಗಳಿಗೆ ರಜಾ ಘೋಷಿಸಿದ ಶ್ರೀಲಂಕಾ ಸರ್ಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 18, 2022 | 4:43 PM

ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ (Sri Lanka) ಆರ್ಥಿಕ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿದೆ. ಈವರೆಗಿನ ಅತ್ಯಂತ ಭಯಾನಕ ಆರ್ಥಿಕ ಬಿಕ್ಕಟ್ಟನ್ನು ಈ ದೇಶ ಎದುರಿಸುತ್ತಿದೆ. ಹೊಸದಾಗಿ ಪೂರೈಕೆ ಬರುವ ಅಲ್ಪ ಸಾಧ್ಯತೆಯೊಂದಿಗೆ ಸಾರಿಗೆಗೆ ಇಂಧನದ ಕೊರತೆ ಎದುರಾಗಿದೆ. ವಾಹನಗಳ ಸಂಚಾರವನ್ನು ನಿಯಂತ್ರಿಸುವ ಉದ್ದೇಶದಿಂದ ಶುಕ್ರವಾರದಂದು ಶ್ರೀಲಂಕಾದಲ್ಲಿ ಸಾರ್ವಜನಿಕ ಕಚೇರಿಗಳು ಮತ್ತು ಶಾಲೆಗಳಿಗೆ ಸರ್ಕಾರವು ರಜಾ ಘೋಷಿಸಿತ್ತು. ಆ ಕಾರಣಕ್ಕೆ ರಾಜಧಾನಿ ಕೊಲಂಬೋದಲ್ಲಿ ರಸ್ತೆಗಳು ಭಣಗುಡುತ್ತಿದ್ದವು. ಪೆಟ್ರೋಲ್​ ಬಂಕ್​ಗಳಲ್ಲಿ ಇಂಧನ ಪೂರೈಕೆ ಕಡಿಮೆ ಇರುವುದರಿಂದ ಚಾಲಕರು ಕಿಲೋಮೀಟರ್​ಗಟ್ಟಲೆ ಸರತಿಯಲ್ಲಿ ನಿಂತಿರುವುದು ಕಂಡುಬಂತು. ವಿದ್ಯುತ್ ಹಾಗೂ ಇಂಧನ ಸಚಿವರಾದ ಕಾಂಚನ ವಿಜೆ​ಸೇಖರ ಗುರುವಾರದಂದು ಮಾತನಾಡಿ, ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ ಹೊಸದಾಗಿ ದಾಸ್ತಾನಿಗೆ ಟೆಂಡರ್ ಬೇಡಿಕೆ ಬಂದಿಲ್ಲ. ಏಕೆಂದರೆ ಪೂರೈಕೆದಾರರು ಬಾಕಿ ಪಾವತಿ ಉಳಿಸಿದ್ದಾರೆ.

ದಿನಪತ್ರಿಕೆಯಲ್ಲಿ ಶನಿವಾರ ಕಂಡುಬಂದಿರುವ ಪ್ರಕಾರ, ಸರ್ಕಾರಿ ಉದ್ಯೋಗಿಗಳು ಎರಡು ವಾರಗಳ ಕಾಲ ವರ್ಕ್​​ ಫ್ರಮ್ ಹೋಮ್ ಮಾಡುವಂತೆ ಅಧಿಕೃತ ಸುತ್ತೋಲೆ ಹೊರಡಿಸಿದೆ. ರಷ್ಯಾ ಸೇರಿದಂತೆ ಇತರ ದೇಶಗಳು ಮತ್ತು ಕಂಪೆನಿಗಳಿಗೆ ಶ್ರೀಲಂಕಾಗೆ ತೈಲ ಪೂರೈಕೆ ಮಾಡಲು ಆಗುತ್ತಿಲ್ಲ. ಭಾರತದಿಂದ ಹೊಸದಾಗಿ 500 ಮಿಲಿಯನ್ ಯುಎಸ್​ಡಿ ಕ್ರೆಡಿಟ್ ಲೈನ್ ತೈಲ ಆಮದಿಗೆ ಭಾರತದಿಂದ ಅನುಮತಿ ಸಿಗುವ ಭರವಸೆ ಇದೆ ಎಂದು ವಿಜೆಸೇಖರ ಹೇಳಿದ್ದಾರೆ.

ಶ್ರೀಲಂಕಾದ ಆರ್ಥಿಕ ಕುಸಿತವು ಅದರ ಸ್ವಾತಂತ್ರ್ಯೋತ್ತರ ಇತಿಹಾಸದಲ್ಲಿ ಅತ್ಯಂತ ಭೀಕರವಾಗಿದ್ದು, ಕಳೆದ ಕೆಲವು ತಿಂಗಳಿಂದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಅವರ ಕುಟುಂಬ ಸದಸ್ಯರನ್ನು ಸರ್ಕಾರದಿಂದ ಹೊರಹಾಕಲು ದ್ವೀಪದಾದ್ಯಂತ ಪ್ರತಿಭಟನೆಗಳು ಬುಗಿಲೆದ್ದವು. ಇಂಧನದಿಂದ ಔಷಧದವರೆಗೆ ಎಲ್ಲದರ ತೀವ್ರ ಕೊರತೆ, ಸುಮಾರು ಶೇ 40ರಷ್ಟು ಹಣದುಬ್ಬರ, 13 ಗಂಟೆಗಳಷ್ಟು ನಿತ್ಯದ ವಿದ್ಯುತ್ ಕಡಿತ ಮತ್ತು ಐತಿಹಾಸಿಕ ಸಾಲದ ಡೀಫಾಲ್ಟ್‌ಗೆ ಕಾರಣವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ಕುಟುಂಬವನ್ನು ದೂಷಿಸಲಾಗಿದೆ.

ಪ್ರಧಾನಿ ರನಿಲ್ ವಿಕ್ರಮಸಿಂಘೆ ಪ್ರಕಾರ, ಮುಂದಿನ ಆರು ತಿಂಗಳ ಕಾಲ ಏರಿಳಿತಕ್ಕಾಗಿ ಈ ದೇಶಕ್ಕೆ ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ಭಾರತ ಮತ್ತು ಚೀನಾ ಸೇರಿದಂತೆ ಇತರ ದೇಶಗಳಿಂದ ಸುಮಾರು 6 ಶತಕೋಟಿ ಅಮೆರಿಕನ್ ಡಾಲರ್ ನೆರವು ಬೇಕಾಗುತ್ತದೆ. ಸ್ಥಳೀಯ ಅಧಿಕಾರಿಗಳು ಇತರ ಹೊಸ ಮೂಲಗಳ ನಿಧಿಯನ್ನು ಪಡೆಯುವ ಸಲುವಾಗಿ IMFನೊಂದಿಗೆ ಬೇಲ್ಔಟ್ ಮಾತುಕತೆಗಳನ್ನು ಶೀಘ್ರವಾಗಿ ಟ್ರ್ಯಾಕ್ ಮಾಡಲು ನೋಡುತ್ತಿದ್ದಾರೆ. ಶ್ರೀಲಂಕಾದ ಆರ್ಥಿಕತೆಯು ಮೊದಲ ತ್ರೈಮಾಸಿಕದಲ್ಲಿ ಸಂಕುಚಿತಗೊಂಡಿರಬಹುದು. ಸಾರ್ವಜನಿಕ ಪ್ರತಿಭಟನೆಗಳು, ರಾಜಕೀಯ ಅಸ್ಥಿರತೆ, ಹೆಚ್ಚಿನ ಸರಕುಗಳ ಬೆಲೆಗಳು ಮತ್ತು ಪೂರೈಕೆ-ಸರಪಳಿ ಸಮಸ್ಯೆಗಳಿಂದ ತತ್ತರಿಸಿದೆ. ಬ್ಲೂಮ್‌ಬರ್ಗ್ ಪ್ರಕಾರ, ಈ ವರ್ಷ ಆರ್ಥಿಕ ಹಿಂಜರಿತವನ್ನು ತಪ್ಪಿಸಲಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Sri Lanka Crisis ಪೆಟ್ರೋಲ್ ಖರೀದಿಸಲು ಹಣವಿಲ್ಲ, ಇಂಧನಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲಬೇಡಿ ಎಂದು ನಾಗರಿಕರಲ್ಲಿ ಮನವಿ ಮಾಡಿದ ಶ್ರೀಲಂಕಾ ಸರ್ಕಾರ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ