AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಪನಿಗಳು ಬಿಟ್ಟು ಹೋಗ್ತವೆ ಹುಷಾರ್..! ಕನ್ನಡಿಗರಿಗೆ ಮೀಸಲಾತಿ ಕೊಡುವ ಪ್ರಸ್ತಾವಕ್ಕೆ ನಾಸ್​ಕಾಮ್ ಅಸಮಾಧಾನ

Nasscom opposes Karnataka bill: ಖಾಸಗಿ ಕಂಪನಿಗಳ ಸಿ ಮತ್ತು ಡಿ ನೌಕರಿಗಳಿಗೆ ಪೂರ್ಣವಾಗಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಎಂದು ನಿಯಮ ಹಾಕುವ ಕರ್ನಾಟಕ ಮಸೂದೆಗೆ ಬಹಳಷ್ಟು ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಸರ್ಕಾರದ ಈ ನಡೆಯಿಂದ ರಾಜ್ಯ ಉದ್ಯಮ ವಲಯಕ್ಕೆ ಹಿನ್ನಡೆಯಾಗುತ್ತದೆ. ಕಂಪನಿಗಳು ಹೊರಗೆ ವಲಸೆ ಹೋಗಬಹುದು ಎಂದು ನಾಸ್​ಕಾಮ್ ಹೇಳಿದೆ. ಸಾಫ್ಟ್​ವೇರ್ ಮತ್ತು ಸರ್ವಿಸ್ ಸೆಕ್ಟರ್​ ಕಂಪನಿಗಳ ಸಂಘಟನೆಯಾಗಿದೆ ಈ ನಾಸ್​ಕಾಮ್.

ಕಂಪನಿಗಳು ಬಿಟ್ಟು ಹೋಗ್ತವೆ ಹುಷಾರ್..! ಕನ್ನಡಿಗರಿಗೆ ಮೀಸಲಾತಿ ಕೊಡುವ ಪ್ರಸ್ತಾವಕ್ಕೆ ನಾಸ್​ಕಾಮ್ ಅಸಮಾಧಾನ
ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 17, 2024 | 4:36 PM

Share

ಬೆಂಗಳೂರು, ಜುಲೈ 17: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ನೂರಕ್ಕೆ ನೂರು ಮೀಸಲಾತಿ ಕೊಡಬೇಕೆಂಬ ಕರ್ನಾಟಕ ಸರ್ಕಾರದ ಮಸೂದೆ ಬಗ್ಗೆ ಉದ್ಯಮ ವಲಯ ತೀವ್ರ ಅಸಮಾಧಾನಗೊಂಡಿದೆ. ಕಿರಣ್ ಮಜುಮ್ದಾರ್, ಮೋಹನ್ ದಾಸ್ ಪೈ ಮೊದಲಾದ ಕೈಗಾರಿಕೋದ್ಯಮಿಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಉದ್ಯಮ ಸಂಘಟನೆಯಾದ ನಾಸ್​ಕಾಮ್ ಕೂಡ ಕಳವಳ ವ್ಯಕ್ತಪಡಿಸಿದೆ. ಸಾಫ್ಟ್​ವೇರ್ ಮತ್ತು ಸರ್ವಿಸ್ ಸೆಕ್ಟರ್ ಕಂಪನಿಗಳ ಸಂಘಟನೆಯಾದ ನಾಸ್​ಕಾಮ್ ಕರ್ನಾಟಕ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದೆ. ರಾಜ್ಯ ಸರ್ಕಾರ ಮತ್ತು ಉದ್ಯಮ ಪ್ರತಿನಿಧಿಗಳ ಮಧ್ಯೆ ತುರ್ತಾಗಿ ಸಭೆ ನಡೆದು ಚರ್ಚೆಯಾಗಬೇಕು ಎಂದು ಆಗ್ರಹಿಸಿದೆ.

ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ಮಟ್ಟದಲ್ಲಿ ಪೂರ್ಣವಾಗಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಎಂಬಿತ್ಯಾದಿ ಅಂಶಗಳನ್ನು ಕರ್ನಾಟಕ ಮಸೂದೆಯಲ್ಲಿ ಒಳಗೊಳ್ಳಲಾಗಿದೆ. ಈ ಮಸೂದೆಗೆ ರಾಜ್ಯ ಸಂಪುಟದಿಂದ ಅಂಗೀಕಾರ ಕೂಡ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಈ ಮಸೂದೆ ಬಗ್ಗೆ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅದರ ಬೆನ್ನಲ್ಲೇ ವಿವಿಧ ಉದ್ಯಮಿಗಳಿಂದ ಕಟುವಾಗಿ ವಿರೋಧ ಬಂದಿದೆ. ನಂತರ ಮುಖ್ಯಮಂತ್ರಿಗಳು ಏಕಾಏಕಿ ಈ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು, ಈ ಕಾಯ್ದೆಯನ್ನು ಹಾಗೆಯೇ ಜಾರಿ ಮಾಡಲಾಗುವುದಿಲ್ಲ. ಎಲ್ಲರ ವಿಶ್ವಾಸ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಸ್​ಕಾಮ್ ಹೇಳಿದ್ದು ಇದು…

‘ಈ ರೀತಿಯ ಮಸೂದೆ ಕಳವಳಕಾರಿಯಾದುದು. ಇದು ಉದ್ಯಮದ ಬೆಳವಣಿಗೆಗೆ ಧಕ್ಕೆ ತರುತ್ತದೆ. ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯಕ್ಕೆ ಇರುವ ಜಾಗತಿಕ ಬ್ರ್ಯಾಂಡಿಂಗ್​ಗೂ ಧಕ್ಕೆ ಆಗುತ್ತದೆ. ಈ ಮಸೂದೆಯಲ್ಲಿರುವ ಕಾನೂನುಗಳ ಬಗ್ಗೆ ನಾಸ್​ಕಾಮ್ ಸದಸ್ಯರಿಗೆ ಆತಂಕ ಇದೆ. ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ,’ ಎಂದು ನಾಸ್​ಕಾಮ್ ಎಕ್ಸ್ ಪೋಸ್ಟ್​ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್​ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಉದ್ಯಮಿಗಳ ವಿರೋಧಕ್ಕೆ ಮಣಿದ್ರಾ?

ಕಂಪನಿಗಳು ಬಿಟ್ಟು ಹೋಗ್ತವೆ…

ಕರ್ನಾಟಕ ರಾಜ್ಯ ಸಾಧಿಸಿರುವ ಬೆಳವಣಿಗೆ ಈಗ ಹಿಂದಕ್ಕೆ ಹೋಗುತ್ತದೆ. ಇಲ್ಲಿಂದ ಕಂಪನಿಗಳು ಹೊರಹೋಗಬಹುದು. ಸ್ಟಾರ್ಟಪ್​ಗಳು ನಲುಗಬಹುದು. ಹೆಚ್ಚೆಚ್ಚು ಜಾಗತಿಕ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಲೋಚಿಸುತ್ತಿರುವ ಹೊತ್ತಲ್ಲೇ ಇದು ಆಗುತ್ತಿದೆ. ಸ್ಥಳೀಯ ಪ್ರತಿಭೆಗಳ ಲಭ್ಯತೆ ಕಡಿಮೆ ಇರುವುದರಿಂದ ಕಂಪನಿಗಳು ಸ್ಥಳಾಂತರಗೊಳ್ಳಬಹುದು ಎಂದು ನಾಸ್​ಕಾಮ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Wed, 17 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್