AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಪನಿಗಳು ಬಿಟ್ಟು ಹೋಗ್ತವೆ ಹುಷಾರ್..! ಕನ್ನಡಿಗರಿಗೆ ಮೀಸಲಾತಿ ಕೊಡುವ ಪ್ರಸ್ತಾವಕ್ಕೆ ನಾಸ್​ಕಾಮ್ ಅಸಮಾಧಾನ

Nasscom opposes Karnataka bill: ಖಾಸಗಿ ಕಂಪನಿಗಳ ಸಿ ಮತ್ತು ಡಿ ನೌಕರಿಗಳಿಗೆ ಪೂರ್ಣವಾಗಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಎಂದು ನಿಯಮ ಹಾಕುವ ಕರ್ನಾಟಕ ಮಸೂದೆಗೆ ಬಹಳಷ್ಟು ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಸರ್ಕಾರದ ಈ ನಡೆಯಿಂದ ರಾಜ್ಯ ಉದ್ಯಮ ವಲಯಕ್ಕೆ ಹಿನ್ನಡೆಯಾಗುತ್ತದೆ. ಕಂಪನಿಗಳು ಹೊರಗೆ ವಲಸೆ ಹೋಗಬಹುದು ಎಂದು ನಾಸ್​ಕಾಮ್ ಹೇಳಿದೆ. ಸಾಫ್ಟ್​ವೇರ್ ಮತ್ತು ಸರ್ವಿಸ್ ಸೆಕ್ಟರ್​ ಕಂಪನಿಗಳ ಸಂಘಟನೆಯಾಗಿದೆ ಈ ನಾಸ್​ಕಾಮ್.

ಕಂಪನಿಗಳು ಬಿಟ್ಟು ಹೋಗ್ತವೆ ಹುಷಾರ್..! ಕನ್ನಡಿಗರಿಗೆ ಮೀಸಲಾತಿ ಕೊಡುವ ಪ್ರಸ್ತಾವಕ್ಕೆ ನಾಸ್​ಕಾಮ್ ಅಸಮಾಧಾನ
ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 17, 2024 | 4:36 PM

Share

ಬೆಂಗಳೂರು, ಜುಲೈ 17: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ನೂರಕ್ಕೆ ನೂರು ಮೀಸಲಾತಿ ಕೊಡಬೇಕೆಂಬ ಕರ್ನಾಟಕ ಸರ್ಕಾರದ ಮಸೂದೆ ಬಗ್ಗೆ ಉದ್ಯಮ ವಲಯ ತೀವ್ರ ಅಸಮಾಧಾನಗೊಂಡಿದೆ. ಕಿರಣ್ ಮಜುಮ್ದಾರ್, ಮೋಹನ್ ದಾಸ್ ಪೈ ಮೊದಲಾದ ಕೈಗಾರಿಕೋದ್ಯಮಿಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಉದ್ಯಮ ಸಂಘಟನೆಯಾದ ನಾಸ್​ಕಾಮ್ ಕೂಡ ಕಳವಳ ವ್ಯಕ್ತಪಡಿಸಿದೆ. ಸಾಫ್ಟ್​ವೇರ್ ಮತ್ತು ಸರ್ವಿಸ್ ಸೆಕ್ಟರ್ ಕಂಪನಿಗಳ ಸಂಘಟನೆಯಾದ ನಾಸ್​ಕಾಮ್ ಕರ್ನಾಟಕ ಸರ್ಕಾರದ ಈ ನಿರ್ಧಾರವನ್ನು ಟೀಕಿಸಿದೆ. ರಾಜ್ಯ ಸರ್ಕಾರ ಮತ್ತು ಉದ್ಯಮ ಪ್ರತಿನಿಧಿಗಳ ಮಧ್ಯೆ ತುರ್ತಾಗಿ ಸಭೆ ನಡೆದು ಚರ್ಚೆಯಾಗಬೇಕು ಎಂದು ಆಗ್ರಹಿಸಿದೆ.

ಖಾಸಗಿ ಕಂಪನಿಗಳಲ್ಲಿ ಸಿ ಮತ್ತು ಡಿ ಮಟ್ಟದಲ್ಲಿ ಪೂರ್ಣವಾಗಿ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು ಎಂಬಿತ್ಯಾದಿ ಅಂಶಗಳನ್ನು ಕರ್ನಾಟಕ ಮಸೂದೆಯಲ್ಲಿ ಒಳಗೊಳ್ಳಲಾಗಿದೆ. ಈ ಮಸೂದೆಗೆ ರಾಜ್ಯ ಸಂಪುಟದಿಂದ ಅಂಗೀಕಾರ ಕೂಡ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಈ ಮಸೂದೆ ಬಗ್ಗೆ ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅದರ ಬೆನ್ನಲ್ಲೇ ವಿವಿಧ ಉದ್ಯಮಿಗಳಿಂದ ಕಟುವಾಗಿ ವಿರೋಧ ಬಂದಿದೆ. ನಂತರ ಮುಖ್ಯಮಂತ್ರಿಗಳು ಏಕಾಏಕಿ ಈ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು, ಈ ಕಾಯ್ದೆಯನ್ನು ಹಾಗೆಯೇ ಜಾರಿ ಮಾಡಲಾಗುವುದಿಲ್ಲ. ಎಲ್ಲರ ವಿಶ್ವಾಸ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಸ್​ಕಾಮ್ ಹೇಳಿದ್ದು ಇದು…

‘ಈ ರೀತಿಯ ಮಸೂದೆ ಕಳವಳಕಾರಿಯಾದುದು. ಇದು ಉದ್ಯಮದ ಬೆಳವಣಿಗೆಗೆ ಧಕ್ಕೆ ತರುತ್ತದೆ. ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯಕ್ಕೆ ಇರುವ ಜಾಗತಿಕ ಬ್ರ್ಯಾಂಡಿಂಗ್​ಗೂ ಧಕ್ಕೆ ಆಗುತ್ತದೆ. ಈ ಮಸೂದೆಯಲ್ಲಿರುವ ಕಾನೂನುಗಳ ಬಗ್ಗೆ ನಾಸ್​ಕಾಮ್ ಸದಸ್ಯರಿಗೆ ಆತಂಕ ಇದೆ. ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ,’ ಎಂದು ನಾಸ್​ಕಾಮ್ ಎಕ್ಸ್ ಪೋಸ್ಟ್​ನಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್​ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಉದ್ಯಮಿಗಳ ವಿರೋಧಕ್ಕೆ ಮಣಿದ್ರಾ?

ಕಂಪನಿಗಳು ಬಿಟ್ಟು ಹೋಗ್ತವೆ…

ಕರ್ನಾಟಕ ರಾಜ್ಯ ಸಾಧಿಸಿರುವ ಬೆಳವಣಿಗೆ ಈಗ ಹಿಂದಕ್ಕೆ ಹೋಗುತ್ತದೆ. ಇಲ್ಲಿಂದ ಕಂಪನಿಗಳು ಹೊರಹೋಗಬಹುದು. ಸ್ಟಾರ್ಟಪ್​ಗಳು ನಲುಗಬಹುದು. ಹೆಚ್ಚೆಚ್ಚು ಜಾಗತಿಕ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಲೋಚಿಸುತ್ತಿರುವ ಹೊತ್ತಲ್ಲೇ ಇದು ಆಗುತ್ತಿದೆ. ಸ್ಥಳೀಯ ಪ್ರತಿಭೆಗಳ ಲಭ್ಯತೆ ಕಡಿಮೆ ಇರುವುದರಿಂದ ಕಂಪನಿಗಳು ಸ್ಥಳಾಂತರಗೊಳ್ಳಬಹುದು ಎಂದು ನಾಸ್​ಕಾಮ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Wed, 17 July 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್