Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

G20 Culture Working Group Meeting in Hampi: ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಜಿ20 ಶೃಂಗಸಭೆ ನಿಮಿತ್ತ ಹಂಪಿಯಲ್ಲಿ 3ನೇ ಕಲ್ಚರ್ ವರ್ಕಿಂಗ್ ಗ್ರೂಪ್ ಸಭೆ ಜುಲೈ 9ರಿಂದ 12ರವರೆಗೂ ನಡೆಯಲಿದೆ. 29 ದೇಶಗಳಿಂದ 50 ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ
ಹಂಪಿ
Follow us
|

Updated on: Jul 09, 2023 | 5:43 PM

ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಜಿ20 ಶೃಂಗಸಭೆ (G20 Summit) ನಿಮಿತ್ತ ಇಂದಿನಿಂದ ಜುಲೈ 12ರವರೆಗೆ ಸಂಸ್ಕೃತಿ ಕಾರ್ಯಕಾರಿ ಗುಂಪಿನ (Culture Working Group) 3ನೇ ಸಭೆ ನಡೆಯಲಿದೆ. ಜಿ20 ಗುಂಪಿನ ಸದಸ್ಯ ದೇಶಗಳು, ಅತಿಥಿ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಿಯೋಗಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 29 ದೇಶಗಳಿಂದ 50 ಪ್ರತಿನಿಧಿಗಳು ಇದರಲ್ಲಿ ಇರಲಿದ್ದಾರೆ. ಇಂದು ನಡೆಯುವ ಉದ್ಘಾಟನೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಸಂಸ್ಕೃತಿ ಖಾತೆಯ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಮತ್ತು ಮೀನಾಕ್ಷಿ ಲೇಖಿ ಅವರು ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಸಂಸ್ಕೃತಿ ಕಾರ್ಯಕಾರಿ ಗುಂಪಿನ ಹಿಂದಿನ ಎರಡು ಸಭೆಗಳು ಕಜುರಾವೋ ಮತ್ತು ಭುವನೇಶ್ವರದಲ್ಲಿ ನಡೆದಿದ್ದವು. ವಾರಾಣಸಿಯಲ್ಲಿ ನಾಲ್ಕನೇ ಸಿಡಬ್ಲ್ಯುಜಿ ಸಭೆ ನಡೆಯುತ್ತದೆ. ಸೆಪ್ಟಂಬರ್​ನಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು ಅದರ ನಿಮಿತ್ತ ಕಳೆದ ಕೆಲ ತಿಂಗಳಿಂದ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಪೂರಕ ಸಭೆಗಳು ನಡೆಯುತ್ತಾ ಬಂದಿವೆ. ಬೆಂಗಳೂರಿನಲ್ಲೂ ಸಭೆಗಳು ನಡೆದಿದ್ದವು.

ಇದನ್ನೂ ಓದಿPMLA: ಜಿಎಸ್​ಟಿ ವಂಚನೆ ಎಸಗುವವರಿಗೆ ಕಾದಿದೆ ಇಡಿ ಕುಣಿಕೆ; ಪಿಎಂಎಲ್​ಎ ವ್ಯಾಪ್ತಿಗೆ ಜಿಎಸ್​ಟಿಎನ್ ಸೇರಿಸಿದ ಸರ್ಕಾರ

ಕಲ್ಚರ್ ವರ್ಕಿಂಗ್ ಗ್ರೂಪ್​ಗೆ ನಾಲ್ಕು ಆದ್ಯತೆಗಳನ್ನು ಕೊಡಲಾಗಿದೆ. ಸಾಂಸ್ಕೃತಿಕ ಆಸ್ತಿಗಳ ರಕ್ಷಣೆ, ಪರಂಪರೆ ಮುಂದುವರಿಕೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಉದ್ಯಮಗಳ ಬೆಳವಣಿಗೆ, ಸಂಸ್ಕೃತಿಯ ರಕ್ಷಣೆ ಮತ್ತು ಪ್ರಚಾರಕ್ಕೆ ತಂತ್ರಜ್ಞಾನದ ಬಳಕೆ ಈ ನಾಲ್ಕು ವಿಚಾರಗಳನ್ನು ಆದ್ಯತೆಯಾಗಿ ಪರಿಗಣಿಸುವಂತೆ ಜಿ20ಯ ಸಂಸ್ಕೃತಿ ಕಾರ್ಯಕಾರಿ ಗುಂಪಿಗೆ ತಿಳಿಸಲಾಗಿದೆ.

ಜಿ20 ಸಿಡಬ್ಲ್ಯುಜಿ ಸಭೆಯ ಪ್ರತಿನಿಧಿಗಳಿಗೆ ಹಂಪಿ ಪರಿಚಯ

ಭಾರತದ ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗುವ ವಿಜಯನಗರ ಅರಸರಿಗೆ ರಾಜಧಾನಿಯಾದ ಹಂಪಿಯನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳ ಎಂದು ಘೋಷಿಸಿದೆ. ಹಂಪಿಯ ಅಂದಿನ ವೈಭವ ಸ್ಥಿತಿ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿವಿಧ ದೇಶಗಳ ಪ್ರತಿನಿಧಿಗಳಿಗೆ ತಿಳಿಸಲಾಗುತ್ತದೆ. ಹಂಪಿಯಲ್ಲಿರುವ ಡಿಜಿಟಲ್ ಮ್ಯೂಸಿಯಂಗೆ ಭೇಟಿ, ಗಂಜೀಫ ಕಲೆ, ಬಿದರಿ ಕಲೆ, ಕಿನ್ಹಾಳ ಕರಕುಶಲ ತಜ್ಞರ ಜೊತೆ ಈ ಪ್ರತಿನಿಧಿಗಳು ಸಂವಾದಿಸಲಿದ್ದಾರೆ. ಹಾಗೆಯೇ, ಲಂಬಾಣಿ ಸಮುದಾಯದ ಕುಶಲಕರ್ಮಿಗಳ ಭೇಟಿಯೂ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ