AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

G20 Culture Working Group Meeting in Hampi: ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಜಿ20 ಶೃಂಗಸಭೆ ನಿಮಿತ್ತ ಹಂಪಿಯಲ್ಲಿ 3ನೇ ಕಲ್ಚರ್ ವರ್ಕಿಂಗ್ ಗ್ರೂಪ್ ಸಭೆ ಜುಲೈ 9ರಿಂದ 12ರವರೆಗೂ ನಡೆಯಲಿದೆ. 29 ದೇಶಗಳಿಂದ 50 ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ
ಹಂಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 09, 2023 | 5:43 PM

Share

ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಜಿ20 ಶೃಂಗಸಭೆ (G20 Summit) ನಿಮಿತ್ತ ಇಂದಿನಿಂದ ಜುಲೈ 12ರವರೆಗೆ ಸಂಸ್ಕೃತಿ ಕಾರ್ಯಕಾರಿ ಗುಂಪಿನ (Culture Working Group) 3ನೇ ಸಭೆ ನಡೆಯಲಿದೆ. ಜಿ20 ಗುಂಪಿನ ಸದಸ್ಯ ದೇಶಗಳು, ಅತಿಥಿ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಿಯೋಗಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 29 ದೇಶಗಳಿಂದ 50 ಪ್ರತಿನಿಧಿಗಳು ಇದರಲ್ಲಿ ಇರಲಿದ್ದಾರೆ. ಇಂದು ನಡೆಯುವ ಉದ್ಘಾಟನೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಸಂಸ್ಕೃತಿ ಖಾತೆಯ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಮತ್ತು ಮೀನಾಕ್ಷಿ ಲೇಖಿ ಅವರು ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಸಂಸ್ಕೃತಿ ಕಾರ್ಯಕಾರಿ ಗುಂಪಿನ ಹಿಂದಿನ ಎರಡು ಸಭೆಗಳು ಕಜುರಾವೋ ಮತ್ತು ಭುವನೇಶ್ವರದಲ್ಲಿ ನಡೆದಿದ್ದವು. ವಾರಾಣಸಿಯಲ್ಲಿ ನಾಲ್ಕನೇ ಸಿಡಬ್ಲ್ಯುಜಿ ಸಭೆ ನಡೆಯುತ್ತದೆ. ಸೆಪ್ಟಂಬರ್​ನಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು ಅದರ ನಿಮಿತ್ತ ಕಳೆದ ಕೆಲ ತಿಂಗಳಿಂದ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಪೂರಕ ಸಭೆಗಳು ನಡೆಯುತ್ತಾ ಬಂದಿವೆ. ಬೆಂಗಳೂರಿನಲ್ಲೂ ಸಭೆಗಳು ನಡೆದಿದ್ದವು.

ಇದನ್ನೂ ಓದಿPMLA: ಜಿಎಸ್​ಟಿ ವಂಚನೆ ಎಸಗುವವರಿಗೆ ಕಾದಿದೆ ಇಡಿ ಕುಣಿಕೆ; ಪಿಎಂಎಲ್​ಎ ವ್ಯಾಪ್ತಿಗೆ ಜಿಎಸ್​ಟಿಎನ್ ಸೇರಿಸಿದ ಸರ್ಕಾರ

ಕಲ್ಚರ್ ವರ್ಕಿಂಗ್ ಗ್ರೂಪ್​ಗೆ ನಾಲ್ಕು ಆದ್ಯತೆಗಳನ್ನು ಕೊಡಲಾಗಿದೆ. ಸಾಂಸ್ಕೃತಿಕ ಆಸ್ತಿಗಳ ರಕ್ಷಣೆ, ಪರಂಪರೆ ಮುಂದುವರಿಕೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಉದ್ಯಮಗಳ ಬೆಳವಣಿಗೆ, ಸಂಸ್ಕೃತಿಯ ರಕ್ಷಣೆ ಮತ್ತು ಪ್ರಚಾರಕ್ಕೆ ತಂತ್ರಜ್ಞಾನದ ಬಳಕೆ ಈ ನಾಲ್ಕು ವಿಚಾರಗಳನ್ನು ಆದ್ಯತೆಯಾಗಿ ಪರಿಗಣಿಸುವಂತೆ ಜಿ20ಯ ಸಂಸ್ಕೃತಿ ಕಾರ್ಯಕಾರಿ ಗುಂಪಿಗೆ ತಿಳಿಸಲಾಗಿದೆ.

ಜಿ20 ಸಿಡಬ್ಲ್ಯುಜಿ ಸಭೆಯ ಪ್ರತಿನಿಧಿಗಳಿಗೆ ಹಂಪಿ ಪರಿಚಯ

ಭಾರತದ ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗುವ ವಿಜಯನಗರ ಅರಸರಿಗೆ ರಾಜಧಾನಿಯಾದ ಹಂಪಿಯನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳ ಎಂದು ಘೋಷಿಸಿದೆ. ಹಂಪಿಯ ಅಂದಿನ ವೈಭವ ಸ್ಥಿತಿ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿವಿಧ ದೇಶಗಳ ಪ್ರತಿನಿಧಿಗಳಿಗೆ ತಿಳಿಸಲಾಗುತ್ತದೆ. ಹಂಪಿಯಲ್ಲಿರುವ ಡಿಜಿಟಲ್ ಮ್ಯೂಸಿಯಂಗೆ ಭೇಟಿ, ಗಂಜೀಫ ಕಲೆ, ಬಿದರಿ ಕಲೆ, ಕಿನ್ಹಾಳ ಕರಕುಶಲ ತಜ್ಞರ ಜೊತೆ ಈ ಪ್ರತಿನಿಧಿಗಳು ಸಂವಾದಿಸಲಿದ್ದಾರೆ. ಹಾಗೆಯೇ, ಲಂಬಾಣಿ ಸಮುದಾಯದ ಕುಶಲಕರ್ಮಿಗಳ ಭೇಟಿಯೂ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ