AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

G20 Culture Working Group Meeting in Hampi: ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಜಿ20 ಶೃಂಗಸಭೆ ನಿಮಿತ್ತ ಹಂಪಿಯಲ್ಲಿ 3ನೇ ಕಲ್ಚರ್ ವರ್ಕಿಂಗ್ ಗ್ರೂಪ್ ಸಭೆ ಜುಲೈ 9ರಿಂದ 12ರವರೆಗೂ ನಡೆಯಲಿದೆ. 29 ದೇಶಗಳಿಂದ 50 ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ
ಹಂಪಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 09, 2023 | 5:43 PM

ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಜಿ20 ಶೃಂಗಸಭೆ (G20 Summit) ನಿಮಿತ್ತ ಇಂದಿನಿಂದ ಜುಲೈ 12ರವರೆಗೆ ಸಂಸ್ಕೃತಿ ಕಾರ್ಯಕಾರಿ ಗುಂಪಿನ (Culture Working Group) 3ನೇ ಸಭೆ ನಡೆಯಲಿದೆ. ಜಿ20 ಗುಂಪಿನ ಸದಸ್ಯ ದೇಶಗಳು, ಅತಿಥಿ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಿಯೋಗಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 29 ದೇಶಗಳಿಂದ 50 ಪ್ರತಿನಿಧಿಗಳು ಇದರಲ್ಲಿ ಇರಲಿದ್ದಾರೆ. ಇಂದು ನಡೆಯುವ ಉದ್ಘಾಟನೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಸಂಸ್ಕೃತಿ ಖಾತೆಯ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಮತ್ತು ಮೀನಾಕ್ಷಿ ಲೇಖಿ ಅವರು ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಸಂಸ್ಕೃತಿ ಕಾರ್ಯಕಾರಿ ಗುಂಪಿನ ಹಿಂದಿನ ಎರಡು ಸಭೆಗಳು ಕಜುರಾವೋ ಮತ್ತು ಭುವನೇಶ್ವರದಲ್ಲಿ ನಡೆದಿದ್ದವು. ವಾರಾಣಸಿಯಲ್ಲಿ ನಾಲ್ಕನೇ ಸಿಡಬ್ಲ್ಯುಜಿ ಸಭೆ ನಡೆಯುತ್ತದೆ. ಸೆಪ್ಟಂಬರ್​ನಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು ಅದರ ನಿಮಿತ್ತ ಕಳೆದ ಕೆಲ ತಿಂಗಳಿಂದ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಪೂರಕ ಸಭೆಗಳು ನಡೆಯುತ್ತಾ ಬಂದಿವೆ. ಬೆಂಗಳೂರಿನಲ್ಲೂ ಸಭೆಗಳು ನಡೆದಿದ್ದವು.

ಇದನ್ನೂ ಓದಿPMLA: ಜಿಎಸ್​ಟಿ ವಂಚನೆ ಎಸಗುವವರಿಗೆ ಕಾದಿದೆ ಇಡಿ ಕುಣಿಕೆ; ಪಿಎಂಎಲ್​ಎ ವ್ಯಾಪ್ತಿಗೆ ಜಿಎಸ್​ಟಿಎನ್ ಸೇರಿಸಿದ ಸರ್ಕಾರ

ಕಲ್ಚರ್ ವರ್ಕಿಂಗ್ ಗ್ರೂಪ್​ಗೆ ನಾಲ್ಕು ಆದ್ಯತೆಗಳನ್ನು ಕೊಡಲಾಗಿದೆ. ಸಾಂಸ್ಕೃತಿಕ ಆಸ್ತಿಗಳ ರಕ್ಷಣೆ, ಪರಂಪರೆ ಮುಂದುವರಿಕೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಉದ್ಯಮಗಳ ಬೆಳವಣಿಗೆ, ಸಂಸ್ಕೃತಿಯ ರಕ್ಷಣೆ ಮತ್ತು ಪ್ರಚಾರಕ್ಕೆ ತಂತ್ರಜ್ಞಾನದ ಬಳಕೆ ಈ ನಾಲ್ಕು ವಿಚಾರಗಳನ್ನು ಆದ್ಯತೆಯಾಗಿ ಪರಿಗಣಿಸುವಂತೆ ಜಿ20ಯ ಸಂಸ್ಕೃತಿ ಕಾರ್ಯಕಾರಿ ಗುಂಪಿಗೆ ತಿಳಿಸಲಾಗಿದೆ.

ಜಿ20 ಸಿಡಬ್ಲ್ಯುಜಿ ಸಭೆಯ ಪ್ರತಿನಿಧಿಗಳಿಗೆ ಹಂಪಿ ಪರಿಚಯ

ಭಾರತದ ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗುವ ವಿಜಯನಗರ ಅರಸರಿಗೆ ರಾಜಧಾನಿಯಾದ ಹಂಪಿಯನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳ ಎಂದು ಘೋಷಿಸಿದೆ. ಹಂಪಿಯ ಅಂದಿನ ವೈಭವ ಸ್ಥಿತಿ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿವಿಧ ದೇಶಗಳ ಪ್ರತಿನಿಧಿಗಳಿಗೆ ತಿಳಿಸಲಾಗುತ್ತದೆ. ಹಂಪಿಯಲ್ಲಿರುವ ಡಿಜಿಟಲ್ ಮ್ಯೂಸಿಯಂಗೆ ಭೇಟಿ, ಗಂಜೀಫ ಕಲೆ, ಬಿದರಿ ಕಲೆ, ಕಿನ್ಹಾಳ ಕರಕುಶಲ ತಜ್ಞರ ಜೊತೆ ಈ ಪ್ರತಿನಿಧಿಗಳು ಸಂವಾದಿಸಲಿದ್ದಾರೆ. ಹಾಗೆಯೇ, ಲಂಬಾಣಿ ಸಮುದಾಯದ ಕುಶಲಕರ್ಮಿಗಳ ಭೇಟಿಯೂ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​