AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿಯಲ್ಲಿ ಭಾರತದ ಗಗನಯಾನ ಮಿಷನ್; ಮಾನವ ಬದಲು ವ್ಯೋಮಿತ್ರ ಪ್ರಯಾಣ

Gaganyaan mission of India: 2027ಕ್ಕೆ ಬಾಹ್ಯಾಕಾಶಕ್ಕೆ ಮಾನವರನ್ನು ಕಳುಹಿಸುವ ಗುರಿ ಹೊಂದಿರುವ ಭಾರತ, ಇದಕ್ಕೆ ಮುನ್ನ ಮೂರು ಮಾನವರಹಿತ ಸ್ಪೇಸ್ ಮಿಷನ್ ಕೈಗೊಳ್ಳಲಿದೆ. ಅದರ ಮೊದಲ ಮಿಷನ್ 2025ರೊಳಗೆ ಆರಂಭವಾಗಿತ್ತು. ಇದು ವಿಳಂಬವಾಗಲಿದ್ದು, 2026ರ ಜನವರಿಗೆ ಚಾಲನೆಗೊಳ್ಳಲಿದೆ. ಮೂರು ಮಾನವರಹಿತ ಮಿಷನ್ ಪೂರ್ಣಗೊಂಡ ಬಳಿಕ ಮಾನವ ಸಹಿತ ಮಿಷನ್ ಅನ್ನು ಇಸ್ರೋ ಕೈಗೊಳ್ಳಿದೆ,

ಜನವರಿಯಲ್ಲಿ ಭಾರತದ ಗಗನಯಾನ ಮಿಷನ್; ಮಾನವ ಬದಲು ವ್ಯೋಮಿತ್ರ ಪ್ರಯಾಣ
ಗಗನಯಾನ್ ಮಿಷನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 06, 2025 | 12:16 PM

Share

ನವದೆಹಲಿ, ನವೆಂಬರ್ 6: ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯ ಆರಂಭ ತುಸು ವಿಳಂಬವಾಗಲಿದೆ. ಈ ವರ್ಷದೊಳಗೆ ಗಗನಯಾನ ಮಿಷನ್ (Gaganyaan mission) ಚಾಲನೆಗೊಳ್ಳಬೇಕೆಂದು ಮೊದಲಿಗೆ ಗುರಿ ಇಡಲಾಗಿತ್ತು. ಬೇರೆ ಬೇರೆ ಕಾರಣಗಳಿಗೆ ತುಸು ತಡವಾಗಿ ಆರಂಭವಾಗುವ ಸಾಧ್ಯತೆ ಇದೆ. ಇಸ್ರೋ ಛೇರ್ಮನ್ ವಿ ನಾರಾಯಣನ್ ಅವರು ಇತ್ತೀಚೆಗೆ ನೀಡಿದ ಮಾಹಿತಿ ಪ್ರಕಾರ ಜನವರಿಯಲ್ಲಿ (2026) ಗಗನಯಾನ ಮಿಷನ್​ನಲ್ಲಿ ಮೊದಲ ಸ್ಪೇಸ್​ಫ್ಲೈಟ್ ಹಾರಬಹುದು.

ಅಮೆರಿಕದ ನಾಸಾ ಸಂಸ್ಥೆ ಬಾಹ್ಯಾಕಾಶದಲ್ಲಿ ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಷನ್ (ಐಎಸ್​ಎಸ್) ಅನ್ನು ನಿರ್ಮಿಸಿದ ರೀತಿಯಲ್ಲಿ ಭಾರತವೂ ಕೂಡ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ (ಭಾರತೀಯ ಅಂತರಿಕ್ಷ ನಿಲ್ದಾಣ) ನಿರ್ಮಿಸುವ ಯೋಜನೆಯನ್ನು 2028ಕ್ಕೆ ಆರಂಭಿಸುವ ನಿರೀಕ್ಷೆ ಇದೆ. 2027ಕ್ಕೆ ಮಾನವಸಹಿತ ಗಗನಯಾನ ಯೋಜನೆಯನ್ನು (Crewed mission) ನಡೆಸುವ ಗುರಿ ಇಟ್ಟಿದೆ. ಅಷ್ಟರೊಳಗೆ ಮಾನವರಹಿತವಾದ  (Uncrewed mission) ಮೂರು ಸ್ಪೇಸ್​ಫ್ಲೈಟ್ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ಈ ಊಬರ್ ಡ್ರೈವರ್ ವಯಸ್ಸು 86, ಆಗರ್ಭ ಶ್ರೀಮಂತ, ದೊಡ್ಡ ಉದ್ಯಮಿ; ಆದರೆ ಡ್ರೈವಿಂಗ್ ಕೆಲಸ ಯಾಕೆ ಗೊತ್ತಾ?

2027ಕ್ಕೆ ಗಗನಯಾನದಲ್ಲಿ ಮನುಷ್ಯರನ್ನು ಕಳುಹಿಸುವ ಮುನ್ನ ಈ ಮೂರೂ ಮಾನವರಹಿತ ಮಿಷನ್ ಪೂರ್ಣಗೊಳಿಸಲಾಗುತ್ತದೆ. ಅದಕ್ಕಾಗಿ, ವ್ಯೋಮಿತ್ರ ಎನ್ನುವ ಮಾನವ ರೂಪದ ರೋಬೋವನ್ನು ನಿರ್ಮಿಸಲಾಗಿದೆ. ಈ ಮೂರೂ ಮಿಷನ್​ಗಳಲ್ಲಿ ವ್ಯೋಮಿತ್ರ ಪ್ರಯಾಣಿಸಲಿದ್ದು, ಬಾಹ್ಯಾಕಾಶದಲ್ಲಿ ಮನುಷ್ಯರ ಇರುವಿಕೆಗೆ ಇಷ್ಟ ಕಷ್ಟವಾಗುವ ಅಂಶಗಳೇನು ಎಂಬುದನ್ನು ಈ ವ್ಯೋಮಿತ್ರ ಸಹಾಯದಿಂದ ವಿವಿಧ ಪ್ರಯೋಗಗಳ ಮೂಲಕ ತಿಳಿದುಕೊಳ್ಳುವ ಪ್ರಯತ್ನ ನಡೆಯುತ್ತದೆ. ಮನುಷ್ಯರ ಪ್ರಯಾಣ ನೂರಕ್ಕೆ ನೂರು ಸುರಕ್ಷಿತ ಎಂಬುದು ಖಾತ್​ರಿಯಾದ ಬಳಿಕವಷ್ಟೇ ಮಾನವಸಹಿತ ಗಗನಯಾನ ಮಿಷನ್ ಕೈಗೊಳ್ಳಲಾಗುತ್ತದೆ.

ಇಸ್ರೋ ಛೇರ್ಮನ್ ವಿ ನಾರಾಯಣನ್ ಇತ್ತೀಚೆಗೆ ನೀಡಿದ ಮಾಹಿತಿ ಪ್ರಕಾರ, ಗಗನಯಾನ ಮಿಷನ್​ನ ಭಾಗವಾಗಿ 8,000ಕ್ಕೂ ಅಧಿಕ ಪರೀಕ್ಷೆಗಳನ್ನು ನಡೆಸಲಾಗಿದೆ. ಎಲ್ಲಾ ಅಗತ್ಯ ತಯಾರಿ ನಡೆಯುತ್ತಿದೆ. ಗಗನನೌಕೆಗೆ ಬೇಕಾದ ಎಲ್ಲಾ ಹಾರ್ಡ್​ವೇರ್ ಭಾಗಗಳು ಸತೀಶ್ ಧವನ್ ಸ್ಪೇಸ್ ಸೆಂಟರ್​ನಲ್ಲಿ ತಲುಪಿವೆ. ಅವುಗಳನ್ನು ಜೋಡಿಸುವ ಕೆಲಸ ನಡೆಯುತ್ತಿದೆ.

ಇದನ್ನೂ ಓದಿ: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ಪತ್ನಿಗೆ ಕೊಟ್ಟ 12 ಕೋಟಿ ರೂ ಬೆಲೆಯ ಫ್ಯಾಂಟಂ ಕಾರು

ಮೊದಲ ಮಾನವರಹಿತ ಗಗನಯಾನ್ ಮಿಷನ್ ಡಿಸೆಂಬರ್​ನಲ್ಲಿ ಶುರುವಾಗಬೇಕಿತ್ತು. ಇದರ ಬದಲು ಜನವರಿಯಲ್ಲಿ ಶುರುವಾಗಿ ಮಾರ್ಚ್ ಅಥವಾ ಏಪ್ರಿಲ್​ವರೆಗೂ ಮಿಷನ್ ಇರುತ್ತದೆ. ಅದಕ್ಕೆ ಜಿ1 ಮಿಷನ್ ಎಂದು ಹೆಸರಿಡಲಾಗಿದೆ. ಅದಾದ ಬಳಿಕ ಜಿ2 ಮತ್ತು ಜಿ3 ಮಿಷನ್ ನಡೆಯುತ್ತವೆ.

ಮೂರೇ ದೇಶಗಳಿಂದ ಮಾತ್ರ ಈ ಸಾಧನೆ

ಮನುಷ್ಯರನ್ನು ಬಾಹ್ಯಾಕಾಶಕ್ಕೆ ಕಳುಹಿಸಿರುವ ದೇಶಗಳ ಸಂಖ್ಯೆ ಮೂರೇ ಇರುವುದು. ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಮಾತ್ರ ಮನುಷ್ಯರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಸಾಮರ್ಥ್ಯ ತೋರಿವೆ. 2027ಕ್ಕೆ ಭಾರತದ ಗಗನಯಾನ ಯೋಜನೆ ಯಶಸ್ವಿಯಾದರೆ ಈ ಪಟ್ಟಿಗೆ ಭಾರತ 4ನೇ ದೇಶವಾಗಿ ಸೇರ್ಪಡೆಯಾಗುತ್ತದೆ. ಭೂಮಿಯಿಂದ 400 ಕಿಮೀ ಎತ್ತರದ ಕಕ್ಷೆಗೆ ಗಗನಯಾನ ನೌಕೆ ಹೋಗುತ್ತದೆ. 2-3 ಮಂದಿ ಗಗನಯಾತ್ರಿಕರನ್ನು ಕರೆದೊಯ್ಯುವ ಗುರಿ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ