AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GAIL: ಗೇಲ್​ನಿಂದ ಪ್ರತಿ ಷೇರಿಗೆ ರೂ. 4ರ ಮಧ್ಯಂತರ ಲಾಭಾಂಶ ಘೋಷಣೆ

ಗೇಲ್ ಇಂಡಿಯಾ ಮಧ್ಯಂತರ ಲಾಭಾಂಶವಾಗಿ ರೂ. 4 ಅನ್ನು ಡಿಸೆಂಬರ್ 23ನೇ ತಾರೀಕಿನಂದು ಘೋಷಣೆ ಮಾಡಿದೆ. ರೆಕಾರ್ಡ್ ದಿನಾಂಕ ಮತ್ತಿತರ ವಿವರ ಇಲ್ಲಿದೆ.

GAIL: ಗೇಲ್​ನಿಂದ ಪ್ರತಿ ಷೇರಿಗೆ ರೂ. 4ರ ಮಧ್ಯಂತರ ಲಾಭಾಂಶ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2021 | 3:05 PM

Share

ಹಣಕಾಸು ವರ್ಷ 2021-22ಕ್ಕಾಗಿ ಗೇಲ್ (ಇಂಡಿಯಾ) ಲಿಮಿಟೆಡ್ ಗುರುವಾರ ತನ್ನ ಸಭೆಯಲ್ಲಿ ಮಂಡಳಿಯು ಪ್ರತಿ ಷೇರಿಗೆ 4 ರೂಪಾಯಿಯ ಮಧ್ಯಂತರ ಲಾಭಾಂಶವನ್ನು (Interim dividend) ಪಾವತಿಸಲು ಅನುಮೋದಿಸಿದೆ ಎಂದು ಘೋಷಿಸಿದೆ. ಮಧ್ಯಂತರ ಲಾಭಾಂಶಕ್ಕೆ ‘ರೆಕಾರ್ಡ್ ದಿನಾಂಕ’ ಅಂದರೆ ಶುಕ್ರವಾರ, ಡಿಸೆಂಬರ್ 31, 2021 ನಿಗದಿಪಡಿಸಲಾಗಿದೆ ಎಂದು ಅದು ಸೇರಿಸಿದೆ. “ಕಂಪೆನಿಯ ನಿರ್ದೇಶಕರ ಮಂಡಳಿಯು ಇಂದು (23.12.2021ರಂದು) ನಡೆದ 435ನೇ ಸಭೆಯಲ್ಲಿ ಪೇಯ್ಡ್ ಅಪ್ ಕ್ಯಾಪಿಟಲ್ ಮೇಲೆ FY 2021-22ರಲ್ಲಿ ಶೇ 40ರಷ್ಟು (ಪ್ರತಿ ಈಕ್ವಿಟಿ ಷೇರಿಗೆ 4) ಡಿವಿಡೆಂಡ್ ಅನುಮೋದಿಸಿದೆ,” ಎಂದು ಕಂಪೆನಿಯು ವಿನಿಮಯ ಫೈಲಿಂಗ್‌ನಲ್ಲಿ ತಿಳಿಸಿದೆ.

ಗೇಲ್ ಷೇರುಗಳು ಗುರುವಾರ ಮಧ್ಯಾಹ್ನದ ವಹಿವಾಟಿನಲ್ಲಿ ಬಿಎಸ್​ಇನಲ್ಲಿ ರೂ. 132ರಂತೆ ಶೇ 2ಕ್ಕಿಂತ ಹೆಚ್ಚಿನ ಏರಿಕೆ ದರದಲ್ಲಿ ವಹಿವಾಟು ನಡೆಸುತ್ತಿದ್ದವು. ಇತ್ತೀಚಿನ “ಬುಲ್ ಮಾರ್ಕೆಟ್”ನಲ್ಲಿ ಸ್ಟಾಕ್ ಸ್ವಲ್ಪಮಟ್ಟಿಗೆ ಮಂದ ಪ್ರದರ್ಶನ ತೋರಿದೆ. ಏಕೆಂದರೆ ಇದು ಬೆಂಚ್‌ಮಾರ್ಕ್ ಸೆನ್ಸೆಕ್ಸ್‌ನಲ್ಲಿನ ಸುಮಾರು ಶೇ 20ರ ಏರಿಕೆಗೆ ಹೋಲಿಸಿದರೆ ಕೇವಲ ಶೇ 7ರಷ್ಟು ಹೆಚ್ಚಳವಾಗಿದೆ. ಒಂದು ವರ್ಷದ ಅವಧಿಯಲ್ಲಿ ಗೇಲ್ ಷೇರುಗಳು ಶೇ 11ಕ್ಕಿಂತ ಹೆಚ್ಚಿವೆ.

ಗೇಲ್ (ಇಂಡಿಯಾ) ಲಿಮಿಟೆಡ್ ಭಾರತದ ಪ್ರಮುಖ ನೈಸರ್ಗಿಕ ಅನಿಲ ಕಂಪೆನಿಯಾಗಿದೆ. ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಪಿಎಸ್‌ಯು ಹಿಂದಿನ ವರ್ಷದ ಅವಧಿಯಲ್ಲಿ ರೂ. 1,239.6 ಕೋಟಿಗೆ ಹೋಲಿಸಿದರೆ ರೂ. 2,862.9 ಕೋಟಿ ನಿವ್ವಳ ಲಾಭವನ್ನು ವರದಿ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ 13,647 ಕೋಟಿ ರೂಪಾಯಿಯಿಂದ ಪರಿಶೀಲನೆಯಲ್ಲಿರುವ ತ್ರೈಮಾಸಿಕದಲ್ಲಿ ಕಾರ್ಯಾಚರಣೆಗಳಿಂದ ಅದರ ಆದಾಯವು ರೂ.21,515 ಕೋಟಿಗೆ ಶೇ 57.6ಕ್ಕೆ ಹೆಚ್ಚಾಗಿದೆ.

ಇದನ್ನೂ ಓದಿ: Tech Mahindra: ಟೆಕ್​ ಮಹೀಂದ್ರಾ ಎರಡನೇ ತ್ರೈಮಾಸಿಕ ಲಾಭ ಶೇ 26ರಷ್ಟು ಹೆಚ್ಚಳ; 15 ರೂ. ವಿಶೇಷ ಡಿವಿಡೆಂಡ್ ಘೋಷಣೆ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ