AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂತಾನ್ ರಾಜ ಮತ್ತು ಪ್ರಧಾನಿ ಭೇಟಿ ಮಾಡಿದ ಗೌತಮ್ ಅದಾನಿ; 570 ಮೆವ್ಯಾ ಗ್ರೀನ್ ಹೈಡ್ರೋ ಯೋಜನೆಗೆ ಸಹಿ

Gautam Adani meets Bhutan King and PM: ಗೌತಮ್ ಅದಾನಿ ಅವರು ಭೂತಾನ್​ನಲ್ಲಿ 570 ಮೆಗಾವ್ಯಾಟ್ ಸಾಮರ್ಥ್ಯದ ಗ್ರೀನ್ ಹೈಡ್ರೋ ವಿದ್ಯುತ್ ಯೋಜನೆಯ ಗುತ್ತಿಗೆ ಪಡೆದಿದ್ದಾರೆ. ಭೂತಾನ್​ಗೆ ಭೇಟಿ ನೀಡಿರುವ ಅವರು ಮೊನ್ನೆ ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭೂತಾನ್​ನಲ್ಲಿ ಅವರು ಅಲ್ಲಿನ ದೊರೆ ಮತ್ತು ಪ್ರಧಾನಿಯವರನ್ನು ಭೇಟಿ ಮಾಡಿದ್ದಾರೆ.

ಭೂತಾನ್ ರಾಜ ಮತ್ತು ಪ್ರಧಾನಿ ಭೇಟಿ ಮಾಡಿದ ಗೌತಮ್ ಅದಾನಿ; 570  ಮೆವ್ಯಾ ಗ್ರೀನ್ ಹೈಡ್ರೋ ಯೋಜನೆಗೆ ಸಹಿ
ಭೂತಾನ್ ಪ್ರಧಾನಿ ಮತ್ತು ರಾಜರನ್ನು ಭೇಟಿ ಮಾಡಿದ ಗೌತಮ್ ಅದಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 18, 2024 | 12:32 PM

Share

ನವದೆಹಲಿ, ಜೂನ್ 18: ಭಾರತದ ಎರಡನೇ ಅತಿಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರು ಭೂತಾನ್ ದೆಶದಲ್ಲಿ 570 ಮೆಗಾವ್ಯಾಟ್ ಗ್ರೀನ್ ಹೈಡ್ರೋ ಪವರ್ ಸ್ಟೇಷನ್ ನಿರ್ಮಿಸುವ ಯೋಜನೆ ಗಿಟ್ಟಿಸಿದ್ದಾರೆ. ಭೂತಾನ್ ದೇಶಕ್ಕೆ ಭೇಟಿ ನೀಡಿ ಅಲ್ಲಿನ ಪ್ರಧಾನಿ ಮತ್ತು ರಾಜರನ್ನು ಭೇಟಿಯಾಗಿರುವ ಅದಾನಿ, ಜಲವಿದ್ಯುತ್ ಘಟನ ಸ್ಥಾಪಿಸುವ ಯೋಜನೆಗೆ ಸಹಿಹಾಕಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭೂತಾನ್ ರಾಜಧಾನಿ ನಗರಿ ಥಿಂಫುದಲ್ಲಿ ದೊರೆ ಜಿಗ್ಮೆ ಖೇಸರ್ ನಾಮ್​ಗ್ಯೆಲ್ ವಾಂಗ್​ಚುಕ್ (Bhutan King Jigme Khesar Namgyel Wangchuck) ಮತ್ತು ಪ್ರಧಾನಿ ದಶೋ ಶೆರಿಂಗ್ ಟೋಬ್ಗೇ (Dasho Tshering Tobgay) ಅವರನ್ನು ಮೊನ್ನೆ ಭಾನುವಾರ ಅದಾನಿ ಭೇಟಿಯಾಗಿ ಮಾತನಾಡಿದ ಬಳಿಕ ಯೋಜನೆಗೆ ಸಹಿ ಹಾಕಿದ ವಿಚಾರ ಪ್ರಕಟಿಸಿದ್ದಾರೆ.

‘ಭೂತಾನ್ ಮಹಾರಾಜರಾದ ಜಿಗ್ಮೆ ಖೇಸರ್ ನಾಮ್​ಗ್ಯೇಲ್ ವಾಂಗ್​ಚುಕ್ ಅವರನ್ನು ಭೇಟಿ ಮಾಡಲಾಯಿತು. ಗೆಲೆಫು ಮೈಂಡ್​ಫುಲ್ ಸಿಟಿಯನ್ನು ಪರಿಸರಸ್ನೇಹಿಯಾಗಿ ನಿರ್ಮಿಸುವ ಅವರ ದೃಷ್ಟಿಕೋನದಿಂದ ಸ್ಫೂರ್ತಿ ಸಿಕ್ಕಿದೆ. ಇಂಥ ಪರಿವರ್ತನಾತ್ಮಕವಾದ ಯೋಜನೆಗಳಲ್ಲಿ ಸಹಭಾಗಿಯಾಗಲು ಖುಷಿಯಾಗುತ್ತಿದೆ,’ ಎಂದು ಗೌತಮ್ ಅದಾನಿ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೋಯಿಂಗ್ ವಿಮಾನ ಸಂಸ್ಥೆಗೆ ಸಿಗುತ್ತಿಲ್ಲ ಹೊಸ ಸಿಇಒ; ಚುಕ್ಕಾಣಿ ಹಿಡಿಯಲು ಒಲ್ಲೆ ಎನ್ನುತ್ತಿರುವುದ್ಯಾಕೆ?

ಇಲ್ಲಿ ಭೂತಾನ್​ನ ಗೆಲೆಫುನಲ್ಲಿ ವಿಶ್ವದ ಮೊದಲ ಮೈಂಡ್​ಫುಲ್ ನಗರ ನಿರ್ಮಾಣ ಆಗುತ್ತಿದೆ. ದೇಶದ ಪ್ರಾಚೀನ ಪರಂಪರೆ, ಆಧುನಿಕತೆ, ಪರಿಸರಪೂರಕ ಯೋಜನೆ, ವಿಶೇಷ ಆರ್ಥಿಕ ವಲಯ ಹೀಗೆ ವಿವಿಧ ಅಂಶಗಳು ಮತ್ತು ವಿಶೇಷತೆಗಳು ಈ ಮೈಂಡ್​ಫುಲ್ ಸಿಟಿಯಲ್ಲಿ ಇರಲಿವೆ. ಜನರು ಸಂತೋಷ, ಸಹಭಾಳ್ವೆಯಿಂದ ಬಾಳುವಂತಹ ವಾತಾವರಣ ಈ ಕನಸಿನ ನಗರದಲ್ಲಿ ಇರಲಿದೆ. ಈ ಕನಸನ್ನು ನನಸು ಮಾಡಲು ಭೂತಾನ್ ಹೊರಟಿದೆ. ಗೌತಮ್ ಅದಾನಿ ಇದರ ಭಾಗ ಆಗಿರುವುದು ಭಾರತೀಯರಿಗೂ ಕುತೂಹಲದ ಸಂಗತಿ.

ಈ ಕ್ರಾಂತಿಕಾರಕ ಮಹಾಯೋಜನೆಯ ಭಾಗವಾಗಿ ಚುಖಾ ಪ್ರಾಂತ್ಯದಲ್ಲಿ 570 ಮೆಗಾವ್ಯಾಟ್ ಗ್ರೀನ್ ಹೈಡ್ರೋ ಪ್ರಾಜೆಕ್ಟ್ ಗುತ್ತಿಗೆಯನ್ನು ಅದಾನಿ ಗ್ರೂಪ್ ಪಡೆದಿದೆ. ಭೂತಾನ್​ ಮಹಾರಾಜರನ್ನು ಭೇಟಿ ಮಾಡಿದ ದಿನವೇ ಅವರು ಪ್ರಧಾನಿ ತೋಗ್​ಬೇ ಅವರನ್ನೂ ಭೇಟಿ ಮಾಡಿದ್ದಾರೆ. ಪ್ರಧಾನಿ ಜೊತೆಗಿನ ಭೇಟಿಯ ಫೋಟೋವನ್ನು ಅವರು ಇನ್ಸ್​ಟಾಗ್ರಾಮ್ ಅಕೌಂಟ್​ನಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷದ ನವೆಂಬರ್​ನಲ್ಲೂ ಭೂತಾನ್ ದೊರೆಯನ್ನು ಅದಾನಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Tue, 18 June 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!