AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಷೇರು ಮೌಲ್ಯದ ಮಹಾ ಕುಸಿತದ ಬೆನ್ನಲ್ಲೇ ಕೇಂದ್ರ ಸಚಿವ ಆರ್​ಕೆ ಸಿಂಗ್ ಭೇಟಿಯಾದ ಗೌತಮ್ ಅದಾನಿ

ಹಿಂಡನ್​ಬರ್ಗ್ ರಿಸರ್ಚ್​ ಆರೋಪದಿಂದಾಗಿ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗುತ್ತಿರುವ ಮಧ್ಯೆಯೇ ಕಂಪನಿಯ ಮಾಲೀಕ ಗೌತಮ್ ಅದಾನಿ ಕೇಂದ್ರ ವಿದ್ಯುತ್ ಸಚಿವ ಆರ್​ಕೆ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Gautam Adani: ಷೇರು ಮೌಲ್ಯದ ಮಹಾ ಕುಸಿತದ ಬೆನ್ನಲ್ಲೇ ಕೇಂದ್ರ ಸಚಿವ ಆರ್​ಕೆ ಸಿಂಗ್ ಭೇಟಿಯಾದ ಗೌತಮ್ ಅದಾನಿ
ಗೌತಮ್ ಅದಾನಿImage Credit source: Reuters
ಗಣಪತಿ ಶರ್ಮಾ
|

Updated on:Jan 27, 2023 | 2:50 PM

Share

ನವದೆಹಲಿ: ಹಿಂಡನ್​ಬರ್ಗ್ ರಿಸರ್ಚ್​ (Hindenburg Research) ಆರೋಪದಿಂದಾಗಿ ಅದಾನಿ ಸಮೂಹದ (Adani Group) ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗುತ್ತಿರುವ ಮಧ್ಯೆಯೇ ಕಂಪನಿಯ ಮಾಲೀಕ ಗೌತಮ್ ಅದಾನಿ (Gautam Adani) ಕೇಂದ್ರ ವಿದ್ಯುತ್ ಸಚಿವ ಆರ್​ಕೆ ಸಿಂಗ್ (RK Singh) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಇಬ್ಬರೂ ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಯಾವ ವಿಚಾರವಾಗಿ ಮಾತುಕತೆ ನಡೆದಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಈ ಮಧ್ಯೆ, ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಬಗ್ಗೆ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಲೆಕ್ಕಪತ್ರ ವಂಚನೆ ಮತ್ತು ಷೇರು ಬೆಲೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಅದಾನಿ ಸಮೂಹದ ವಿರುದ್ಧ ಹಿಂಡನ್​ಬರ್ಗ್ ರಿಸರ್ಚ್ ಆರೋಪ ಮಾಡಿತ್ತು.

ಈ ಮಧ್ಯೆ, ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಒಡೆತನದಲ್ಲಿರುವ ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನ ವಹಿವಾಟಿನಲ್ಲಿ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಶೇ 20ರಷ್ಟು ಕುಸಿತವಾಗಿದೆ. ಅದಾನಿ ಟೋಟಲ್ ಗ್ಯಾಸ್ ಷೇರು ಮೌಲ್ಯ ಶೇ 19.65, ಅದಾನಿ ಟ್ರಾನ್ಸ್​​ಮಿಷನ್ ಷೇರು ಮೌಲ್ಯ ಶೇ 19, ಅದಾನಿ ಗ್ರೀನ್​ ಎನರ್ಜಿ ಷೇರು ಮೌಲ್ಯ ಶೇ 15.50ರಷ್ಟು ಕುಸಿದಿದೆ.

ಇದನ್ನೂ ಓದಿ: Adani Stocks: ಹಿಂಡನ್​ಬರ್ಗ್ ಹೊಡೆತದಿಂದ ಇನ್ನೂ ಚೇತರಿಸದ ಅದಾನಿ ಸಮೂಹ; ಷೇರು ಮೌಲ್ಯ ಶೇ 20 ಕುಸಿತ

ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಷೇರು ಮೌಲ್ಯ ಶೇ 5.31, ಅದಾನಿ ವಿಲ್ಮರ್ ಷೇರು ಮೌಲ್ಯ ಶೇ 5 ಹಾಗೂ ಅದಾನಿ ಪವರ್ ಷೇರು ಮೌಲ್ಯ ಶೇ 4.99ರಷ್ಟು ಕುಸಿದಿದೆ. 2020ರ ಮಾರ್ಚ್​ ನಂತರ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಕಂಡುಬಂದಿರುವ ಅತಿದೊಡ್ಡ ಪ್ರಮಾಣದ ಕುಸಿತ ಇದು ಎನ್ನಲಾಗಿದೆ.

ಅದಾನಿ ಎಂಟರ್​ಪ್ರೈಸಸ್ ಷೇರು ಮೌಲ್ಯ ಶೇ 6.19ರಷ್ಟು ಕುಸಿದಿದೆ. ಕಂಪನಿಯು ಎಫ್​​ಪಿಒ ಆರಂಭಿಸಿರುವ ಸಂದರ್ಭದಲ್ಲೇ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿದ್ದು, ದೊಡ್ಡ ಮೊತ್ತದ ಬಂಡವಾಳ ಸಂಗ್ರಹಕ್ಕೆ ಮುಂದಾಗಿರುವ ಕಂಪನಿಗೆ ಹಿನ್ನಡೆ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Fri, 27 January 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ