AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಯು.ಕೆ. ಪ್ರಧಾನಿಯನ್ನು ಭೇಟಿ ಮಾಡಿದ ಗೌತಮ್ ಅದಾನಿ; 7000 ಕೋಟಿ ಯುಎಸ್​ಡಿ ಹೂಡಿಕೆ ಭರವಸೆ

ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಯುನೈಟೆಡ್​ ಕಿಂಗ್​ಡಮ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರನ್ನು ಮಂಗಳವಾರ ಜಾಗತಿಕ ಹೂಡಿಕೆ ಶೃಂಗಸಭೆಯಲ್ಲಿ ಭೇಟಿಯಾದರು. ಮತ್ತು ಅದಾನಿ ಸಮೂಹವು ಸೌರ ಮತ್ತು ಇತರ ಮಾರ್ಗದ ಮೂಲಕ ಶಕ್ತಿಯ ಪರಿವರ್ತನೆಗೆ 70 ಶತಕೋಟಿ ಅಮೆರಿಕನ್ ಡಾಲರ್ ಹೂಡುವುದಾಗಿ ಹೇಳಿದ್ದಾರೆ. ಜಾನ್ಸನ್ ಅವರನ್ನು ಭೇಟಿ ಮಾಡಿದ ನಂತರ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಅದಾನಿ, “ಯುಕೆ ಪಿಎಂ ಬೋರಿಸ್ ಜಾನ್ಸನ್ ಅವರನ್ನು ಜಾಗತಿಕ ಹೂಡಿಕೆ ಶೃಂಗಸಭೆಯಲ್ಲಿ ಭೇಟಿಯಾಗಲು ಗೌರವ ಎನಿಸಿದೆ,” ಎಂದು ಹೇಳಿದ್ದಾರೆ. […]

Gautam Adani: ಯು.ಕೆ. ಪ್ರಧಾನಿಯನ್ನು ಭೇಟಿ ಮಾಡಿದ ಗೌತಮ್ ಅದಾನಿ; 7000 ಕೋಟಿ ಯುಎಸ್​ಡಿ ಹೂಡಿಕೆ ಭರವಸೆ
ಗೌತಮ್ ಅದಾನಿ ಹಾಗೂ ಯು.ಕೆ. ಪ್ರಧಾನಿ ಬೋರಿಸ್ ಜಾನ್ಸನ್ ಭೇಟಿ
TV9 Web
| Edited By: |

Updated on: Oct 20, 2021 | 12:18 PM

Share

ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಯುನೈಟೆಡ್​ ಕಿಂಗ್​ಡಮ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರನ್ನು ಮಂಗಳವಾರ ಜಾಗತಿಕ ಹೂಡಿಕೆ ಶೃಂಗಸಭೆಯಲ್ಲಿ ಭೇಟಿಯಾದರು. ಮತ್ತು ಅದಾನಿ ಸಮೂಹವು ಸೌರ ಮತ್ತು ಇತರ ಮಾರ್ಗದ ಮೂಲಕ ಶಕ್ತಿಯ ಪರಿವರ್ತನೆಗೆ 70 ಶತಕೋಟಿ ಅಮೆರಿಕನ್ ಡಾಲರ್ ಹೂಡುವುದಾಗಿ ಹೇಳಿದ್ದಾರೆ. ಜಾನ್ಸನ್ ಅವರನ್ನು ಭೇಟಿ ಮಾಡಿದ ನಂತರ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಅದಾನಿ, “ಯುಕೆ ಪಿಎಂ ಬೋರಿಸ್ ಜಾನ್ಸನ್ ಅವರನ್ನು ಜಾಗತಿಕ ಹೂಡಿಕೆ ಶೃಂಗಸಭೆಯಲ್ಲಿ ಭೇಟಿಯಾಗಲು ಗೌರವ ಎನಿಸಿದೆ,” ಎಂದು ಹೇಳಿದ್ದಾರೆ.

ಜಾಗತಿಕ ಹವಾಮಾನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹೊಂದಾಣಿಕೆ ಮಾಡುವಲ್ಲಿ ನಾಯಕತ್ವವು ಸ್ಫೂರ್ತಿದಾಯಕ ಎಂದು ಕರೆದ ಅವರು, ಅದಾನಿ ಸಮೂಹವು ಸೌರ, ಗಾಳಿ ಮತ್ತು ಎಚ್2 ಮೂಲಕ ಶಕ್ತಿಯ ಪರಿವರ್ತನೆಗೆ 70 ಬಿಲಿಯನ್ ಯುಎಸ್ ಡಾಲರ್ ಹೂಡುವುದಾಗಿ ಹೇಳಿದ್ದಾರೆ. ಮತ್ತು ಇದಕ್ಕೆ ಅವಕಾಶ ನೀಡಿದ್ದಕ್ಕೆ ಯುನೈಟೆಡ್ ಕಿಂಗ್​ಡಮ್ ಸರ್ಕಾರ ಮತ್ತು ಯುಕೆ ಸರ್ಕಾರದ ವಾಣಿಜ್ಯ ಇಲಾಖೆಗೆ ಧನ್ಯವಾದಗಳು ಎಂದು ಅದಾನಿ ಟ್ವೀಟ್​ ಮಾಡಿದ್ದಾರೆ.

“ಅಧ್ಯಕ್ಷ ಗೌತಮ್ ಅದಾನಿ ಅವರು ಹವಾಮಾನ ಬದಲಾವಣೆಯ ವಿರುದ್ಧ ಸಮಾನ ಮತ್ತು ಪ್ರಾಯೋಗಿಕ ನೀತಿಗಳೊಂದಿಗೆ ಹೋರಾಡಬೇಕು ಎಂದು ಹೇಳುತ್ತಾರೆ. ಲಂಡನ್‌ನಲ್ಲಿ ಯುಕೆ ಸರ್ಕಾರದ ಜಾಗತಿಕ ಹೂಡಿಕೆ ಶೃಂಗಸಭೆಯಲ್ಲಿ ಮಾತನಾಡುತ್ತಾ, ಹವಾಮಾನ ಬಿಕ್ಕಟ್ಟನ್ನು ಜಯಿಸಲು ಪ್ರಾಯೋಗಿಕ ಗುರಿಗಳನ್ನು ಮತ್ತು ಕಾರ್ಯಸೂಚಿಗಳನ್ನು ನಿಗದಿ ಪಡಿಸಲು ಕರೆ ನೀಡಿದರು,” ಎಂದು ಅದಾನಿ ಸಮೂಹ ಮಂಗಳವಾರದ ಟ್ವೀಟ್ ನಲ್ಲಿ ಹೇಳಿದೆ. (ANI)

ಇದನ್ನೂ ಓದಿ: Top 10 Richest Indian 2021: ಗೌತಮ್ ಅದಾನಿಯ ಒಂದು ದಿನದ ಗಳಿಕೆಯೇ 1,002 ಕೋಟಿ ರೂಪಾಯಿ!

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್