AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು

Bloomberg Billionaires Index 2026: ಶ್ರೀಮಂತಿಕೆಯಲ್ಲಿ ಈಗ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಮತ್ತೊಮ್ಮೆ ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಗೌತಮ್ ಅದಾನಿ 92.6 ಬಿಲಿಯನ್ ಡಾಲರ್ ಆಸ್ತಿಮೌಲ್ಯದೊಂದಿಗೆ 19ನೇ ಸ್ಥಾನದಲ್ಲಿದ್ದಾರೆ. ಮುಕೇಶ್ ಅಂಬಾನಿ 90.8 ಬಿಲಿಯನ್ ಡಾಲರ್​ನೊಂದಿಗೆ 20ನೇ ಸ್ಥಾನದಲ್ಲಿದ್ದಾರೆ.

ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು
ಗೌತಮ್ ಅದಾನಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 17, 2026 | 1:42 PM

Share

ನವದೆಹಲಿ, ಏಪ್ರಿಲ್ 17: ಭಾರತದ ಇಬ್ಬರು ದಿಗ್ಗಜ ಉದ್ಯಮಿಗಳ ನಡುವೆ ಯಾರು ನಂಬರ್ ಒನ್ ಎನ್ನುವ ರೇಸ್ ನಡೆದಿದೆ. ಹೆಚ್ಚು ಆಸ್ತಿವಂತಿಕೆಯಲ್ಲಿ ಮುಕೇಶ್ ಅಂಬಾನಿ ಅವರನ್ನು ಗೌತಮ್ ಅದಾನಿ (Gautam Adani) ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಪಟ್ಟಿಯಲ್ಲಿ ಅದಾನಿ 19ನೇ ಸ್ಥಾನಕ್ಕೇರಿದರೆ, ಮುಕೇಶ್ ಅಂಬಾನಿ 20ನೇ ಸ್ಥಾನದಲ್ಲಿದ್ದಾರೆ. ಅದಾನಿ ನಿವ್ವಳ ಆಸ್ತಿ ಮೌಲ್ಯ 3.56 ಬಿಲಿಯನ್ ಡಾಲರ್​ನಷ್ಟು ಏರಿಕೆಯಾಗಿ 92.6 ಬಿಲಿಯನ್ ಡಾಲರ್ ಆಗಿದೆ. ಇದೇ ವೇಳೆ, ಮುಕೇಶ್ ಅಂಬಾನಿ ಅವರ ನಿವ್ವಳ ಆಸ್ತಿಮೌಲ್ಯ 90.8 ಬಿಲಿಯನ್ ಡಾಲರ್ ಇದೆ.

2022ರಲ್ಲಿ ಹಿಂಡನ್ಬರ್ಗ್ ವರದಿ ಬಿಡುಗಡೆಗೆ ಮುನ್ನ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಶ್ರೀಮಂತಿಕೆಯಲ್ಲಿ ಹಿಂದಿಕ್ಕಿದ್ದರು. ಆ ಬಳಿಕ ಅದಾನಿ ಗ್ರೂಪ್​ನ ವಿವಿಧ ಷೇರುಗಳು ಕುಸಿದ ಪರಿಣಾಮ ಅವರ ಆಸ್ತಿಮೌಲ್ಯ ತುಸು ಕ್ಷೀಣಿಸಿತ್ತು. ಈಗ ಮತ್ತೆ ಅವರು ಪುಟಿದೆದಿದ್ದಾರೆ. ಭಾರತದ ನಂಬರ್ ಒನ್ ಮಾತ್ರವಲ್ಲ, ಏಷ್ಯಾದ ನಂಬರ್ ಒನ್ ಶ್ರೀಮಂತ ಎನಿಸಿದ್ದಾರೆ.

ಟಾಪ್-20ಯಲ್ಲಿ ಅಮೆರಿಕ ಕಾರುಬಾರು

ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್​ನಲ್ಲಿ ವಿಶ್ವದ ಅತೀ ಶ್ರೀಮಂತರಾದ 500 ಮಂದಿಯ ಪಟ್ಟಿ ಇದೆ. ಇದರಲ್ಲಿ ಟಾಪ್-20ಯಲ್ಲಿ 15 ಮಂದಿ ಅಮೆರಿಕನ್ನರೇ ಇದ್ದಾರೆ. ಫ್ರಾನ್ಸ್, ಮೆಕ್ಸಿಕೋ ಮತ್ತು ಸ್ಪೇನ್ ದೇಶದ ಒಬ್ಬೊಬ್ಬರು ಈ ಪಟ್ಟಿಯಲ್ಲಿದ್ದಾರೆ. ಭಾರತದವರು ಇಬ್ಬರಿದ್ದಾರೆ.

ಇದನ್ನೂ ಓದಿ: ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ

ಇಲಾನ್ ಮಸ್ಕ್ 656 ಬಿಲಿಯನ್ ಡಾಲರ್​ನೊಂದಿಗೆ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ದಾಖಲೆ ಮುಂದುವರಿಸಿದ್ದಾರೆ. ಲ್ಯಾರಿ ಪೇಜ್​ನಿಂದ ಹಿಡಿದು ಲ್ಯಾರಿ ಎಲಿಸನ್​ವರೆಗೆ ಐವರು ಶ್ರೀಮಂತರು 200 ಬಿಲಿಯನ್ ಡಾಲರ್​ಗೂ ಹೆಚ್ಚಿನ ನಿವ್ವಳ ಆಸ್ತಿ ಹೊಂದಿದ್ದಾರೆ.

ಬ್ಲೂಮ್​ಬರ್ಗ್ ಇಂಡೆಕ್ಸ್; ವಿಶ್ವದ ಟಾಪ್-10 ಶ್ರೀಮಂತರು

  1. ಇಲಾನ್ ಮಸ್ಕ್: 656 ಬಿಲಿಯನ್ ಡಾಲರ್
  2. ಲ್ಯಾರಿ ಪೇಜ್: 286 ಬಿಲಿಯನ್ ಡಾಲರ್
  3. ಜೆಫ್ ಬೇಜೋಸ್: 269 ಬಿಲಿಯನ್ ಡಾಲರ್
  4. ಸೆರ್ಗೇ ಬ್ರಿನ್: 266 ಬಿಲಿಯನ್ ಡಾಲರ್
  5. ಮಾರ್ಕ್ ಜುಕರ್ಬರ್ಗ್: 239 ಬಿಲಿಯನ್ ಡಾಲರ್
  6. ಲ್ಯಾರಿ ಎಲಿಸನ್: 230 ಬಿಲಿಯನ್ ಡಾಲರ್
  7. ಮೈಕೇಲ್ ಡೆಲ್: 170 ಬಿಲಿಯನ್ ಡಾಲರ್
  8. ಜೆನ್ಸೆನ್ ಹುವಾಂಗ್: 164 ಬಿಲಿಯನ್ ಡಾಲರ್
  9. ಬರ್ನಾರ್ಡ್ ಆರ್ನಾಲ್ಟ್: 164 ಬಿಲಿಯನ್ ಡಾಲರ್
  10. ಜಿಮ್ ವಾಲ್ಟನ್: 150 ಬಿಲಿಯನ್ ಡಾಲರ್

ಇದನ್ನೂ ಓದಿ: ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್

ಬ್ಲೂಮ್​ಬರ್ಗ್ ಇಂಡೆಕ್ಸ್​ನಲ್ಲಿ 23 ಮಂದಿ ಭಾರತೀಯರು

  1. ಗೌತಮ್ ಅದಾನಿ: 19ನೇ ಸ್ಥಾನ
  2. ಮುಕೇಶ್ ಅಂಬಾನಿ: 20ನೇ ಸ್ಥಾನ
  3. ಲಕ್ಷ್ಮೀ ಮಿಟ್ಟಲ್: 62ನೇ ಸ್ಥಾನ
  4. ಶಿವ ನಾದರ್: 70ನೇ ಸ್ಥಾನ
  5. ಶಾಪೂರ್ ಮಿಸ್ತ್ರಿ ಕುಟುಂಬ: 71ನೇ ಸ್ಥಾನ
  6. ಸಾವಿತ್ರಿ ಜಿಂದಾಲ್: 73ನೇ ಸ್ಥಾನ
  7. ಸುನಿಲ್ ಮಿಟ್ಟಲ್ ಕುಟುಂಬ: 101ನೇ ಸ್ಥಾನ
  8. ದಿಲೀಪ್ ಶಾಂಘವಿ: 107ನೇ ಸ್ಥಾನ
  9. ಅಜೀಮ್ ಪ್ರೇಮ್​ಜಿ: 119ನೇ ಸ್ಥಾನ
  10. ಕುಮಾರ್ ಬಿರ್ಲಾ: 120ನೇ ಸ್ಥಾನ
  11. ರಾಧಾಕೃಷ್ಣ ದಮಾನಿ: 147ನೇ ಸ್ಥಾನ
  12. ಉದಯ್ ಕೋಟಕ್: 219ನೇ ಸ್ಥಾನ
  13. ಸೈರಸ್ ಪೂನಾವಾಲ: 232ನೇ ಸ್ಥಾನ
  14. ಕೆಪಿ ಸಿಂಗ್: 281ನೇ ಸ್ಥಾನ
  15. ವಿಕ್ರಮ್ ಲಾಲ್: 282ನೇ ಸ್ಥಾನ
  16. ರವಿ ಜೈಪುರಿಯಾ: 293ನೇ ಸ್ಥಾನ
  17. ಮುರಳಿ ದಿವಿ: 370ನೇ ಸ್ಥಾನ
  18. ನುಸ್ಲಿ ವಾಡಿಯಾ: 386ನೇ ಸ್ಥಾನ
  19. ಸಮೀರ್ ಮೆಹತಾ: 433ನೇ ಸ್ಥಾನ
  20. ಪಂಕಜ್ ಪಟೇಲ್: 447ನೇ ಸ್ಥಾನ
  21. ರಾಹುಲ್ ಭಾಟಿಯಾ: 451ನೇ ಸ್ಥಾನ
  22. ಸುಧೀರ್ ಮೆಹತಾ: 456ನೇ ಸ್ಥಾನ
  23. ಇಂದರ್ ಜೈಸಿಂಘಾನಿ: 466ನೇ ಸ್ಥಾನ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Fri, 17 April 26

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!