AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಅದಾನಿ ನಂತರ ಯಾರು? ಬ್ಲೂಮ್​ಬರ್ಗ್ ಸಂದರ್ಶನದ ಎಕ್ಸ್​ಕ್ಲೂಸಿವ್ ವಿಡಿಯೋ

Gautam Adani succession plan: ಭಾರತದ ಅತಿದೊಡ್ಡ ಬಿಸಿನೆಸ್ ಫ್ಯಾಮಿಲಿಗಳಲ್ಲಿ ಅದಾನಿ ಒಂದು. ಗೌತಮ್ ಅದಾನಿ ಭಾರತದ ಎರಡನೇ ಅತಿದೊಡ್ಡ ಶ್ರೀಮಂತ. ಮುಕೇಶ್ ಅಂಬಾನಿ ನಂತರ ಅವರ ಮೂರು ಮಕ್ಕಳು ಮುಂದಿನ ಬಿಸಿನೆಸ್ ಮುನ್ನಡೆಸುತ್ತಾರೆ. ಗೌತಮ್ ಅದಾನಿ ನಂತರ ಅದಾನಿ ಗ್ರೂಪ್​ನ ಬಿಸಿನೆಸ್ ಯಾರು ನೋಡಿಕೊಳ್ಳುತ್ತಾರೆ? ಈ ಬಗ್ಗೆ ಎಕ್ಸ್​ಕ್ಲೂಸಿವ್ ಸಂದರ್ಶನದ ವಿಡಿಯೋ ಇಲ್ಲಿದೆ.

ಗೌತಮ್ ಅದಾನಿ ನಂತರ ಯಾರು? ಬ್ಲೂಮ್​ಬರ್ಗ್ ಸಂದರ್ಶನದ ಎಕ್ಸ್​ಕ್ಲೂಸಿವ್ ವಿಡಿಯೋ
ಅದಾನಿ ಫ್ಯಾಮಿಲಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 14, 2024 | 10:55 AM

Share

ನವದೆಹಲಿ, ಆಗಸ್ಟ್ 14: ಭಾರತದ ಎರಡನೇ ಅತಿ ಶ್ರೀಮಂತ ವ್ಯಕ್ತಿ ಎನಿಸಿದ ಗೌತಮ್ ಅದಾನಿ ಅವರು 70 ವರ್ಷಕ್ಕೆ ನಿವೃತ್ತರಾಗ್ತಾರೆ, ತಮ್ಮ ಕುಟುಂಬದ ಇತರ ಸದಸ್ಯರಿಗೆ ಬಿಸಿನೆಸ್ ವಹಿಸಿ ಹೋಗ್ತಾರೆ ಎನ್ನುವಂತಹ ಸುದ್ದಿ ಕಳೆದ ವಾರ ಕೇಳಿಬಂದಿತ್ತು. ಬ್ಲೂಮ್​ಬರ್ಗ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ನಿವೃತ್ತಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿತ್ತು. ಅದರ ಬೆನ್ನಲ್ಲೆ ತಾನು 70 ವರ್ಷಕ್ಕೆ ನಿವೃತ್ತನಾಗುತ್ತೇನೆ ಎಂದು ಆ ಸಂದರ್ಶನದಲ್ಲಿ ಹೇಳಿಲ್ಲ ಎಂದು ಗೌತಮ್ ಅದಾನಿ ಸ್ಪಷ್ಟಪಡಿಸಿದ್ದಾರೆ. ಇದೀಗ ಬ್ಲೂಮ್​ಬರ್ಗ್ ನ್ಯೂಸ್​ಗೆ ನೀಡಲಾದ ಸಂದರ್ಶನದ 24 ನಿಮಿಷದ ವಿಡಿಯೋವೊಂದನ್ನು ಅದಾನಿ ಗ್ರೂಪ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಇದರಲ್ಲಿ, ಅದಾನಿ ತಾನು 70ರ ವಯಸ್ಸಿಗೆ ರಿಟೈರ್ ಆಗುತ್ತೇನೆ ಎಂದು ಹೇಳಿಲ್ಲ. ಆದರೆ, ಅದಾನಿ ಕುಟುಂಬದ ವಿವಿಧ ಸದಸ್ಯರು ಅದಾನಿ ಗ್ರೂಪ್​ನ ವಿವಿಧ ಬಿಸಿನೆಸ್​ಗಳಲ್ಲಿ ಚುಕ್ಕಾಣಿ ಹಿಡಿದಿದ್ದಾರೆ. ಇವರ ಪೈಕಿ ನಾಲ್ವರು ಪ್ರಮುಖರಿದ್ದಾರೆ. ಇಬ್ಬರು ಗೌತಮ್ ಅದಾನಿಯ ಮಕ್ಕಳಾದರೆ, ಮತ್ತಿಬ್ಬರು ಅಣ್ಣಂದಿರ ಮಕ್ಕಳಾಗಿದ್ದಾರೆ.

ಬ್ಲೂಮ್​ಬರ್ಗ್ ನ್ಯೂಸ್ ಸಂದರ್ಶನದ ಈ ವಿಡಿಯೋದಲ್ಲಿ ಅದಾನಿ ಕುಟುಂಬದ ಮುಂದಿನ ವಾರಸುದಾರರೆನ್ನಲಾದ ಪ್ರಣವ್ ಅದಾನಿ, ಸಾಗರ್ ಅದಾನಿ, ಕರಣ್ ಅದಾನಿ ಮತ್ತು ಜೀತ್ ಅದಾನಿ ಅವರು ಬಿಸಿನೆಸ್ ಬಗ್ಗೆ ಮಾತನಾಡಿದ್ದಾರೆ. ಹಿಂಡನ್ಬರ್ಗ್ ವರದಿಯಿಂದ ಆದ ಪರಿಣಾಮ, ಮತ್ತು ಆ ಸವಾಲನ್ನು ಹೇಗೆ ಎದುರಿಸಲಾಗುತ್ತಿದೆ ಎಂಬುದನ್ನು ಈ ಸಂದರ್ಶನದಲ್ಲಿ ಹೇಳಿದ್ದಾರೆ.

ಅದಾನಿ ಗ್ರೂಪ್​ನಿಂದ ಅಪ್​ಲೋಡ್ ಮಾಡಲಾದ ಸಂದರ್ಶನದ ವಿಡಿಯೋ ಇಲ್ಲಿದೆ…

ಹತ್ತು ವರ್ಷದ ಹಿಂದೆಯೇ ಅದಾನಿ ಗ್ರೂಪ್​ನ ಬಿಸಿನೆಸ್ ಅನ್ನು ಮುಂದಿನ ಪೀಳಿಗೆಗೆ ಹಂಚಲು ಅದಾನಿ ಯೋಜಿಸಿದ್ದರೆನ್ನಲಾಗಿದೆ. ಅದಾನಿ ಫ್ಯಾಮಿಲಿಯ ಎರಡನೇ ಪೀಳಿಗೆಯಲ್ಲಿ ಹಿರಿಯನಾದ ಪ್ರಣವ್ ಅದಾನಿ ಅವರು ಅದಾನಿ ಎಂಟರ್​ಪ್ರೈಸಸ್​ನ ಡೈರೆಕ್ಟರ್ ಆಗಿದ್ದಾರೆ. ಗೌತಮ್ ಅದಾನಿಯ ಮತ್ತೊಬ್ಬ ಅಣ್ಣನ ಮಗನಾದ ಸಾಗರ್ ಅದಾನಿ ಅವರು ಅದಾನಿ ಗ್ರೀನ್ ಎನರ್ಜಿಯ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಅಧಿಕಾರ ಗೌತಮ್ ಅದಾನಿ ಮಕ್ಕಳಿಗೋ, ಸೋದರನ ಮಕ್ಕಳಿಗೋ? ಆರು ವರ್ಷದಲ್ಲಿ ಆಗಲಿದೆ ಅಧಿಕಾರ ಹಸ್ತಾಂತರ

ಅದಾನಿ ಗ್ರೂಪ್​ನ ಬಹಳ ಮುಖ್ಯ ಬಿಸಿನೆಸ್​ಗಳಾದ ಬಂದರು ಮತ್ತು ವಿಮಾನ ನಿಲ್ದಾಣಗಳ ಬಿಸಿನೆಸ್ ಅನ್ನು ಗೌತಮ್ ಅದಾನಿ ಅವರ ಇಬ್ಬರು ಮಕ್ಕಳು ನೋಡಿಕೊಳ್ಳುತ್ತಿದ್ದಾರೆ. ಅದಾನಿ ಪೋರ್ಟ್ಸ್​ಗೆ ಕರಣ್ ಅದಾನಿ ಎಂಡಿಯಾಗಿದ್ದಾರೆ. ಅದಾನಿ ಏರ್​ಪೋರ್ಟ್ಸ್​ಗೆ ಜೀತ್ ಅದಾನಿ ನಿರ್ದೇಶಕರಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್