AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jobs In Israel: ಪ್ಯಾಲೆಸ್ಟೀನೀಯರ ಬದಲು ಭಾರತದಿಂದ 1 ಲಕ್ಷ ಕಾರ್ಮಿಕರನ್ನು ನೇಮಕ ಮಾಡಲಿರುವ ಇಸ್ರೇಲ್

Israel to Recruit Workers From India: ಇಸ್ರೇಲ್ ಹಮಾಸ್ ಯುದ್ಧದಿಂದಾಗಿ ಇಸ್ರೇಲ್​ನಲ್ಲಿ 90,000 ಪ್ಯಾಲೆಸ್ಟೀನೀ ಕಾರ್ಮಿಕರು ಕೆಲಸ ಬಿಟ್ಟು ಹೋಗಿದ್ದಾರೆ. ಈ ಸ್ಥಾನಗಳನ್ನು ತುಂಬಲು ಇಸ್ರೇಲ್ ಭಾರತದಿಂದ ಕಾರ್ಮಿಕರನ್ನು ನೇಮಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಭಾರತದ ಆರ್ಥಿಕತೆಗೆ ಅನುಕೂಲವಾಗುವ ನಿರೀಕ್ಷೆ ಇದೆ. ಇಸ್ರೇಲ್​ನಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಭಾರತೀಯ ಉದ್ಯೋಗಿಗಳಿದ್ದರೆ ಹಣ ವರ್ಗಾವಣೆ ಪ್ರಮಾಣ ಹೆಚ್ಚುತ್ತದೆ. ಭಾರತ ಮತ್ತು ಇಸ್ರೇಲ್ ನಡುವೆ ರಕ್ಷಣಾ ಕ್ಷೇತ್ರದಲ್ಲಿ ಇರುವ ಬಾಂಧವ್ಯ ಈಗ ಉದ್ಯೋಗ ಕ್ಷೇತ್ರದಲ್ಲೂ ಕಾಣಿಸಲಿದೆ.

Jobs In Israel: ಪ್ಯಾಲೆಸ್ಟೀನೀಯರ ಬದಲು ಭಾರತದಿಂದ 1 ಲಕ್ಷ ಕಾರ್ಮಿಕರನ್ನು ನೇಮಕ ಮಾಡಲಿರುವ ಇಸ್ರೇಲ್
ಬೆಂಜಮಿನ್ ನೆತಾನ್ಯಹು ಮತ್ತು ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 08, 2023 | 11:15 AM

Share

ನವದೆಹಲಿ, ನವೆಂಬರ್ 8: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ (Israel Hamas war) ಪರಿಣಾಮವಾಗಿ ಭಾರತದಿಂದ ಒಂದು ಲಕ್ಷ ಮಂದಿಗೆ (Indian workers) ಇಸ್ರೇಲ್​ನಲ್ಲಿ ಕೆಲಸ ಸಿಗುವ ಅವಕಾಶ ಇದೆ. ಭಾರತದಿಂದ ಒಂದು ಲಕ್ಷ ಕಾರ್ಮಿಕರನ್ನು ಇಸ್ರೇಲ್ ನೇಮಕಾತಿ ಮಾಡಿಕೊಳ್ಳಲಿದೆ. ಈ ಬಗ್ಗೆ ಪ್ರಕ್ರಿಯೆ ಆರಂಭಗೊಂಡಿರುವುದು ತಿಳಿದುಬಂದಿದೆ. ವಾಯ್ಸ್ ಆಫ್ ಅಮೆರಿಕ (ವಿಒಎ) ನ್ಯೂಸ್ ವರದಿ ಪ್ರಕಾರ, ಇಸ್ರೇಲ್ ಹಮಾಸ್ ಯುದ್ಧದಿಂದಾಗಿ ಇಸ್ರೇಲ್​ನಲ್ಲಿ 90,000 ಪ್ಯಾಲೆಸ್ಟೀನೀ ಕಾರ್ಮಿಕರು ಕೆಲಸ ಬಿಟ್ಟು ಹೋಗಿದ್ದಾರೆ. ಈ ಸ್ಥಾನಗಳನ್ನು ತುಂಬಲು ಇಸ್ರೇಲ್ ಭಾರತದಿಂದ ಕಾರ್ಮಿಕರನ್ನು ನೇಮಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಈ ಬೆಳವಣಿಗೆಯಿಂದ ಭಾರತದ ಆರ್ಥಿಕತೆಗೆ ಅನುಕೂಲವಾಗುವ ನಿರೀಕ್ಷೆ ಇದೆ. ಇಸ್ರೇಲ್​ನಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಭಾರತೀಯ ಉದ್ಯೋಗಿಗಳಿದ್ದರೆ ಹಣ ವರ್ಗಾವಣೆ ಪ್ರಮಾಣ ಹೆಚ್ಚುತ್ತದೆ. ಭಾರತ ಮತ್ತು ಇಸ್ರೇಲ್ ನಡುವೆ ರಕ್ಷಣಾ ಕ್ಷೇತ್ರದಲ್ಲಿ ಇರುವ ಬಾಂಧವ್ಯ ಈಗ ಉದ್ಯೋಗ ಕ್ಷೇತ್ರದಲ್ಲೂ ಕಾಣಿಸಲಿದೆ. ಇಸ್ರೇಲ್​ನ ಹಲವು ರಕ್ಷಣಾ ಉಪಕರಣಗಳನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ಈಗ ಸೆಮಿಕಂಡಕ್ಟರ್ ಕ್ಷೇತ್ರದಲ್ಲೂ ಇಸ್ರೇಲೀ ಕಂಪನಿಯೊಂದು ಭಾರತದಲ್ಲಿ ಉದ್ದಿಮೆ ಸ್ಥಾಪಿಸಲು ಮುಂದಾಗುತ್ತಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ದುರ್ಬಲಗೊಳ್ಳಲು ಇದೊಂದು ಬೆಳವಣಿಗೆ ಸಾಕು; ಬೆಚ್ಚಬೀಳಿಸಿದೆ ಮಾರ್ಗನ್ ಸ್ಟಾನ್ಲೀ ವರದಿ

ಕಳೆದ ಮೂರು ದಶಕಗಳಿಂದ ಭಾರತ ಮತ್ತು ಇಸ್ರೇಲ್ ಮಧ್ಯೆ ಗಾಢ ಸಂಬಂಧ ಇದೆ. ಕಾಶ್ಮೀರ ವಿಚಾರದಿಂದ ಹಿಡಿದು ಹಲವು ವಿಚಾರಗಳಲ್ಲಿ ಭಾರತಕ್ಕೆ ಇಸ್ರೇಲ್ ಬೆಂಬಲ ನೀಡುತ್ತಾ ಬಂದಿದೆ. ಪ್ಯಾಲೆಸ್ಟೀನಿಯರ ಪರವಾಗಿ ಭಾರತ ನಿಲುವು ತಳೆದಿದ್ದರೂ ಗಾಜಾ ಬಿಕ್ಕಟ್ಟಿನಲ್ಲಿ ಇಸ್ರೇಲ್​ಗೆ ಭಾರತ ನೈತಿಕ ಬೆಂಬಲ ಜೋಡಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್​ನ ಬೆಂಜಮಿನ್ ನೆತಾನ್ಯಹು ಅವರನ್ನು ಸಂಪರ್ಕಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಇಬ್ಬರೂ ಕೂಡ ಜಂಟಿ ನಿಲುವು ತಳೆದಿದ್ದಾರೆ.

ಗಾಜಾ ಯುದ್ಧ ಸಂಬಂಧ ವಿಶ್ವಸಂಸ್ಥೆ ಮಹಾ ಸಭೆಯಲ್ಲಿ ನಡೆದ ವೋಟಿಂಗ್​ನಲ್ಲಿ ಭಾರತ ಗೈರಾಗುವ ಮೂಲಕ ಪರೋಕ್ಷವಾಗಿ ಇಸ್ರೇಲ್​ಗೆ ಬೆಂಬಲ ನೀಡಿದೆ. ನರೇಂದ್ರ ಮೋದಿ ಮತ್ತು ಬೆಂಜಮಿನ್ ನೆತಾನ್ಯಹು ಮಧ್ಯೆಯೂ ವೈಯಕ್ತಿಕ ಸಂಬಂಧ ಮತ್ತು ಅರಿವು ಉತ್ತಮವಾಗಿದೆ. 2017ರಲ್ಲಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು. ಭಾರತದ ಪ್ರಧಾನಿಯೊಬ್ಬರು ಇಸ್ರೇಲ್​ಗೆ ಭೇಟಿ ನೀಡಿದ್ದು ಅದೇ ಮೊದಲು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ