AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP growth: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 6.4ಕ್ಕೆ ಹೆಚ್ಚಬಹುದು: ಐಸಿಆರ್​ಎ ನಿರೀಕ್ಷೆ

GDP growth rate: 2024-25ರ ಹಣಕಾಸು ವರ್ಷದ ಮೂರನೇ ಕ್ವಾರ್ಟರ್​​ನಲ್ಲಿ ಭಾರತದ ಆರ್ಥಿಕತೆ ಶೇ. 6.4ರಷ್ಟು ಹೆಚ್ಚಬಹುದು ಎಂದು ಐಸಿಆರ್​ಎ ಸಂಸ್ಥೆ ಅಂದಾಜು ಮಾಡಿದೆ. ಎರಡನೇ ಕ್ವಾರ್ಟರ್​ನಲ್ಲಿ ಶೇ. 5.4ರಷ್ಟು ಮಾತ್ರವೇ ಜಿಡಿಪಿ ಹೆಚ್ಚಾಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಬೆಳವಣಿಗೆ ಕಾಣಬಹುದು. ಆದರೆ, ಐಸಿಆರ್​​ಎ ಅಂದಾಜು ಮಾಡಿರುವ ಬೆಳವಣಿಗೆ ದರ, ಆರ್​ಬಿಐ ಮತ್ತು ಸರ್ಕಾರ ಮಾಡಿರುವ ಅಂದಾಜಿಗಿಂತ ಕಡಿಮೆ ಇದೆ.

GDP growth: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 6.4ಕ್ಕೆ ಹೆಚ್ಚಬಹುದು: ಐಸಿಆರ್​ಎ ನಿರೀಕ್ಷೆ
ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2025 | 2:12 PM

Share

ನವದೆಹಲಿ, ಫೆಬ್ರುವರಿ 18: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ (ಜುಲೈನಿಂದ ಸೆಪ್ಟೆಂಬರ್) ಜಿಡಿಪಿ ಬೆಳವಣಿಗೆ ದರ ಶೇ. 5.4ಕ್ಕೆ ಕುಂಠಿತಗೊಂಡಿತ್ತು. ಆದರೆ, ಮೂರನೇ ಕ್ವಾರ್ಟರ್​ನಲ್ಲಿ ಆರ್ಥಿಕ ಬೆಳವಣಿಗೆ ಹೆಚ್ಚಿನ ಮಟ್ಟದಲ್ಲಿ ಆಗುವ ನಿರೀಕ್ಷೆ ಇದೆ. ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಆ 3ನೇ ಕ್ವಾರ್ಟರ್​ನಲ್ಲಿ ಜಿಡಿಪಿ ವೃದ್ಧಿ ದರ ಶೇ. 6.4ರಷ್ಟಿರಬಹುದು ಎಂದು ಐಸಿಆರ್​ಎ ಅಂದಾಜು ಮಾಡಿದೆ. ಆಂತರಿಕ ಅನುಭೋಗ (domestic consumption) ಅನಿಶ್ಚಿತ ಮಟ್ಟದಲ್ಲಿರುವ ಹೊತ್ತಲ್ಲಿ ಜಿಡಿಪಿ ಬೆಳವಣಿಗೆ ಹೆಚ್ಚಲಿರುವುದು ಗಮನಾರ್ಹ ಸಂಗತಿ. ಐಸಿಆರ್​ಎ ಪ್ರಕಾರ, ಸರ್ಕಾರದ ಬಂಡವಾಳ ವೆಚ್ಚ ಹೆಚ್ಚಿದ್ದು ಇದಕ್ಕೆ ಕಾರಣವಿರಬಹುದು.

ಸರ್ಕಾರದ ಅಂದಾಜು ಪ್ರಕಾರ ಮೂರನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 6.7ರಷ್ಟು ಬೆಳೆಯಬಹುದು. ಆರ್​ಬಿಐ ಮಾಡಿದ ಅಂದಾಜು ಪ್ರಕಾರ ಜಿಡಿಪಿ ದರ ಶೇ. 6.8ರಷ್ಟಿರಬಹುದು. ಆದರೆ, ಐಸಿಆರ್​ಎ ವರದಿಯಲ್ಲಿ ಜಿಡಿಪಿ ಬೆಳವಣಿಗೆ ಶೇ. 6.4ರಷ್ಟು ಮಾತ್ರವೇ ಇರಬಹುದು ಎಂದು ಅಭಿಪ್ರಾಯಪಡಲಾಗಿದೆ. ಈ ಅಂದಾಜು ಸರಿಯಾಗಿದ್ದಲ್ಲಿ, ಅನುಭೋಗ ಕೊರತೆಯು ಬೆಳವಣಿಗೆಯನ್ನು ಕುಂಠಿತಗೊಳಿಸಿದ್ದಿರಬಹುದು. ಅಲ್ಲದೇ ಮೂರನೇ ಕ್ವಾರ್ಟರ್ ಅವಧಿಯಲ್ಲಿ ಚುನಾವಣೆಗಳು, ನೀತಿ ಸಂಹಿತೆ, ಬೇಸಿಗೆಯ ರಣ ಬಿಸಿಲು (heat wave) ಇವೆಲ್ಲವೂ ಕೆಲ ವಲಯಗಳ ಬೆಳವಣಿಗೆಗೆ ಹಿನ್ನಡೆ ತಂದಿರಬಹುದು ಎಂದು ಹೇಳಲಾಗುತ್ತಿದೆ.

ಐಸಿಆರ್​ಎ ಕೂಡ ಇದೇ ಅಭಿಪ್ರಾಯ ಅನುಮೋದಿಸಿದೆ. ಈ ಮೂರನೇ ಕ್ವಾರ್ಟರ್​ನಲ್ಲಿ ಪರೋಕ್ಷ ತೆರಿಗೆಗಳ (ಜಿಎಸ್​ಟಿ ಇತ್ಯಾದಿ Indirect taxes) ಏರಿಕೆ ಪ್ರಮಾಣ ಕಡಿಮೆ ಆಗಿರುವುದು, ಸರ್ಕಾರದಿಂದ ಸಬ್ಸಿಡಿ ಹೆಚ್ಚಿದ್ದು ಇವೆಲ್ಲವೂ ಜಿಡಿಪಿ ಬೆಳವಣಿಗೆಗೆ ತಡೆಯಾಗಿರಬಹುದು ಎಂದು ಇದು ಹೇಳುತ್ತಿದೆ.

ಇದನ್ನೂ ಓದಿ: ಭಾರತ-ಅಮೆರಿಕದಿಂದ ಸದ್ಯದಲ್ಲೇ ದೊಡ್ಡ ನಡೆ..? ಚೀನಾ ಸ್ಥಾನಕ್ಕೆ ಭಾರತವನ್ನು ಕೂರಿಸುವ ಪ್ರಯತ್ನವಾ?

ಇದೇ ವೇಳೆ, ಸರ್ಕಾರದಿಂದ ಬಂಡವಾಳ ವೆಚ್ಚ (govt  expenditure) ಹೆಚ್ಚಾಗಿರುವುದು, ಸರ್ವಿಸ್ ಸೆಕ್ಟರ್​ನ ರಫ್ತು ಹೆಚ್ಚಾಗಿರುವುದು, ಪ್ರಮುಖ ಮುಂಗಾರು ಬೆಳೆಗಳು ಉತ್ತಮ ಫಸಲು ಕಂಡಿದ್ದು, ಸರಕು ರಫ್ತಿನಲ್ಲೂ ಹೆಚ್ಚಳ ಆಗಿದ್ದು ಈ ಅಂಶಗಳು ಆರ್ಥಿಕತೆಗೆ ಹೆಚ್ಚಿನ ಹಿನ್ನಡೆಯಾಗಲು ಬಿಟ್ಟಿಲ್ಲದೇ ಇರಬಹುದು ಎಂದು ಐಸಿಆರ್​​ಎನ ಆರ್ಥಿಕ ತಜ್ಞರಾದ ಅದಿತಿ ನಾಯರ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ