AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP growth: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 6.4ಕ್ಕೆ ಹೆಚ್ಚಬಹುದು: ಐಸಿಆರ್​ಎ ನಿರೀಕ್ಷೆ

GDP growth rate: 2024-25ರ ಹಣಕಾಸು ವರ್ಷದ ಮೂರನೇ ಕ್ವಾರ್ಟರ್​​ನಲ್ಲಿ ಭಾರತದ ಆರ್ಥಿಕತೆ ಶೇ. 6.4ರಷ್ಟು ಹೆಚ್ಚಬಹುದು ಎಂದು ಐಸಿಆರ್​ಎ ಸಂಸ್ಥೆ ಅಂದಾಜು ಮಾಡಿದೆ. ಎರಡನೇ ಕ್ವಾರ್ಟರ್​ನಲ್ಲಿ ಶೇ. 5.4ರಷ್ಟು ಮಾತ್ರವೇ ಜಿಡಿಪಿ ಹೆಚ್ಚಾಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಬೆಳವಣಿಗೆ ಕಾಣಬಹುದು. ಆದರೆ, ಐಸಿಆರ್​​ಎ ಅಂದಾಜು ಮಾಡಿರುವ ಬೆಳವಣಿಗೆ ದರ, ಆರ್​ಬಿಐ ಮತ್ತು ಸರ್ಕಾರ ಮಾಡಿರುವ ಅಂದಾಜಿಗಿಂತ ಕಡಿಮೆ ಇದೆ.

GDP growth: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 6.4ಕ್ಕೆ ಹೆಚ್ಚಬಹುದು: ಐಸಿಆರ್​ಎ ನಿರೀಕ್ಷೆ
ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2025 | 2:12 PM

Share

ನವದೆಹಲಿ, ಫೆಬ್ರುವರಿ 18: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್​ನಲ್ಲಿ (ಜುಲೈನಿಂದ ಸೆಪ್ಟೆಂಬರ್) ಜಿಡಿಪಿ ಬೆಳವಣಿಗೆ ದರ ಶೇ. 5.4ಕ್ಕೆ ಕುಂಠಿತಗೊಂಡಿತ್ತು. ಆದರೆ, ಮೂರನೇ ಕ್ವಾರ್ಟರ್​ನಲ್ಲಿ ಆರ್ಥಿಕ ಬೆಳವಣಿಗೆ ಹೆಚ್ಚಿನ ಮಟ್ಟದಲ್ಲಿ ಆಗುವ ನಿರೀಕ್ಷೆ ಇದೆ. ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಆ 3ನೇ ಕ್ವಾರ್ಟರ್​ನಲ್ಲಿ ಜಿಡಿಪಿ ವೃದ್ಧಿ ದರ ಶೇ. 6.4ರಷ್ಟಿರಬಹುದು ಎಂದು ಐಸಿಆರ್​ಎ ಅಂದಾಜು ಮಾಡಿದೆ. ಆಂತರಿಕ ಅನುಭೋಗ (domestic consumption) ಅನಿಶ್ಚಿತ ಮಟ್ಟದಲ್ಲಿರುವ ಹೊತ್ತಲ್ಲಿ ಜಿಡಿಪಿ ಬೆಳವಣಿಗೆ ಹೆಚ್ಚಲಿರುವುದು ಗಮನಾರ್ಹ ಸಂಗತಿ. ಐಸಿಆರ್​ಎ ಪ್ರಕಾರ, ಸರ್ಕಾರದ ಬಂಡವಾಳ ವೆಚ್ಚ ಹೆಚ್ಚಿದ್ದು ಇದಕ್ಕೆ ಕಾರಣವಿರಬಹುದು.

ಸರ್ಕಾರದ ಅಂದಾಜು ಪ್ರಕಾರ ಮೂರನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 6.7ರಷ್ಟು ಬೆಳೆಯಬಹುದು. ಆರ್​ಬಿಐ ಮಾಡಿದ ಅಂದಾಜು ಪ್ರಕಾರ ಜಿಡಿಪಿ ದರ ಶೇ. 6.8ರಷ್ಟಿರಬಹುದು. ಆದರೆ, ಐಸಿಆರ್​ಎ ವರದಿಯಲ್ಲಿ ಜಿಡಿಪಿ ಬೆಳವಣಿಗೆ ಶೇ. 6.4ರಷ್ಟು ಮಾತ್ರವೇ ಇರಬಹುದು ಎಂದು ಅಭಿಪ್ರಾಯಪಡಲಾಗಿದೆ. ಈ ಅಂದಾಜು ಸರಿಯಾಗಿದ್ದಲ್ಲಿ, ಅನುಭೋಗ ಕೊರತೆಯು ಬೆಳವಣಿಗೆಯನ್ನು ಕುಂಠಿತಗೊಳಿಸಿದ್ದಿರಬಹುದು. ಅಲ್ಲದೇ ಮೂರನೇ ಕ್ವಾರ್ಟರ್ ಅವಧಿಯಲ್ಲಿ ಚುನಾವಣೆಗಳು, ನೀತಿ ಸಂಹಿತೆ, ಬೇಸಿಗೆಯ ರಣ ಬಿಸಿಲು (heat wave) ಇವೆಲ್ಲವೂ ಕೆಲ ವಲಯಗಳ ಬೆಳವಣಿಗೆಗೆ ಹಿನ್ನಡೆ ತಂದಿರಬಹುದು ಎಂದು ಹೇಳಲಾಗುತ್ತಿದೆ.

ಐಸಿಆರ್​ಎ ಕೂಡ ಇದೇ ಅಭಿಪ್ರಾಯ ಅನುಮೋದಿಸಿದೆ. ಈ ಮೂರನೇ ಕ್ವಾರ್ಟರ್​ನಲ್ಲಿ ಪರೋಕ್ಷ ತೆರಿಗೆಗಳ (ಜಿಎಸ್​ಟಿ ಇತ್ಯಾದಿ Indirect taxes) ಏರಿಕೆ ಪ್ರಮಾಣ ಕಡಿಮೆ ಆಗಿರುವುದು, ಸರ್ಕಾರದಿಂದ ಸಬ್ಸಿಡಿ ಹೆಚ್ಚಿದ್ದು ಇವೆಲ್ಲವೂ ಜಿಡಿಪಿ ಬೆಳವಣಿಗೆಗೆ ತಡೆಯಾಗಿರಬಹುದು ಎಂದು ಇದು ಹೇಳುತ್ತಿದೆ.

ಇದನ್ನೂ ಓದಿ: ಭಾರತ-ಅಮೆರಿಕದಿಂದ ಸದ್ಯದಲ್ಲೇ ದೊಡ್ಡ ನಡೆ..? ಚೀನಾ ಸ್ಥಾನಕ್ಕೆ ಭಾರತವನ್ನು ಕೂರಿಸುವ ಪ್ರಯತ್ನವಾ?

ಇದೇ ವೇಳೆ, ಸರ್ಕಾರದಿಂದ ಬಂಡವಾಳ ವೆಚ್ಚ (govt  expenditure) ಹೆಚ್ಚಾಗಿರುವುದು, ಸರ್ವಿಸ್ ಸೆಕ್ಟರ್​ನ ರಫ್ತು ಹೆಚ್ಚಾಗಿರುವುದು, ಪ್ರಮುಖ ಮುಂಗಾರು ಬೆಳೆಗಳು ಉತ್ತಮ ಫಸಲು ಕಂಡಿದ್ದು, ಸರಕು ರಫ್ತಿನಲ್ಲೂ ಹೆಚ್ಚಳ ಆಗಿದ್ದು ಈ ಅಂಶಗಳು ಆರ್ಥಿಕತೆಗೆ ಹೆಚ್ಚಿನ ಹಿನ್ನಡೆಯಾಗಲು ಬಿಟ್ಟಿಲ್ಲದೇ ಇರಬಹುದು ಎಂದು ಐಸಿಆರ್​​ಎನ ಆರ್ಥಿಕ ತಜ್ಞರಾದ ಅದಿತಿ ನಾಯರ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್