AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alert Alert: ದೇಶಬಿಟ್ಟು ಪರಾರಿಯಾಗುತ್ತಿದ್ದಾರೆ… ಮಾಲೀಕರ ವಿರುದ್ಧವೇ ದೂರು ದಾಖಲಿಸಿದ ಉದ್ಯೋಗಿಗಳು

Glamyo Health Co-Founders Face Allegations: ಗ್ಲಾಮ್ಯೋ ಹೆಲ್ತ್ ಕಂಪನಿ ಸದ್ಯದಲ್ಲೇ ದಿವಾಳಿ ಅರ್ಜಿ ಸಲ್ಲಿಸಲಿದೆ. ಮಾಲೀಕರು ಎಲ್ಲವನ್ನೂ ನುಂಗಿ ವಿದೇಶಕ್ಕೆ ಪರಾರಿಯಾಗುವ ಪ್ಲಾನ್ ಮಾಡಿದ್ದಾರೆ ಅಂತ ಒಬ್ಬ ಉದ್ಯೋಗಿ ದೂರು ನೀಡಿದ್ದಾರೆ.

Alert Alert: ದೇಶಬಿಟ್ಟು ಪರಾರಿಯಾಗುತ್ತಿದ್ದಾರೆ... ಮಾಲೀಕರ ವಿರುದ್ಧವೇ ದೂರು ದಾಖಲಿಸಿದ ಉದ್ಯೋಗಿಗಳು
ಗ್ಲಾಮ್ಯೋ ಹೆಲ್ತ್ ಮಾಲೀಕರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 05, 2023 | 6:57 PM

Share

ನವದೆಹಲಿ: ಈ ಕಂಪನಿ ನೂರಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕಲಾಗಿದೆ. ಉಳಿದುಕೊಂಡಿರುವ ಉದ್ಯೋಗಿಗಳಿಗೆ ತಿಂಗಳುಗಳಿಂದ ಸಂಬಳ ಇಲ್ಲ. ಕಂಪನಿಗೆ ತಿಂಗಳಿಗೆ ಕೋಟಿಗಟ್ಟಲೆ ಆದಾಯ ಬಂದರೂ ಎಲ್ಲವೂ ಮಾಲೀಕರಿಗೆ ಸ್ವಾಹ ಅಗುತ್ತಿದೆ. ಈ ಸ್ಟಾರ್ಟಪ್​ಗೆ ಬಂದ ಫಂಡಿಂಗ್ ಹಣ ಏನಾಗುತ್ತದೋ ಆ ದೇವರೇ ಬಲ್ಲ…! ಇದು ಗ್ಲಾಮ್ಯೋ ಹೆಲ್ತ್ (Glamyo Health) ಎಂಬ ಸ್ಟಾರ್ಟಪ್ ಕಂಪನಿಯ ಕರ್ಮಕಾಂಡದ ಒಂದು ಸ್ಯಾಂಪಲ್. ಇದನ್ನು ಕಂಪನಿಯ ಸ್ವತಃ ಉದ್ಯೋಗಿಗಳೇ ಅಲರ್ಟ್ ಹೊರಡಿಸಿದ್ದಾರೆ. ಅಷ್ಟೇ ಅಲ್ಲ, ಗ್ಲಾಮ್ಯೋ ಹೆಲ್ತ್ ಕಂಪನಿ ಸದ್ಯದಲ್ಲೇ ದಿವಾಳಿ ಅರ್ಜಿ (Bankruptcy) ಸಲ್ಲಿಸಲಿದೆ. ಮಾಲೀಕರು ಎಲ್ಲವನ್ನೂ ನುಂಗಿ ವಿದೇಶಕ್ಕೆ ಪರಾರಿಯಾಗುವ ಪ್ಲಾನ್ ಮಾಡಿದ್ದಾರೆ ಅಂತಲೂ ಒಬ್ಬ ಉದ್ಯೋಗಿ ದೂರು ನೀಡಿದ್ದಾರೆ. ದೂರು ಕೊಟ್ಟಿರುವುದಷ್ಟೇ ಅಲ್ಲ, ಕಳೆದ ವಾರ ಇವರು ನವದೆಹಲಿಯಲ್ಲಿರುವ ಕಂಪನಿ ಕಚೇರಿ ಬಳಿ ಪ್ರತಿಭಟನೆ ಕೂಡ ನಡೆಸಿದ್ದರು. ಬಾರಾಖಂಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಲಾಮ್ಯೋ ಹೆಲ್ತ್ ಕಂಪನಿಯು ಸರ್ಜರಿ ಮತ್ತು ಕಾಸ್ಮೆಟಿಕ್ ಚಿಕಿತ್ಸೆಗೆ ವಿವಿಧ ಆಸ್ಪತ್ರೆ ಮತ್ತು ಕ್ಲಿನಿಕ್​ಗಳ ಜೊತೆ ಸಹಭಾಗಿತ್ವದಲ್ಲಿ ವ್ಯವಹಾರ ನಡೆಸುತ್ತದೆ. ಅರ್ಚಿತ್ ಗರ್ಗ್ ಮತ್ತು ಪ್ರೀತ್ ಪಾಲ್ ಠಾಕೂರ್ ಈ ಸಂಸ್ಥೆಯ ಸಹಸಂಸ್ಥಾಪಕರು. ವೈದ್ಯರು ಹಾಗೂ ಇತರ ವೃತ್ತಿಪರರು ಈ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಐಎಎನ್​ಎಸ್ ಸುದ್ದಿ ಸಂಸ್ಥೆ ವರದಿ ಪ್ರಕಾರ ಗ್ಲಾಮ್ಯೋ ಹೆಲ್ತ್ ಇತ್ತೀಚೆಗೆ 160ಕ್ಕೂ ಹೆಚ್ಚು ಉದ್ಯೋಗಿಗಳನ್ನು ಯಾವುದೇ ನೋಟೀಸ್ ಕೊಡದೇ ಲೇ ಆಫ್ ಮಾಡಿದೆಯಂತೆ. ಹಲವು ತಿಂಗಳಿಂದ ಅವರ ಸಂಬಳ ಕೂಡ ನೀಡಿಲ್ಲ.

ಇದನ್ನೂ ಓದಿCyber Fraud: ಆಗಂತುಕನಿಗೆ ಮೊಬೈಲ್ ರಿಮೋಟ್ ಕೊಟ್ಟು ನಿದ್ದೆಗೆ ಜಾರಿದ ಮಹಿಳೆ; ಕಣ್ಮರೆಯಾಯಿತು ಲಕ್ಷಗಟ್ಟಲೆ ಹಣ

ಈ ಉದ್ಯೋಗಿಗಳು ನೀಡಿರುವ ದೂರಿನ ಪ್ರಕಾರ ಈ ಸ್ಟಾರ್ಟಪ್ ಕಂಪನಿ ತಿಂಗಳಿಗೆ 5 ಕೋಟಿ ರೂ ಆದಾಯ ಗಳಿಸುತ್ತದೆ. ಇದರ ಸಂಸ್ಥಾಪಕರು ಎಲ್ಲಾ ಹಣವನ್ನು ತಮ್ಮ ಜೇಬಿಗೆ ಇಳಿಸುತ್ತಾರೆ. ಅಜಿಲಿಟಿ ವೆಂಚರ್ಸ್, ಆನಿಕಟ್ ಕ್ಯಾಪಿಟಲ್, ಲೆಟ್ಸ್​ವೆಂಚರ್ ಮೊದಲಾದ ಹೂಡಿಕೆ ಸಂಸ್ಥೆಗಳಿಂದ ಬಂಡವಾಳ ಬಂದಿವೆ. 7 ಮಿಲಿಯನ್ ಡಾಲರ್ (58 ಕೋಟಿ ರೂ) ಹೂಡಿಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 6 ಮಿಲಿಯನ್ ಡಾಲರ್​ನಷ್ಟು ಫಂಡಿಂಗ್ ಬರುತ್ತಿದೆ. ಆದರೂ ಗ್ಲಾಮ್ಯೋ ಹೆಲ್ತ್ ಆರೋಗ್ಯ ಸುಧಾರಣೆ ಆಗಿಲ್ಲ. ಇದಕ್ಕೆ ಅದರ ಸಂಸ್ಥಾಪಕರೇ ಕಾರಣ ಎಂಬುದು ಉದ್ಯೋಗಿಗಳ ತರ್ಕ.

ಅಷ್ಟೇ ಅಲ್ಲ, ಕಂಪನಿಯ ಈ ಇಬ್ಬರು ಮಾಲೀಕರು ಬ್ಯಾಂಕ್ರಪ್ಟ್ಸಿ ಅರ್ಜಿ ಸಲ್ಲಿಸಿ ದೇಶ ಬಿಟ್ಟು ಹೋಗುವ ಬಗ್ಗೆ ಮಾತನಾಡುತ್ತಿದ್ದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?