AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airline: ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಮೇ.15ರವರೆಗೆ ಸ್ಥಗಿತ, ರಿಫಂಡ್​​​ಗೆ ಆದೇಶ

ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಪ್ರಕ್ರಿಯೆಯನ್ನು ಮೇ.15ರವರೆಗೆ ಸ್ಥಗಿತಗೊಳಿಸುವಂತೆ ತನ್ನ ಸಿಬ್ಬಂದಿಗಳಿಗೆ ತಿಳಿಸಿದೆ. ಈಗಾಗಲೇ ಬುಕಿಂಗ್​​ ಆಗಿರುವುದನ್ನು ರದ್ದುಗೊಳಿಸುವಂತೆ ಮತ್ತು ಹಣವನ್ನು ಪ್ರಯಾಣಿಕರಿಗೆ ವಾಪಸ್ಸು ನೀಡುವಂತೆ ತಿಳಿಸಿದೆ.

Go First Airline: ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಮೇ.15ರವರೆಗೆ ಸ್ಥಗಿತ, ರಿಫಂಡ್​​​ಗೆ ಆದೇಶ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 04, 2023 | 1:47 PM

Share

ದೆಹಲಿ: ಗೋ ಫಸ್ಟ್ ಏರ್​​​​ಲೈನ್ (Go First Airline) ಬುಕಿಂಗ್​​ ಪ್ರಕ್ರಿಯೆಯನ್ನು ಮೇ.15ರವರೆಗೆ ಸ್ಥಗಿತಗೊಳಿಸುವಂತೆ ತನ್ನ ಸಿಬ್ಬಂದಿಗಳಿಗೆ ತಿಳಿಸಿದೆ. ಈಗಾಗಲೇ ಬುಕಿಂಗ್​​ ಆಗಿರುವುದನ್ನು ರದ್ದುಗೊಳಿಸುವಂತೆ ಮತ್ತು ಹಣವನ್ನು ಪ್ರಯಾಣಿಕರಿಗೆ ರಿಫಂಡ್ ಮಾಡುವಂತೆ ತಿಳಿಸಿದೆ. ಗೋ ಫಾಸ್ಟ್ ಏರ್​​​​ಲೈನ್ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಮುಂದೆ ಸ್ವಯಂಪ್ರೇರಿತ ದಿವಾಳಿತನಕ್ಕಾಗಿ ಅರ್ಜಿ ಸಲ್ಲಿಸಿದ ದಿನದಿಂದ ನಗದು ಕೊರತೆಯಿರುವ ವಿಮಾನಯಾನ ಗೋ ಫರ್ಸ್ಟ್ ಮೇ 15 ರವರೆಗೆ ಟಿಕೆಟ್‌ಗಳ ಮಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಿದೆ.

ಹಿಂದೆ ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿತ್ತು. ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ವಿಮಾನಗಳು ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿತ್ತು. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿತ್ತು. ಈ ಕಾರಣಕ್ಕೆ ವಿಮಾನಗಳು ಹಾರಾಟ ನಡೆಸಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಎಲ್ಲ ಬುಕಿಂಗ್​​​ಗಳನ್ನು ಸ್ಥಗಿತಗೊಳಿಸಿ, ಮರುಪಾವತಿ ಮಾಡಲು ಹೇಳಿದೆ.

ಇದನ್ನೂ ಓದಿ: Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿತ್ತು ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದರು. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Thu, 4 May 23

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು