AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airline: ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಮೇ.15ರವರೆಗೆ ಸ್ಥಗಿತ, ರಿಫಂಡ್​​​ಗೆ ಆದೇಶ

ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಪ್ರಕ್ರಿಯೆಯನ್ನು ಮೇ.15ರವರೆಗೆ ಸ್ಥಗಿತಗೊಳಿಸುವಂತೆ ತನ್ನ ಸಿಬ್ಬಂದಿಗಳಿಗೆ ತಿಳಿಸಿದೆ. ಈಗಾಗಲೇ ಬುಕಿಂಗ್​​ ಆಗಿರುವುದನ್ನು ರದ್ದುಗೊಳಿಸುವಂತೆ ಮತ್ತು ಹಣವನ್ನು ಪ್ರಯಾಣಿಕರಿಗೆ ವಾಪಸ್ಸು ನೀಡುವಂತೆ ತಿಳಿಸಿದೆ.

Go First Airline: ಗೋ ಫಸ್ಟ್ ಏರ್​​​​ಲೈನ್ ಬುಕಿಂಗ್​​ ಮೇ.15ರವರೆಗೆ ಸ್ಥಗಿತ, ರಿಫಂಡ್​​​ಗೆ ಆದೇಶ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 04, 2023 | 1:47 PM

Share

ದೆಹಲಿ: ಗೋ ಫಸ್ಟ್ ಏರ್​​​​ಲೈನ್ (Go First Airline) ಬುಕಿಂಗ್​​ ಪ್ರಕ್ರಿಯೆಯನ್ನು ಮೇ.15ರವರೆಗೆ ಸ್ಥಗಿತಗೊಳಿಸುವಂತೆ ತನ್ನ ಸಿಬ್ಬಂದಿಗಳಿಗೆ ತಿಳಿಸಿದೆ. ಈಗಾಗಲೇ ಬುಕಿಂಗ್​​ ಆಗಿರುವುದನ್ನು ರದ್ದುಗೊಳಿಸುವಂತೆ ಮತ್ತು ಹಣವನ್ನು ಪ್ರಯಾಣಿಕರಿಗೆ ರಿಫಂಡ್ ಮಾಡುವಂತೆ ತಿಳಿಸಿದೆ. ಗೋ ಫಾಸ್ಟ್ ಏರ್​​​​ಲೈನ್ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಮುಂದೆ ಸ್ವಯಂಪ್ರೇರಿತ ದಿವಾಳಿತನಕ್ಕಾಗಿ ಅರ್ಜಿ ಸಲ್ಲಿಸಿದ ದಿನದಿಂದ ನಗದು ಕೊರತೆಯಿರುವ ವಿಮಾನಯಾನ ಗೋ ಫರ್ಸ್ಟ್ ಮೇ 15 ರವರೆಗೆ ಟಿಕೆಟ್‌ಗಳ ಮಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಿದೆ.

ಹಿಂದೆ ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿತ್ತು. ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ವಿಮಾನಗಳು ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿತ್ತು. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿತ್ತು. ಈ ಕಾರಣಕ್ಕೆ ವಿಮಾನಗಳು ಹಾರಾಟ ನಡೆಸಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಎಲ್ಲ ಬುಕಿಂಗ್​​​ಗಳನ್ನು ಸ್ಥಗಿತಗೊಳಿಸಿ, ಮರುಪಾವತಿ ಮಾಡಲು ಹೇಳಿದೆ.

ಇದನ್ನೂ ಓದಿ: Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿತ್ತು ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದರು. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Thu, 4 May 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ