AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First: ಮೇ 28ರವರೆಗೂ ಗೋ ಫಸ್ಟ್ ವಿಮಾನಗಳ ಸೇವೆ ರದ್ದು; ಒಂದು ತಿಂಗಳಲ್ಲಿ ಪ್ಲಾನ್ ತಿಳಿಸುವಂತೆ ಡಿಜಿಸಿಎ ಸೂಚನೆ

No Go First Flight Till May 28th: ಗೋ ಫಸ್ಟ್ ಏರ್​ಲೈನ್ ಸಂಸ್ಥೆ ಮೇ 28ರವರೆಗೂ ತನ್ನ ಎಲ್ಲಾ ವಿಮಾನ ಹಾರಾಟ ಸೇವೆಯನ್ನು ನಿಲ್ಲಿಸಿದೆ. ಈ ಮೊದಲು ಮೇ 26ರವರೆಗೆ ಫ್ಲೈಟ್ ಹಾರಾಟ ಇರುವುದಿಲ್ಲ ಎಂದು ಹೇಳಿತ್ತು. ಈಗ ಇನ್ನೂ ಎರಡು ದಿನ ಅದನ್ನು ವಿಸ್ತರಿಸಿದೆ.

Go First: ಮೇ 28ರವರೆಗೂ ಗೋ ಫಸ್ಟ್ ವಿಮಾನಗಳ ಸೇವೆ ರದ್ದು; ಒಂದು ತಿಂಗಳಲ್ಲಿ ಪ್ಲಾನ್ ತಿಳಿಸುವಂತೆ ಡಿಜಿಸಿಎ ಸೂಚನೆ
ಗೋ ಫಸ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 26, 2023 | 3:35 PM

Share

ನವದೆಹಲಿ: ದಿವಾಳಿ ಅಂಚಿಗೆ ಹೋಗಿ ಬೀಸೋ ದೊಣ್ಣೆಯಿಂದ ಸದ್ಯ ಪಾರಾಗಿರುವ ಗೋ ಫಸ್ಟ್ ಏರ್​ಲೈನ್ ಸಂಸ್ಥೆ (Go First Airline) ಈಗ ತನ್ನ ಪುನಶ್ಚೇತನ ಯಾವ ರೀತಿ ಆಗಬೇಕು ಎಂಬ ಯೋಜನೆಯನ್ನು ತ್ವರಿತವಾಗಿ ರೂಪಿಸಬೇಕಿದೆ. 30 ದಿನದೊಳಗೆ ಗೋ ಫಸ್ಟ್ ತನ್ನ ಪ್ಲಾನ್ ಸಲ್ಲಿಸಬೇಕು ಎಂದು ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿದೆ. ಇದರ ಬೆನ್ನಲ್ಲೇ ಗೋ ಫಸ್ಟ್ ಏರ್​ಲೈನ್ ಸಂಸ್ಥೆ ಮೇ 28ರವರೆಗೂ ತನ್ನ ಎಲ್ಲಾ ವಿಮಾನ ಹಾರಾಟ ಸೇವೆಯನ್ನು ನಿಲ್ಲಿಸಿದೆ. ಈ ಮೊದಲು ಮೇ 26ರವರೆಗೆ ಫ್ಲೈಟ್ ಹಾರಾಟ ಇರುವುದಿಲ್ಲ ಎಂದು ಹೇಳಿತ್ತು. ಈಗ ಇನ್ನೂ ಎರಡು ದಿನ ಅದನ್ನು ವಿಸ್ತರಿಸಿದೆ. ಕಾರ್ಯಾಚರಣೆ ಸಮಸ್ಯೆ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮೇ 28ರವರೆಗಿನ ದಿನಗಳಲ್ಲಿ ಗೋ ಫಸ್ಟ್ ಫ್ಲೈಟ್ ಬುಕ್ ಮಾಡಿದ ಎಲ್ಲಾ ಗ್ರಾಹಕರಿಗೂ ಅವರ ಹಣ ಮರಳಿಸಲಾಗುವುದು ಎಂದು ವಿಮಾನ ಸಂಸ್ಥೆ ತಿಳಿಸಿದೆ. ಅಲ್ಲದೇ, ವಿಮಾನ ಟಿಕೆಟ್ ಬುಕ್ ಮಾಡಿದವರಿಗೆ ಅವರ ಪ್ರಯಾಣ ಯೋಜನೆಗಳಲ್ಲಿ ವ್ಯತ್ಯಯವಾಗುವುದು ತಮಗೆ ಅರಿವಿದೆ. ಸಾಧ್ಯವಾಗಿರುವ ಎಲ್ಲಾ ನೆರವನ್ನೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಹೇಳಿರುವ ಸಂಸ್ಥೆ, ತಾನು ಆರ್ಥಿಕ ಪುನಶ್ಚೇತನಕ್ಕೆ ಇನ್ಸಾಲ್ವೆನ್ಸಿ ಅರ್ಜಿ ಹಾಕಿದ್ದು, ಸಾಧ್ಯವಾದಷ್ಟು ಬೇಗ ಬುಕಿಂಗ್ ಸ್ವೀಕರಿಸಲು ಸಾಧ್ಯವಾಗಬಹುದು ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿUS Indians: ಅಮೆರಿಕದಲ್ಲಿ ಕೆಲಸ ಕಳೆದುಕೊಂಡ ಭಾರತೀಯರು ಎಷ್ಟು? 2 ತಿಂಗಳೊಳಗೆ ಬೇರೆ ಕೆಲಸ ಗಿಟ್ಟಿಸಿಕೊಳ್ಳದಿದ್ದರೆ ಗತಿ ಏನು?

30 ದಿನದಲ್ಲಿ ರಿವೈವಲ್ ಪ್ಲಾನ್ ಕೊಡಿ ಎಂದ ಡಿಜಿಸಿಎ

ಇನ್ಸಾಲ್ವೆನ್ಸಿ ಪ್ರಕ್ರಿಯೆ ಸಂಬಂಧ ಗೋ ಫಸ್ಟ್ ಸಂಸ್ಥೆಗೆ ಸಹಾಯ ಮಾಡಲು ವಿಮಾನಯಾನ ಮಹಾನಿರ್ದೇಶನಾಲಯ ಮುಂದಾಗಿದೆ. ವಿಮಾನಗಳು, ಪೈಲಟ್, ಮೈಂಟೆನೆನ್ಸ್ ಸೇರಿದಂತೆ ವಿಮಾನ ಸಂಸ್ಥೆ ಮತ್ತೆ ಚೇತರಿಸಿಕೊಳ್ಳಲು ಏನೇನು ಮಾಡಬಹುದು ಎಂಬುದರ ಪ್ಲಾನ್ ಅನ್ನು 30 ದಿನದೊಳಗೆ ತನಗೆ ಸಲ್ಲಿಸುವಂತೆ ಡಿಜಿಸಿಎ ಸೂಚಿಸಿದೆ.

ಮೇ 3ರಂದು ಗೋ ಫಸ್ಟ್ ಏರ್​ಲೈನ್ ಸಂಸ್ಥೆ ದಿಢೀರ್ ಆಗಿ ತನ್ನ ಫ್ಲೈಟ್ ಬುಕಿಂಗ್ ನಿಲ್ಲಿಸಿ, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್​ಸಿಎಲ್​ಟಿ) ಬಳಿ ಇನ್ಸಾಲ್ವೆನ್ಸಿಗೆ ಅರ್ಜಿ ಹಾಕಿತು. ಅರ್ಧದಷ್ಟು ವಿಮಾನಗಳು ಎಂಜಿನ್ ವೈಫಲ್ಯದಿಂದ ಕೆಟ್ಟು ನಿಂತಿವೆ. ಇದರಿಂದ ತಮಗೆ ಭಾರೀ ನಷ್ಟವಾಗಿದೆ. ತನಗೆ ವಿಮಾನಗಳನ್ನು ಗುತ್ತಿಗೆ ಕೊಟ್ಟಿರುವ ಸಂಸ್ಥೆಗಳು ಸಹಾಯ ಮಾಡುತ್ತಿಲ್ಲ. ಕಂಪನಿ ಹಣಕಾಸು ಬಿಕ್ಕಟ್ಟಿಗೆ ಸಿಲುಕಿದೆ. ಈ ಬಿಕ್ಕಟ್ಟಿನಿಂದ ಹೊರಬರಲು ಸಹಾಯ ಮಾಡಿ ಎಂದು ಗೋ ಫಸ್ಟ್ ತನ್ನ ಇನ್ಸಾಲ್ವೆನ್ಸಿ ಅರ್ಜಿಯಲ್ಲಿ ಮನವಿ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್