AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ

ಚಿನ್ನದ ಮೇಲಿನ ಸುಂಕವನ್ನು ಶೇ 7.5ರಿಂದ 12.5ಕ್ಕೆ ಏರಿಕೆ ಮಾಡಿ, ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ಚಿನ್ನದ ಬೆಲೆ ಏರಿಕೆ ಆಗಲಿದೆ.

Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2022 | 10:46 AM

Share

ಕೇಂದ್ರ ಸರ್ಕಾರವು ಚಿನ್ನದ (Gold) ಮೇಲಿನ ಮೂಲ ಆಮದು ತೆರಿಗೆಯನ್ನು ಶೇಕಡಾ 7.5ರಿಂದ ಶೇಕಡಾ 12.5ಕ್ಕೆ ಏರಿಸಿದೆ. ರೂಪಾಯಿ ಮೌಲ್ಯ ದಾಖಲೆಯ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಆಮದು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಗ್ರಾಹಕ ದೇಶವಾದ ಭಾರತ ಸದ್ಯಕ್ಕೆ ಅಸ್ಥಿರವಾದ ಜಾಗತಿಕ ಸ್ಥೂಲ ಆರ್ಥಿಕ ಪರಿಸ್ಥಿತಿಗಳ ನಡುವೆ ಹೆಚ್ಚಿನ ವ್ಯಾಪಾರ ಮತ್ತು ಚಾಲ್ತಿ ಖಾತೆ ಕೊರತೆಯನ್ನು ಎದುರು ನೋಡುತ್ತಿದೆ. ಮೇ ತಿಂಗಳಲ್ಲಿ ದೇಶದ ವ್ಯಾಪಾರ ಕೊರತೆಯು ಗರಿಷ್ಠ ಯುಎಸ್​ಡಿ 24.29 ಬಿಲಿಯನ್‌ಗೆ ಏರಿತು. ಭಾರತವು ಮೇ ತಿಂಗಳಲ್ಲಿ ಯುಎಸ್​ಡಿ 6.03 ಶತಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕಿಂತ ಒಂಬತ್ತು ಪಟ್ಟು ಹೆಚ್ಚಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ ಬೇಡಿಕೆ ಚೇತರಿಸಿಕೊಂಡಿದ್ದರಿಂದ ಭಾರತವು ಕಳೆದ ವರ್ಷ ಒಂದು ದಶಕದಲ್ಲೇ ಅತಿ ಹೆಚ್ಚು ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಸರಕುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವುದು ಆಮದುಗಳನ್ನು ಕಡಿಮೆ ಮಾಡುವ ಒಂದು ಮಾರ್ಗವಾಗಿದೆ. ಈ ಕ್ರಮವು ಕಳೆದ ವರ್ಷ ಬಜೆಟ್‌ನಲ್ಲಿ ಕೇಂದ್ರವು ತೆರಿಗೆಯನ್ನು ಶೇಕಡಾ 7.5ಕ್ಕೆ ಇಳಿಸಿದಂಥ ಕ್ರಮದ ಉಲ್ಟಾ ಆಗಿದೆ.

ಚಿನ್ನದ ಕಳ್ಳಸಾಗಣೆಯನ್ನು ಕಡಿಮೆ ಮಾಡಲು 2022ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇಕಡಾ 7.5 ರಿಂದ ಶೇಕಡಾ 4ಕ್ಕೆ ಇಳಿಸುವಂತೆ ಈ ವರ್ಷದ ಆರಂಭದಲ್ಲಿ ದೇಶದ ಪ್ರಮುಖ ಆಭರಣ ವ್ಯಾಪಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದರು.

ದೇಶೀಯ ಮಾರುಕಟ್ಟೆಯನ್ನು ಬಲಪಡಿಸಲು ಚೀನಾ, ಯುಎಸ್ಎ ಮತ್ತು ಸಿಂಗಾಪೂರದಂತಹ ದೇಶಗಳು ಚಿನ್ನದ ಮೇಲಿನ ಆಮದು ಸುಂಕವನ್ನು ತೆಗೆದಿವೆ.

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Published On - 10:46 am, Fri, 1 July 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ