Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ

ಚಿನ್ನದ ಮೇಲಿನ ಸುಂಕವನ್ನು ಶೇ 7.5ರಿಂದ 12.5ಕ್ಕೆ ಏರಿಕೆ ಮಾಡಿ, ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ಚಿನ್ನದ ಬೆಲೆ ಏರಿಕೆ ಆಗಲಿದೆ.

Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 01, 2022 | 10:46 AM

ಕೇಂದ್ರ ಸರ್ಕಾರವು ಚಿನ್ನದ (Gold) ಮೇಲಿನ ಮೂಲ ಆಮದು ತೆರಿಗೆಯನ್ನು ಶೇಕಡಾ 7.5ರಿಂದ ಶೇಕಡಾ 12.5ಕ್ಕೆ ಏರಿಸಿದೆ. ರೂಪಾಯಿ ಮೌಲ್ಯ ದಾಖಲೆಯ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಆಮದು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಗ್ರಾಹಕ ದೇಶವಾದ ಭಾರತ ಸದ್ಯಕ್ಕೆ ಅಸ್ಥಿರವಾದ ಜಾಗತಿಕ ಸ್ಥೂಲ ಆರ್ಥಿಕ ಪರಿಸ್ಥಿತಿಗಳ ನಡುವೆ ಹೆಚ್ಚಿನ ವ್ಯಾಪಾರ ಮತ್ತು ಚಾಲ್ತಿ ಖಾತೆ ಕೊರತೆಯನ್ನು ಎದುರು ನೋಡುತ್ತಿದೆ. ಮೇ ತಿಂಗಳಲ್ಲಿ ದೇಶದ ವ್ಯಾಪಾರ ಕೊರತೆಯು ಗರಿಷ್ಠ ಯುಎಸ್​ಡಿ 24.29 ಬಿಲಿಯನ್‌ಗೆ ಏರಿತು. ಭಾರತವು ಮೇ ತಿಂಗಳಲ್ಲಿ ಯುಎಸ್​ಡಿ 6.03 ಶತಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕಿಂತ ಒಂಬತ್ತು ಪಟ್ಟು ಹೆಚ್ಚಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ ಬೇಡಿಕೆ ಚೇತರಿಸಿಕೊಂಡಿದ್ದರಿಂದ ಭಾರತವು ಕಳೆದ ವರ್ಷ ಒಂದು ದಶಕದಲ್ಲೇ ಅತಿ ಹೆಚ್ಚು ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಸರಕುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವುದು ಆಮದುಗಳನ್ನು ಕಡಿಮೆ ಮಾಡುವ ಒಂದು ಮಾರ್ಗವಾಗಿದೆ. ಈ ಕ್ರಮವು ಕಳೆದ ವರ್ಷ ಬಜೆಟ್‌ನಲ್ಲಿ ಕೇಂದ್ರವು ತೆರಿಗೆಯನ್ನು ಶೇಕಡಾ 7.5ಕ್ಕೆ ಇಳಿಸಿದಂಥ ಕ್ರಮದ ಉಲ್ಟಾ ಆಗಿದೆ.

ಚಿನ್ನದ ಕಳ್ಳಸಾಗಣೆಯನ್ನು ಕಡಿಮೆ ಮಾಡಲು 2022ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇಕಡಾ 7.5 ರಿಂದ ಶೇಕಡಾ 4ಕ್ಕೆ ಇಳಿಸುವಂತೆ ಈ ವರ್ಷದ ಆರಂಭದಲ್ಲಿ ದೇಶದ ಪ್ರಮುಖ ಆಭರಣ ವ್ಯಾಪಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದರು.

ದೇಶೀಯ ಮಾರುಕಟ್ಟೆಯನ್ನು ಬಲಪಡಿಸಲು ಚೀನಾ, ಯುಎಸ್ಎ ಮತ್ತು ಸಿಂಗಾಪೂರದಂತಹ ದೇಶಗಳು ಚಿನ್ನದ ಮೇಲಿನ ಆಮದು ಸುಂಕವನ್ನು ತೆಗೆದಿವೆ.

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Published On - 10:46 am, Fri, 1 July 22

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು