AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್

ಚಿನ್ನದ ಸಾಲ ನೀಡುವ ರುಪೇಕ್​ನಿಂದ ಸ್ಥೂಲ ಆರ್ಥಿಕ ಕಾರಣಗಳಿಗಾಗಿ 180ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.

Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2022 | 1:49 PM

Share

ಸ್ಟಾರ್ಟ್‌ಅಪ್​ಗಳಿಗೆ ಹಣಕಾಸಿನ ಹರಿವಿನ ಸಮಸ್ಯೆಗಳ ಪರಿಣಾಮವು ಫಿನ್‌ಟೆಕ್ ವಲಯಕ್ಕೂ ವ್ಯಾಪಿಸಿದ್ದು, ಚಿನ್ನದ ಸಾಲಗಳ ಪ್ಲಾಟ್‌ಫಾರ್ಮ್ ರುಪೇಕ್‌ನೊಂದಿಗೆ ವಿಸ್ತರಿಸಿದೆ. ಇದೀಗ ಆ ಕಂಪೆನಿಯು ತನ್ನ ಉದ್ಯೋಗಿಗಳ ಒಟ್ಟು ಸಂಖ್ಯೆ ಆಧಾರದ ಮೇಲೆ ಶೇಕಡಾ 10ರಿಂದ 15ರಷ್ಟು ಮಂದಿಯನ್ನು ವಜಾಗೊಳಿಸಿದೆ (Lay Offs) ಎಂದು ಹೇಳಿದೆ. ಕಠಿಣ ಸ್ಥೂಲ ಆರ್ಥಿಕ ಪರಿಸ್ಥಿತಿಗಳ ನಡುವೆ ಉದ್ಯೋಗಿಗಳನ್ನು ವಜಾಗೊಳಿಸಿದ ಮೊದಲ ಫಿನ್‌ಟೆಕ್ ರುಪೇಕ್. 1,200ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಈ ಕಂಪೆನಿಯು 180ಕ್ಕೂ ಹೆಚ್ಚು ಜನರನ್ನು ವಜಾಗೊಳಿಸಿದೆ.

ಕಂಪೆನಿಯು ಈ ಬಗ್ಗೆ ನೀಡಿದ ಹೇಳಿಕೆಯಲ್ಲಿ ಹೀಗೆ ಹೇಳಿದೆ, “ತೀವ್ರವಾದ ವಿಷಾದದಿಂದ ನಾವು ಶೇ 10ರಿಂದ 15ರಷ್ಟು ಉದ್ಯೋಗಿಗಳೊಂದಿಗೆ ಬೇರೆಯಾಗುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ದುರ್ಬಲವಾದ ಸ್ಥೂಲ ಆರ್ಥಿಕ ವಾತಾವರಣವು ನಮ್ಮ ಕಾರ್ಯತಂತ್ರವನ್ನು ಮರು-ಮೌಲ್ಯಮಾಪನದ ನಿರ್ಣಯಕ್ಕೆ, ನಮ್ಮ ವೆಚ್ಚಗಳನ್ನು ಮರುಪರಿಶೀಲಿಸಲು ಒತ್ತಾಯಿಸಿದೆ. ನಮ್ಮ ಸುಸ್ಥಿರತೆ ಮತ್ತು ಬೆಳವಣಿಗೆಯನ್ನು ಬೆಂಬಲಿಸಲು ಸಂಸ್ಥೆಯ ರಚನೆಯು ಕಡಿಮೆ ಸಂಖ್ಯೆಯಲ್ಲಿ ಇರುತ್ತದೆ.”

“ಈ ಬೆಳವಣಿಗೆಯ ಪರಿಣಾಮಕ್ಕೆ ಗುರಿ ಆಗಿರುವ ಎಲ್ಲ ಉದ್ಯೋಗಿಗಳು ನೀಡಿದ ನಿಸ್ವಾರ್ಥ ಕೊಡುಗೆಗಳನ್ನು ನಾವು ಅಂಗೀಕರಿಸುತ್ತೇವೆ ಮತ್ತು ಈ ಪರಿವರ್ತನೆಯ ಮೂಲಕ ಅವರನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ,” ಎಂದು ಕಂಪೆನಿಯ ಹೇಳಿಕೆಯಲ್ಲಿ ಸೇರಿಸಲಾಗಿದೆ.

ಅಂದ ಹಾಗೆ ಸ್ಟಾರ್ಟ್ಅಪ್​ಗಳ ಪಾಲಿಗೆ ಈಗ ಬಹಳ ಕಠಿಣ ಸಮಯ ಆಗಿದೆ. ಕಂಪೆನಿ ನಡೆಸುವುದಕ್ಕೆ ಕಷ್ಟ ಆಗಿ, ಎಷ್ಟೋ ಸ್ಟಾರ್ಟ್​ಅಪ್​ಗಳು ವೆಚ್ಚ ಕಡಿತಕ್ಕೆ ಮುಂದಾಗಿವೆ. ಅದರಲ್ಲೂ ಅನ್​ಅಕಾಡೆಮಿ, ವೇದಾಂತುದಂಥ ಎಡ್​ಟೆಕ್​ ಕಂಪೆನಿಗಳಿಗೆ ದೊಡ್ಡ ಮಟ್ಟದಲ್ಲೇ ಹೊಡೆತ ಬಿದ್ದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Lay Offs: ಮೇ ತಿಂಗಳಲ್ಲಿ ಜಾಗತಿಕವಾಗಿ 15000 ಟೆಕ್ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

Published On - 1:48 pm, Tue, 7 June 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು