AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್

ಚಿನ್ನದ ಸಾಲ ನೀಡುವ ರುಪೇಕ್​ನಿಂದ ಸ್ಥೂಲ ಆರ್ಥಿಕ ಕಾರಣಗಳಿಗಾಗಿ 180ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.

Rupek Lay Offs: ರುಪೇಕ್​ನಿಂದ 180ಕ್ಕೂ ಹೆಚ್ಚು ಉದ್ಯೋಗಿಗಳ ವಜಾ; ಸ್ಥೂಲ ಆರ್ಥಿಕತೆಯ ಹೊಡೆತ ಬಿದ್ದ ಮೊದಲ ಫಿನ್​ಟೆಕ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2022 | 1:49 PM

Share

ಸ್ಟಾರ್ಟ್‌ಅಪ್​ಗಳಿಗೆ ಹಣಕಾಸಿನ ಹರಿವಿನ ಸಮಸ್ಯೆಗಳ ಪರಿಣಾಮವು ಫಿನ್‌ಟೆಕ್ ವಲಯಕ್ಕೂ ವ್ಯಾಪಿಸಿದ್ದು, ಚಿನ್ನದ ಸಾಲಗಳ ಪ್ಲಾಟ್‌ಫಾರ್ಮ್ ರುಪೇಕ್‌ನೊಂದಿಗೆ ವಿಸ್ತರಿಸಿದೆ. ಇದೀಗ ಆ ಕಂಪೆನಿಯು ತನ್ನ ಉದ್ಯೋಗಿಗಳ ಒಟ್ಟು ಸಂಖ್ಯೆ ಆಧಾರದ ಮೇಲೆ ಶೇಕಡಾ 10ರಿಂದ 15ರಷ್ಟು ಮಂದಿಯನ್ನು ವಜಾಗೊಳಿಸಿದೆ (Lay Offs) ಎಂದು ಹೇಳಿದೆ. ಕಠಿಣ ಸ್ಥೂಲ ಆರ್ಥಿಕ ಪರಿಸ್ಥಿತಿಗಳ ನಡುವೆ ಉದ್ಯೋಗಿಗಳನ್ನು ವಜಾಗೊಳಿಸಿದ ಮೊದಲ ಫಿನ್‌ಟೆಕ್ ರುಪೇಕ್. 1,200ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಈ ಕಂಪೆನಿಯು 180ಕ್ಕೂ ಹೆಚ್ಚು ಜನರನ್ನು ವಜಾಗೊಳಿಸಿದೆ.

ಕಂಪೆನಿಯು ಈ ಬಗ್ಗೆ ನೀಡಿದ ಹೇಳಿಕೆಯಲ್ಲಿ ಹೀಗೆ ಹೇಳಿದೆ, “ತೀವ್ರವಾದ ವಿಷಾದದಿಂದ ನಾವು ಶೇ 10ರಿಂದ 15ರಷ್ಟು ಉದ್ಯೋಗಿಗಳೊಂದಿಗೆ ಬೇರೆಯಾಗುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ದುರ್ಬಲವಾದ ಸ್ಥೂಲ ಆರ್ಥಿಕ ವಾತಾವರಣವು ನಮ್ಮ ಕಾರ್ಯತಂತ್ರವನ್ನು ಮರು-ಮೌಲ್ಯಮಾಪನದ ನಿರ್ಣಯಕ್ಕೆ, ನಮ್ಮ ವೆಚ್ಚಗಳನ್ನು ಮರುಪರಿಶೀಲಿಸಲು ಒತ್ತಾಯಿಸಿದೆ. ನಮ್ಮ ಸುಸ್ಥಿರತೆ ಮತ್ತು ಬೆಳವಣಿಗೆಯನ್ನು ಬೆಂಬಲಿಸಲು ಸಂಸ್ಥೆಯ ರಚನೆಯು ಕಡಿಮೆ ಸಂಖ್ಯೆಯಲ್ಲಿ ಇರುತ್ತದೆ.”

“ಈ ಬೆಳವಣಿಗೆಯ ಪರಿಣಾಮಕ್ಕೆ ಗುರಿ ಆಗಿರುವ ಎಲ್ಲ ಉದ್ಯೋಗಿಗಳು ನೀಡಿದ ನಿಸ್ವಾರ್ಥ ಕೊಡುಗೆಗಳನ್ನು ನಾವು ಅಂಗೀಕರಿಸುತ್ತೇವೆ ಮತ್ತು ಈ ಪರಿವರ್ತನೆಯ ಮೂಲಕ ಅವರನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ,” ಎಂದು ಕಂಪೆನಿಯ ಹೇಳಿಕೆಯಲ್ಲಿ ಸೇರಿಸಲಾಗಿದೆ.

ಅಂದ ಹಾಗೆ ಸ್ಟಾರ್ಟ್ಅಪ್​ಗಳ ಪಾಲಿಗೆ ಈಗ ಬಹಳ ಕಠಿಣ ಸಮಯ ಆಗಿದೆ. ಕಂಪೆನಿ ನಡೆಸುವುದಕ್ಕೆ ಕಷ್ಟ ಆಗಿ, ಎಷ್ಟೋ ಸ್ಟಾರ್ಟ್​ಅಪ್​ಗಳು ವೆಚ್ಚ ಕಡಿತಕ್ಕೆ ಮುಂದಾಗಿವೆ. ಅದರಲ್ಲೂ ಅನ್​ಅಕಾಡೆಮಿ, ವೇದಾಂತುದಂಥ ಎಡ್​ಟೆಕ್​ ಕಂಪೆನಿಗಳಿಗೆ ದೊಡ್ಡ ಮಟ್ಟದಲ್ಲೇ ಹೊಡೆತ ಬಿದ್ದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Lay Offs: ಮೇ ತಿಂಗಳಲ್ಲಿ ಜಾಗತಿಕವಾಗಿ 15000 ಟೆಕ್ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

Published On - 1:48 pm, Tue, 7 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್