AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಬೆಲೆ ಕಡಿಮೆ ಆಗಲು ಕಾರಣಗಳೇನು? ಬಂಗಾರ ಈಗ ಸುರಕ್ಷಿತ ಸರಕಾಗಿ ಉಳಿದಿಲ್ಲವಾ?

Reasons for decline in gold rates: ಸಾಮಾನ್ಯವಾಗಿ ಚಿನ್ನವನ್ನು ಸೇಫ್ ಹೇವನ್ ಅಸೆಟ್ ಎಂದು ಪರಿಗಣಿಸಲಾಗುತ್ತದೆ. ಆಪತ್ಕಾಲದಲ್ಲಿ ಜನರು ಚಿನ್ನ ಸಂಗ್ರಹಿಸಿ ಇಟ್ಟುಕೊಳ್ಳುವುದುಂಟು. ಆದರೆ, ಈಗ ಟ್ರೆಂಡ್ ಬದಲಾಗಿದೆ. ಜನರು ಆಪತ್ಕಾಲದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವುದು ಕಡಿಮೆ ಆಗಿದೆ. ಈ ಟ್ರೆಂಡ್​ಗೆ ಏನು ಕಾರಣ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ಚಿನ್ನದ ಬೆಲೆ ಕಡಿಮೆ ಆಗಲು ಕಾರಣಗಳೇನು? ಬಂಗಾರ ಈಗ ಸುರಕ್ಷಿತ ಸರಕಾಗಿ ಉಳಿದಿಲ್ಲವಾ?
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 29, 2026 | 5:29 PM

Share

ಮುಖ್ಯಾಂಶಗಳು

  • ಸಾಮಾನ್ಯವಾಗಿ ಚಿನ್ನವನ್ನು ಸೇಫ್ ಹೇವನ್ ಅಸೆಟ್ ಎಂದು ಪರಿಗಣಿಸಲಾಗುತ್ತದೆ.
  • ಆಪತ್ಕಾಲದಲ್ಲಿ ಜನರು ಚಿನ್ನ ಸಂಗ್ರಹಿಸಿ ಇಟ್ಟುಕೊಳ್ಳುವುದುಂಟು. ಆದರೆ, ಈಗ ಟ್ರೆಂಡ್ ಬದಲಾಗಿದೆ.
  • ಜನರು ಆಪತ್ಕಾಲದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವುದು ಕಡಿಮೆ ಆಗಿದೆ. ಈ ಟ್ರೆಂಡ್​ಗೆ ಏನು ಕಾರಣ?

ನವದೆಹಲಿ, ಜೂನ್ 29: ಜಾಗತಿಕವಾಗಿ ಆರ್ಥಿಕ ಅಥವಾ ರಾಜಕೀಯ ಬಿಕ್ಕಟ್ಟು ಎದುರಾದಾಗ ಹೂಡಿಕೆದಾರರು ಬಂಗಾರವನ್ನು ಅತ್ಯಂತ ಸುರಕ್ಷಿತ ಹೂಡಿಕೆ (Safe Haven) ಎಂದು ಪರಿಗಣಿಸುವುದುಂಟು. ಆದರೆ ಇತ್ತೀಚಿನ ದಿನಗಳಲ್ಲಿ ಈ ಟ್ರೆಂಡ್ ಬದಲಾಗುತ್ತಿದ್ದು, ಚಿನ್ನದ ಬೆಲೆಯ (Gold) ಮೇಲಿನ ಹಿಡಿತ ಕೈತಪ್ಪುತ್ತಿದೆ. ಚಿನ್ನದ ಬೆಲೆ ಕಳೆದ ನಾಲ್ಕು ತಿಂಗಳಿಂದ ಬಹುತೇಕ ಸತತವಾಗಿ ಕುಸಿಯುತ್ತಾ ಬಂದಿದೆ. ಇರಾನ್ ಅಮೆರಿಕ ಯುದ್ಧ ಹಾಗೂ ನಂತರ ಅನಿಶ್ಚಿತ ಪರಿಸ್ಥಿತಿಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುವ ಬದಲು ಇಳಿಕೆ ಆಗುತ್ತಿರುವುದು ಕೌತುಕ ಮೂಡಿಸಿದೆ. ಹೂಡಿಕೆದಾರರ ಈ ವರ್ತನೆಗೆ ಏನು ಕಾರಣ? ಚಿನ್ನದ ಆಕರ್ಷಣೆ ಯಾಕೆ ಕಡಿಮೆ ಆಗಿದೆ? ಚಿನ್ನದ ಬೆಲೆ ಕುಸಿಯಲು ಈ ಕೆಳಕಾಣಿಸಿದ ಸಂಭಾವ್ಯ ಕಾರಣಗಳಿವೆ:

ಅಮೆರಿಕದ ಫೆಡರಲ್ ರಿಸರ್ವ್ (Fed) ನೀತಿ

ಅಮೆರಿಕದ ಫೆಡರಲ್ ರಿಸರ್ವ್‌ನ ಹೊಸ ಮುಖ್ಯಸ್ಥರ ನೇತೃತ್ವದಲ್ಲಿ ಬಡ್ಡಿದರಗಳನ್ನು ಹೆಚ್ಚಿಸುವ ಅಥವಾ ಅವುಗಳನ್ನು ದೀರ್ಘಕಾಲದವರೆಗೆ ಮೇಲ್ಮಟ್ಟದಲ್ಲಿ ಕಾಯ್ದುಕೊಳ್ಳುವ ಮುನ್ಸೂಚನೆ ಸಿಕ್ಕಿದೆ. ಬಡ್ಡಿದರಗಳು ಹೆಚ್ಚಾದಾಗ ಹೂಡಿಕೆದಾರರು ಚಿನ್ನದ ಬದಲಾಗಿ ಬಾಂಡ್‌ಗಳತ್ತ ಮುಖ ಮಾಡುತ್ತಾರೆ, ಏಕೆಂದರೆ ಚಿನ್ನದ ಮೇಲೆ ಯಾವುದೇ ಬಡ್ಡಿ ಸಿಗುವುದಿಲ್ಲ.

ಇದನ್ನೂ ಓದಿ: ದಿ ಫೌಂಡ್ರಿ- 5,000 ರೂ ಶುಲ್ಕ, 90 ದಿನ ವಸತಿ, ಹೊಸ ಸ್ಟಾರ್ಟಪ್ ಕಟ್ಟಿ, ಹೂಡಿಕೆದಾರರ ಬೆಂಬಲವೂ ಪಡೆಯಿರಿ

ಬಲಿಷ್ಠಗೊಳ್ಳುತ್ತಿರುವ ಯುಎಸ್ ಡಾಲರ್ (US Dollar)

ಫೆಡರಲ್ ರಿಸರ್ವ್​ನ ಕಠಿಣ ನಿಲುವಿನಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಸೂಚ್ಯಂಕ (Dollar Index) ಅತ್ಯಂತ ಬಲಿಷ್ಠಗೊಳ್ಳುತ್ತಿದೆ. ಸಾಮಾನ್ಯವಾಗಿ ಡಾಲರ್ ಮತ್ತು ಚಿನ್ನದ ಬೆಲೆಗೆ ಉಲ್ಟಾ ಸಂಬಂಧವಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಷ್ಟೂ ಚಿನ್ನದ ಬೆಲೆಯ ಮೇಲೆ ಒತ್ತಡ ಹೆಚ್ಚಾಗಿ ಅದು ಕುಸಿಯತೊಡಗುತ್ತದೆ.

ಕಚ್ಚಾ ತೈಲ ಮತ್ತು ಮಧ್ಯಪ್ರಾಚ್ಯದ ಜಾಗತಿಕ ವಿದ್ಯಮಾನಗಳು

ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ತಾತ್ಕಾಲಿಕ ಕದನ ವಿರಾಮ ಏರ್ಪಟ್ಟಿದ್ದರಿಂದಾಗಿ ಕಚ್ಚಾ ತೈಲ (Crude Oil) ಬೆಲೆಗಳು ನಿಯಂತ್ರಣಕ್ಕೆ ಬಂದಿವೆ. ಯುದ್ಧದ ಭೀತಿ ಕಡಿಮೆಯಾಗುತ್ತಿದ್ದಂತೆ, ಮಾರುಕಟ್ಟೆಯಲ್ಲಿದ್ದ ಆತಂಕ ದೂರವಾಗಿ ಚಿನ್ನಕ್ಕೆ ಇದ್ದ ಬೇಡಿಕೆ (War Premium) ಕಡಿಮೆಯಾಗಿದೆ.

ಹೂಡಿಕೆದಾರರ ಧೋರಣೆ ಬದಲಾವಣೆ

ಹೂಡಿಕೆದಾರರು ಈಗ ಕೇವಲ ಸುರಕ್ಷತೆಗಾಗಿ ಚಿನ್ನವನ್ನು ಖರೀದಿಸುತ್ತಿಲ್ಲ, ಬದಲಾಗಿ ಇಟಿಎಫ್​ಗಳ (ETF) ಮೂಲಕ ಲಾಭ ಗಳಿಸುವ ಉದ್ದೇಶ ಹೊಂದಿದ್ದಾರೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಷೇರುಗಳು ಕುಸಿದಾಗ, ಮಾರ್ಜಿನ್ ಕಾಲ್‌ಗಳನ್ನು ಸರಿದೂಗಿಸಲು ಚಿನ್ನವನ್ನೂ ಮಾರಾಟ ಮಾಡುತ್ತಿದ್ದಾರೆ. ಇದು ಚಿನ್ನದ ಸಾಂಪ್ರದಾಯಿಕ ರಕ್ಷಣಾತ್ಮಕ ಗುಣವನ್ನು ಕಡಿಮೆ ಮಾಡಿದೆ.

ಇದನ್ನೂ ಓದಿ: ಜುಲೈನಲ್ಲಿ ದೇಶಾದ್ಯಂತ 13 ಬ್ಯಾಂಕ್ ರಜಾ ದಿನಗಳು; ಕರ್ನಾಟಕದಲ್ಲೆಷ್ಟು?

ಮಾರುಕಟ್ಟೆಯ ಪ್ರಸ್ತುತ ಸ್ಥಿತಿ

ಕಳೆದ ಜನವರಿಯಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದ ಚಿನ್ನದ ಬೆಲೆ, ಇತ್ತೀಚಿನ ವಾರಗಳಲ್ಲಿ ಭಾರಿ ಕುಸಿತ ಕಂಡಿದೆ. ತಜ್ಞರ ಪ್ರಕಾರ, ಯುಎಸ್ ಡಾಲರ್‌ನ ಅಬ್ಬರ ತಗ್ಗುವವರೆಗೆ ಅಥವಾ ಫೆಡರಲ್ ರಿಸರ್ವ್ ತನ್ನ ನೀತಿಯನ್ನು ಸಡಿಲಗೊಳಿಸುವವರೆಗೆ ಚಿನ್ನದ ಬೆಲೆಯ ಮೇಲಿನ ಈ ಒತ್ತಡ ಮುಂದುವರಿಯುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Mon, 29 June 26

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!