AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ

Gold Rate Today: ಚಿನ್ನ, ಬೆಳ್ಳಿಯ ಆಭರಣ ಕೊಳ್ಳಬೇಕು ಅಂದುಕೊಂಡಿದ್ದರೆ ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಆಭರಣದ ದರ ಎಷ್ಟಿದೆ ಪರಿಶೀಲಿಸಿ.

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 31, 2021 | 7:44 AM

Share

Gold and Silver Price Today | ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬ ಎದುರು ಬರುತ್ತಿದೆ. ಹಬ್ಬದ ಸಮಯದಲ್ಲಿ ಚಿನ್ನ, ಬೆಳ್ಳಿ ಖರೀದಿಸಬೇಕು ಅಂದುಕೊಂಡವರು ಈ ಕುರಿತಾಗಿ ಯೋಚಿಸುವ ಸಮಯವಿದು. ಚಿನ್ನ, ಬೆಳ್ಳಿಯ ಆಭರಣದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಅಂದುಕೊಂಡವರು ಇಂದಿನ ದರ ವಿವರ ಪರಿಶೀಲಿಸಿ. ಇಂದು ಭಾನುವಾರ (ಅ.30) ಗ್ರಾಹಕರಿಗೆ ಸಂತೋಷದ ವಿಷಯವೆಂದರೆ ಚಿನ್ನ (Gold price), ಬೆಳ್ಳಿ ದರದಲ್ಲಿ (Silver Price) ಇಳಿಕೆ ಆಗಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆ ಕಂಡು ಬಂದಿದೆ. ಅದೆಷ್ಟೋ ವರ್ಷಗಳಿಂದ ಹಣ ಕೂಡಿಟ್ಟವರು, ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದು ಅಂದುಕೊಂಡವರು ಆ ಕುರಿತಂತೆ ಯೋಚಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ವಿವರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ವಿವರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ದಾಖಲಾಗಿದೆ. ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಮಾಹಿತಿ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಇಳಿಕೆ ಆಗಿದೆ. ಮುಂಬೈನಲ್ಲಿ ಚಿನ್ನದ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚಿನ್ನದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಅಂದುಕೊಳ್ಳುವುದು ತಪ್ಪೇನಲ್ಲ. ಅದೇ ರೀತಿ ಚಿನ್ನ ಖರೀದಿಸಲೇ ಬೇಕು ಎಂದು ಹಣವನ್ನು ಕೂಡಿಟ್ಟಿರುವಾಗ ದರ ಇಳಿಕೆಯತ್ತ ಸಾಗಲಿ ಎಂದು ಕಾಯುತ್ತಿರಬಹುದು. ಹೀಗಿರುವಾಗ ಕಳೆದ ಎರಡು ದಿನಗಳಿಂದ ಚಿನ್ನದ ದರ ದೈನಂದಿನ ದರ ಬದಲಾವಣೆಯಲ್ಲಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಏರಿಳಿತಗಳಾಗಿವೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Published On - 7:31 am, Sun, 31 October 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ