Gold Price Today: ಚಿನ್ನ, ಬೆಳ್ಳಿ ದರ ಇಂದೂ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಇಂದೂ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)

Updated on: Feb 14, 2023 | 5:00 AM

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿಯ ದರ ಮತ್ತೆ ಕುಸಿದಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಉಭಯ ಲೋಹಗಳ ದರ ಇಂದೂ ಇಳಿಕೆಯಾಗಿದ್ದು, ಏರಿಳಿತದ ಟ್ರೆಂಡ್ ಮುಂದುವರಿದಿದೆ. ಹಿಂದಿನ ಎರಡು ಅವಧಿಯ ವಹಿವಾಟಿನಲ್ಲಿಯೂ ಚಿನ್ನ, ಬೆಳ್ಳಿ ದರ ಇಳಿಕೆಯಾಗಿತ್ತು. ಕಳೆದ ವಾರ ಒಟ್ಟಾರೆಯಾಗಿ ಏರಿಳಿತದ ವಹಿವಾಟು ದಾಖಲಾಗಿತ್ತು. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 150 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 500 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 52,500 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 150 ರೂ. ಇಳಿಕೆಯಾಗಿ 57,230 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಇಳಿಕೆಯಾಗಿ 70,000 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,350 ರೂ.
  • ಮುಂಬೈ- 52,500 ರೂ.
  • ದೆಹಲಿ- 52,650 ರೂ.
  • ಕೊಲ್ಕತ್ತಾ- 52,500 ರೂ.
  • ಬೆಂಗಳೂರು- 52,550 ರೂ.
  • ಹೈದರಾಬಾದ್- 52,500 ರೂ.
  • ಕೇರಳ- 52,500 ರೂ.
  • ಪುಣೆ- 52,500 ರೂ.
  • ಮಂಗಳೂರು- 52,550 ರೂ.
  • ಮೈಸೂರು- 52,550 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,200 ರೂ.
  • ಮುಂಬೈ- 57,230 ರೂ.
  • ದೆಹಲಿ- 57,380 ರೂ.
  • ಕೊಲ್ಕತ್ತಾ- 57,230 ರೂ.
  • ಬೆಂಗಳೂರು- 57,280 ರೂ.
  • ಹೈದರಾಬಾದ್- 57,230 ರೂ.
  • ಕೇರಳ- 57,230 ರೂ.
  • ಪುಣೆ- 57,230 ರೂ.
  • ಮಂಗಳೂರು- 57,280 ರೂ.
  • ಮೈಸೂರು- 57,280 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 72,000 ರೂ.
  • ಮೈಸೂರು- 72,000 ರೂ.
  • ಮಂಗಳೂರು- 72,000 ರೂ.
  • ಮುಂಬೈ- 70,000 ರೂ.
  • ಚೆನ್ನೈ- 72,000 ರೂ.
  • ದೆಹಲಿ- 70,000 ರೂ.
  • ಹೈದರಾಬಾದ್- 72,000 ರೂ.
  • ಕೊಲ್ಕತ್ತಾ- 70,000 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us