Gold Price Today: ಚಿನ್ನ, ಬೆಳ್ಳಿ ಬೆಲೆ ಕುಸಿತ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ಬೆಲೆ ಕುಸಿತ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ದರ ವಿವರ (ಸಾಂದರ್ಭಿಕ ಚಿತ್ರ)

Updated on: Feb 01, 2023 | 5:00 AM

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಏರಿಳಿತದ ಟ್ರೆಂಡ್ ಮುಂದುವರಿದಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಬೆಳ್ಳಿ ದರ ಹೆಚ್ಚಾಗಿದ್ದರೆ, ಚಿನ್ನದ ದರ ತಟಸ್ಥವಾಗಿತ್ತು. ಇಂದು ಎರಡೂ ಲೋಹಗಳ ದರ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 150 ರೂ. ಇಳಿಕೆಯಾದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 170 ರೂ. ಕುಸಿದಿದೆ. 1 ಕೆಜಿ ಬೆಳ್ಳಿ ಬೆಲೆ 100 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಇಳಿಕೆಯಾಗಿ 52,500 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 170 ರೂ. ಇಳಿಕೆಯಾಗಿ 57,270 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 400 ರೂ. ಕುಸಿದು 72,300 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,380 ರೂ.
  • ಮುಂಬೈ- 52,500 ರೂ.
  • ದೆಹಲಿ- 52,650 ರೂ.
  • ಕೊಲ್ಕತ್ತಾ- 52,500 ರೂ.
  • ಬೆಂಗಳೂರು- 52,550 ರೂ.
  • ಹೈದರಾಬಾದ್- 52,500 ರೂ.
  • ಕೇರಳ- 52,500 ರೂ.
  • ಪುಣೆ- 52,500 ರೂ.
  • ಮಂಗಳೂರು- 52,550 ರೂ.
  • ಮೈಸೂರು- 52,550 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,230 ರೂ.
  • ಮುಂಬೈ- 57,270 ರೂ.
  • ದೆಹಲಿ- 57,430 ರೂ.
  • ಕೊಲ್ಕತ್ತಾ- 57,270 ರೂ.
  • ಬೆಂಗಳೂರು- 57,330 ರೂ.
  • ಹೈದರಾಬಾದ್- 57,270 ರೂ.
  • ಕೇರಳ- 57,270 ರೂ.
  • ಪುಣೆ- 57,270 ರೂ.
  • ಮಂಗಳೂರು- 57,330 ರೂ.
  • ಮೈಸೂರು- 57,330 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,500 ರೂ.
  • ಮೈಸೂರು- 74,500 ರೂ.
  • ಮಂಗಳೂರು- 74,500 ರೂ.
  • ಮುಂಬೈ- 72,300 ರೂ.
  • ಚೆನ್ನೈ- 74,500 ರೂ.
  • ದೆಹಲಿ- 72,300 ರೂ.
  • ಹೈದರಾಬಾದ್- 74,500 ರೂ.
  • ಕೊಲ್ಕತ್ತಾ- 72,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us