Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸಲಿದ್ದೀರಾ? ಇಲ್ಲಿದೆ ನೋಡಿ ದರ ವಿವರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸಲಿದ್ದೀರಾ? ಇಲ್ಲಿದೆ ನೋಡಿ ದರ ವಿವರ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Image Credit source: PTI

Updated on: Jan 22, 2023 | 12:00 AM

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರದ ಏರಿಳಿತ ಮತ್ತೆ ಮುಂದುವರಿದಿದೆ. ಸತತ ಎರಡು ದಿನ ಕುಸಿದು, ನಂತರ ತುಸು ಚೇತರಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಬೆಳ್ಳಿಯ ದರ ಮಾತ್ರ ಸತತ ಎರಡನೇ ದಿನವೂ ಏರಿಕೆ ದಾಖಲಿಸಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 100 ರೂ. ಇಳಿಕೆಯಾದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 50 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 200 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 52,250 ರೂ. ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 50 ರೂ. ಕುಸಿದು 57,060 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ಏರಿಕೆಯಾಗಿ 72,300 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,200 ರೂ.
  • ಮುಂಬೈ- 52,250 ರೂ.
  • ದೆಹಲಿ- 52,400 ರೂ.
  • ಕೊಲ್ಕತ್ತಾ- 52,250 ರೂ.
  • ಬೆಂಗಳೂರು- 52,300 ರೂ.
  • ಹೈದರಾಬಾದ್- 52,250 ರೂ.
  • ಕೇರಳ- 52,250 ರೂ.
  • ಪುಣೆ- 52,250 ರೂ.
  • ಮಂಗಳೂರು- 52,300 ರೂ.
  • ಮೈಸೂರು- 52,300 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,040 ರೂ.
  • ಮುಂಬೈ- 57,060 ರೂ.
  • ದೆಹಲಿ- 57,210 ರೂ.
  • ಕೊಲ್ಕತ್ತಾ- 57,060 ರೂ.
  • ಬೆಂಗಳೂರು- 57,110 ರೂ.
  • ಹೈದರಾಬಾದ್- 57,060 ರೂ.
  • ಕೇರಳ- 57,060 ರೂ.
  • ಪುಣೆ- 57,060 ರೂ.
  • ಮಂಗಳೂರು- 57,110 ರೂ.
  • ಮೈಸೂರು- 57,110 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,300 ರೂ.
  • ಮೈಸೂರು- 74,300 ರೂ.
  • ಮಂಗಳೂರು- 74,300 ರೂ.
  • ಮುಂಬೈ- 72,300 ರೂ.
  • ಚೆನ್ನೈ- 74,300 ರೂ.
  • ದೆಹಲಿ- 72,300 ರೂ.
  • ಹೈದರಾಬಾದ್- 74,300 ರೂ.
  • ಕೊಲ್ಕತ್ತಾ- 72,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us