AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಬೆಂಗಳೂರಿನಲ್ಲಿ ಏರಿಕೆಯಾದ ಚಿನ್ನ, ಬೆಳ್ಳಿ ದರ; ವಿವಿಧ ನಗರಗಳಲ್ಲಿ ಎಷ್ಟಿದೆ ಬೆಲೆ?

Gold Price Today: ಚಿನ್ನ ಕೊಳ್ಳುವ ಸಲುವಾಗಿ ಅದೆಷ್ಟೋ ವರ್ಷಗಳಿಂದ ಹಣ ಕೂಡಿಟ್ಟು ಬಂದಿರಬಹುದು. ಮನೆಯಲ್ಲಿ ವಿಶೇಷ ಪೂಜೆ ಇದ್ದರೆ ಆಭರಣ ಕೊಳ್ಳಲೇ ಬೇಕಲ್ಲವೇ.. ಪೂಜಾ ಸಾಮಗ್ರಗಳಿಗೆ ಬೇಕಾದ ಬೆಳ್ಳಿಯನ್ನೂ ಖರೀದಿಸಬೇಕು ಅಂದಾದಾಗ ಇಂದಿನ ದರ ಎಷ್ಟಿದೆ ಎಂಬ ಕುತೂಹಲ ಮೂಡುತ್ತದೆ.

Gold Rate Today: ಬೆಂಗಳೂರಿನಲ್ಲಿ ಏರಿಕೆಯಾದ ಚಿನ್ನ, ಬೆಳ್ಳಿ ದರ; ವಿವಿಧ ನಗರಗಳಲ್ಲಿ ಎಷ್ಟಿದೆ ಬೆಲೆ?
ಚಿನ್ನದ ಆಭರಣ
TV9 Web
| Updated By: shruti hegde|

Updated on:Aug 25, 2021 | 8:48 AM

Share

Gold Silver Price Today | ಬೆಂಗಳೂರು: ಚಿನ್ನ, ಬೆಳ್ಳಿ ದರ (Silver Price) ಸಾಮಾನ್ಯವಾಗಿ ದೈನಂದಿನ ದರ ಬದಲಾವಣೆಯಲ್ಲಿ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಚಿನ್ನದ ದರ (Gold Price) ಇಳಿಕೆಯತ್ತ ಸಾಗಲಿ ಎಂಬುದು ಎಲ್ಲಾ ಗ್ರಾಹಕರ ಆಸೆ. ಹಾಗಾಗಿಯೇ ಆಭರಣಗಳ ಬೆಲೆ ಎಷ್ಟಿದೆ? ದೈನಂದಿನ ದರದಲ್ಲಿ ಎಷ್ಟು ಬದಲಾವಣೆಯಾಗಿದೆಯೇ? ಎಂಬ ಕುತೂಹಲ ಇದ್ದೇ ಇರುತ್ತದೆ. ಪ್ರಮುಖ ನಗರಗಳಲ್ಲಿ ಇಂದು ( ಆಗಸ್ಟ್ 25, ಬುಧವಾರ) ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ.

ಚಿನ್ನ ಕೊಳ್ಳುವ ಸಲುವಾಗಿ ಅದೆಷ್ಟೋ ವರ್ಷಗಳಿಂದ ಹಣ ಕೂಡಿಟ್ಟು ಬಂದಿರಬಹುದು. ಇಲ್ಲವೇ ಸ್ನೇಹಿತರಿಗಾಗಿ, ಪ್ರೇಯಸಿಗಾಗಿ ಅಥವಾ ಹೆಂಡತಿಗೆ ಉಡುಗೊರೆ ಕೊಡುವ ಪ್ಲ್ಯಾನ್ ಮಾಡಿರಬಹುದು. ಇಲ್ಲವೇ ಮನೆಯಲ್ಲಿ ವಿಶೇಷ ಪೂಜೆ ಇದ್ದರೆ ಆಭರಣ ಕೊಳ್ಳಲೇ ಬೇಕಲ್ಲವೇ.. ಪೂಜಾ ಸಾಮಗ್ರಗಳಿಗೆ ಬೇಕಾದ ಬೆಳ್ಳಿಯನ್ನೂ ಖರೀದಿಸಬೇಕು ಅಂದಾದಾಗ ಇಂದಿನ ದರ ಎಷ್ಟಿದೆ ಎಂಬ ಕುತೂಹಲ ಮೂಡುತ್ತದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,460 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,44,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,500 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,85,000 ರೂಪಾಯಿ ನಿಗದಿಯಾಗಿದೆ. ನಿನ್ನೆ ದರಕ್ಕಿಂತ ಕೊಂಚ ಏರಿಕೆ ಕಂಡು ಬಂದಿದೆ. ಬೆಳ್ಳಿ ದರವೂ ಸಹ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ದರ 600 ರೂಪಾಯಿ ಏರಿಕೆ ಬಳಿಕ 63,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,860 ರೂಪಾಯಿ ಹಾಗೂ 100 ಗ್ರಾಮ ಚಿನ್ನಕ್ಕೆ 4,48,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,940 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನಕ್ಕೆ 4,89,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರವಾಗಿಯೇ ಉಳಿದಿದ್ದು ಕೆಜಿ ಬೆಳ್ಳಿ ಬೆಲೆ 67,700 ರೂಪಾಯಿ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 46,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,66,100 ರೂಪಾಯಿ ನಿಗದಿಯಾಗಿದೆ. ಅದೆ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,08,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆ ಹೈದರಾಬಾದ್, ಮುಂಬೈ, ಜೈಪುರದಲ್ಲಿಯೂ ಚಿನ್ನದ ದರ ಏರಿಕೆ ಕಂಡು ಬಂದಿದೆ. ಇನ್ನು, ಬೆಳ್ಳಿ ದರ ಕೆಲವೆಡೆ ಏರಿಕೆ ಆಗಿದ್ದರೆ ಇನ್ನು ಕೆಲವೆಡೆ ಸ್ಥಿರವಾಗಿದೆ. ನಿನ್ನೆ ಕೂಡಾ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿತ್ತು. ಅದೇ ರೀತಿ ಇಂದು ಸಹ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಆಭರಣಗಳ ಬೆಲೆ ಏರಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಚಿನ್ನಾಭರಣ ಖರೀದಿದಾರದಿಗೆ ಗುಡ್​ ನ್ಯೂಸ್​; ಇಂದು ಸಹ ಇಳಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ

Gold Price Today: ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

(Gold Price increased today 2021 august 25 check silver price in bangalore delhi mumbai and major city)

Published On - 8:37 am, Wed, 25 August 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?