AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ ಕೊಳ್ಳುವತ್ತ ಯೋಚಿಸಬಹುದು; ಬೆಲೆ ಅಲ್ಪವೇ ಏರಿಕೆಯಾಗಿದೆ ಅಷ್ಟೆ! ಪ್ರಮುಖ ನಗರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Gold Rate Today: ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತದೆ ಎಂಬ ಭರವಸೆಯೊಂದಿಗೆ ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತಾರೆ. ಹಾಗಿರುವಾಗ ಇಂದಿನ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ. ಬಳಿಕ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Rate Today: ಚಿನ್ನ ಕೊಳ್ಳುವತ್ತ ಯೋಚಿಸಬಹುದು; ಬೆಲೆ ಅಲ್ಪವೇ ಏರಿಕೆಯಾಗಿದೆ ಅಷ್ಟೆ! ಪ್ರಮುಖ ನಗರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jul 21, 2021 | 9:59 AM

Gold Silver Price Today: ಚಿನ್ನದ ದರ ಏರಿಳಿತ ಕಾಣುತ್ತಿರುವುದು ಸಹಜ. ಚಿನ್ನದ ದರ(Gold Price) ಇಳಿಕೆಕತ್ತ ಸಾಗಿದಾಗ ಆಭರಣ ಕೊಳ್ಳಬೇಕು ಎಂದೆನಿಸುವುದೂ ತಪ್ಪಲ್ಲ. ಕಳೆದ ಎರಡು ದಿನಗಳಿಂದ ಚಿನ್ನದ ದರ ಅಲ್ಪವೇ ಏರುತ್ತಿದೆ. ಇಂದು ( ಜುಲೈ 21 ಬುಧವಾರ) ಕೊಂಚ ಏರಿದೆ. ದೈನಂದಿನ ದರ ಬದಲಾವಣೆಯಲ್ಲಿ ಪರಿಶೀಲಿಸಿದಾಗ ಬೆಂಗಳೂರಿನಲ್ಲಿ 22 ಕ್ಯಾರೆಟ್​ 1 ಗ್ರಾಂ ಚಿನ್ನದ ದರದಲ್ಲಿ 1 ರೂಪಾಯಿ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ನಗರಗಳಲ್ಲಿಯೂ ಕಳೆದ ಎರಡು ದಿನಗಳಿಂದ ಬೆಳ್ಳಿ ದರ(Silver Price) ಕೊಂಚ ಇಳಿಕೆ ಕಾಣುತ್ತಿದೆ. ಇಂದೂ ಸಹ ದರ ಇಳಿಕೆ ಕಂಡಿದೆ.

ಚಿನ್ನ ಖರೀದಿಸಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಮಹಿಳೆಯರಂತೂ ಚಿನ್ನದ ಆಭರಣ ತೊಟ್ಟು ಸಂತೋಷದಿಂದ ಆಚರಣೆಗಳನ್ನು ಆಚರಿಸುತ್ತಾರೆ. ಅದರಲ್ಲಿಯೂ ಮದುವೆ ಸಮಾರಂಭಗಳು ಮನೆಯಲ್ಲಿದ್ದರೆ ಮೊದಲು ನೆನಪಾಗುವುದೇ ಚಿನ್ನದ ಸರ, ಬಳೆಗಳು. ಹೊಸ ಡಿಸೈನ್​ ಕಂಡಾಗ ನಮ್ಮ ಬಳಿಯೂ ಈ ತರಹದ ಬಳೆಗಳು ಇರಬೇಕಿತ್ತು ಎಂದೆನಿಸುವುದು ಸಹಜ. ಹಾಗಾಗಿಯೇ ಹಣವನ್ನು ಕೂಡಿಟ್ಟು ಆಭರಣ ಕೊಳ್ಳಲು ಮುಂದಾಗುತ್ತಾರೆ. ಇಷ್ಟೆಲ್ಲಾ ಆಸೆ ಇದ್ದಾಗ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ? ಎಂಬ ಕುತೂಹಲ ಇದ್ದೇ ಇರುತ್ತದೆ.

ಕೇವಲ ಆಭರಣಗಳನ್ನು ತೊಟ್ಟು, ಅಲಂಕಾರಗೊಂಡು ಖುಷಿ ಪಡುವುದು ಮಾತ್ರವಲ್ಲ. ಹೂಡಿಕೆಯ ದೃಷ್ಟಿಯಿಂದಲೂ ಚಿನ್ನ ಖರೀದಿಸಲಾಗುತ್ತದೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತದೆ ಎಂಬ ಭರವಸೆಯೊಂದಿಗೆ ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತಾರೆ. ಹಾಗಿರುವಾಗ ಇಂದಿನ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ. ಬಳಿಕ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಚಿನ್ನದ ದರ ವಿವರ

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ 4,52,600 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,380 ರೂಪಾಯಿ ನಿಗದಿ ಮಾಡಲಾಗಿದೆ. 100 ಗ್ರಾಂ ಚಿನ್ನದ ದರ 4,93,800 ರೂಪಾಯಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,410 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,74,100 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,720 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,17,200 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,670 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ 4,56,700 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,820 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,98,200 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಬೆಳ್ಳಿ ದರ ವಿವರ

ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ಬೆಲೆ 66,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿ ಇಳಿಕೆ ಕಂಡಿದೆ. ಚೆನ್ನೈನಲ್ಲಿ 500 ರೂಪಾಯಿ ಕುಸಿತದ ಬಳಿಕ ಕೆಜಿ ಬೆಳ್ಳಿ ಬೆಲೆ 71,800 ರೂಪಾಯಿಗೆ ಇಳಿಕೆಯಾಗಿದೆ. ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆ 66,600 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ 900 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 66,600ರೂಪಾಯಿಗೆ ಇಳಿದಿದೆ. ಮುಂಬೈ, ಛಂಡೀಗಢ, ಹೈದರಾಬಾದ್​, ಕೇರಳ, ಕೋಲ್ಕತ್ತಾ, ಲಕ್ನೋ ನಗರಗಳಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಚಿನ್ನದ ದರ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು? ಮಾಹಿತಿ ಇಲ್ಲಿದೆ

Gold Rate Today: ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ? ಚಿನ್ನದ ದರದಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ಪರಿಶೀಲಿಸಿ

(Gold Price increased Today on 2021 July 21 check silver price in Bangalore Delhi Mumbai and major city)

Published On - 9:00 am, Wed, 21 July 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ