AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price on March 20: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; 1,000 ರೂ. ಕುಸಿತ ಕಂಡ ಬೆಳ್ಳಿ ಬೆಲೆ

Silver Price Today: ಹೆಚ್ಚಳವಾಗುತ್ತಲೇ ಇದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತ ಕಂಡಿದೆ. ಇಂದು 10 ಗ್ರಾಂ ಚಿನ್ನಕ್ಕೆ ಕೇವಲ 170 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ ಇಂದು 1 ಕೆಜಿಗೆ 1,000 ರೂ. ಕುಸಿತವಾಗಿದೆ.

Gold Price on March 20: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್; 1,000 ರೂ. ಕುಸಿತ ಕಂಡ ಬೆಳ್ಳಿ ಬೆಲೆ
ಚಿನ್ನ
TV9 Web
| Edited By: |

Updated on: Mar 20, 2022 | 5:55 AM

Share

ಬೆಂಗಳೂರು: ಭಾರತದಲ್ಲಿ ಯಾವುದೇ ಸಮಾರಂಭಗಳಿಗಾದರೂ ಚಿನ್ನ ಖರೀದಿಸುವ ಪದ್ಧತಿ ಹಲವು ಕುಟುಂಬಗಳಲ್ಲಿದೆ. ಆದರೆ, ಚಿನ್ನದ ಬೆಲೆ ಗಗನಕ್ಕೇರಿದ್ದರಿಂದ ಮದುವೆ, ಉಪನಯನ, ಮುಂತಾದ ಸಮಾರಂಭಗಳ ತಯಾರಿಯಲ್ಲಿರುವ ಜನರಿಗೆ ಚಿನ್ನ ಖರೀದಿಸಲು ಹಿಂದೇಟು ಹಾಕುವಂತಾಗಿತ್ತು. ಹೆಚ್ಚಳವಾಗುತ್ತಲೇ ಇದ್ದ ಚಿನ್ನದ ಬೆಲೆ (Gold Rate) ಇಂದು ಕುಸಿತ ಕಂಡಿದೆ. ಇಂದು 10 ಗ್ರಾಂ ಚಿನ್ನಕ್ಕೆ ಕೇವಲ 170 ರೂ. ಕುಸಿತವಾಗಿದೆ. ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 170 ರೂ. ಇಳಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 150 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ 1,000 ರೂ. ಕುಸಿತವಾಗಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಆದರೆ, ಇಂದು ಬಂಗಾರದ ದರ ಕುಸಿತ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,450 ರೂ. ಇದ್ದುದು 47,300 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,770 ರೂ. ಇದ್ದುದು 51,600 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,050 ರೂ. ಮುಂಬೈ- 47,300 ರೂ, ದೆಹಲಿ- 47,300 ರೂ, ಕೊಲ್ಕತ್ತಾ- 47,300 ರೂ, ಬೆಂಗಳೂರು- 47,300 ರೂ, ಹೈದರಾಬಾದ್- 47,300 ರೂ, ಕೇರಳ- 47,300 ರೂ, ಪುಣೆ- 47,400 ರೂ, ಮಂಗಳೂರು- 47,300 ರೂ, ಮೈಸೂರು- 47,300 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,420 ರೂ, ಮುಂಬೈ- 51,600 ರೂ, ದೆಹಲಿ- 51,600 ರೂ, ಕೊಲ್ಕತ್ತಾ- 51,600 ರೂ, ಬೆಂಗಳೂರು- 51,600 ರೂ, ಹೈದರಾಬಾದ್- 51,600 ರೂ, ಕೇರಳ- 51,600 ರೂ, ಪುಣೆ- 51,700 ರೂ, ಮಂಗಳೂರು- 51,600 ರೂ, ಮೈಸೂರು- 51,600 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಕಳೆದ ವಾರದಿಂದ ಗಗನಕ್ಕೇರಿದ್ದ ಬೆಳ್ಳಿ ಬೆಲೆ ಇಂದು 1,000 ರೂ. ಕುಸಿತವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 69,000 ರೂ. ಇದ್ದುದು ಇಂದು 68,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,300 ರೂ, ಮೈಸೂರು- 72,300 ರೂ., ಮಂಗಳೂರು- 72,300 ರೂ., ಮುಂಬೈ- 68,000 ರೂ, ಚೆನ್ನೈ- 72,300 ರೂ, ದೆಹಲಿ- 68,000 ರೂ, ಹೈದರಾಬಾದ್- 72,300 ರೂ, ಕೊಲ್ಕತ್ತಾ- 68,000 ರೂ. ಇದೆ. ವಿವಿಧ ನಗರಗಳಲ್ಲಿ ಕೂಡ ಇಂದು ಬೆಳ್ಳಿ ದರ ವ್ಯತ್ಯಾಸವಾಗಿಲ್ಲ.

ಇದನ್ನೂ ಓದಿ: Gold Price Today: 3 ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

Gold Price Today: ಮದುವೆಗೆ ಬಂಗಾರ ಖರೀದಿಸಲು ಯೋಚಿಸಿದ್ದೀರಾ?; ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ